ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Team Udayavani, Apr 1, 2023, 4:26 PM IST

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ಬಂಕಾಪುರ: ಮುನವಳ್ಳಿ ಗ್ರಾಮದ ಸರ್ವೇ ನಂ. 152, 18 ಗುಂಟೆ ಹುಲ್ಲುಗಾವಲು ಪ್ರದೇಶವನ್ನು ಮುನವಳ್ಳಿ ಗ್ರಾಮಸ್ಥರು, ಜನಪ್ರತಿನಿಧಿಗಳ ಗಮನಕ್ಕೆ ತರದೇ ಕಂದಾಯ ಅಧಿಕಾರಿಗಳು, ಬಿಸನಳ್ಳಿ ಗ್ರಾಮದ ಸ್ಮಶಾನಕ್ಕೆ ನೀಡಿರುವುದನ್ನು ವಿರೋಧಿ ಸಿ ಮುನವಳ್ಳಿ ಗ್ರಾಮಸ್ಥರು ಕಂದಾಯ ಅಧಿಕಾರಿಗಳನ್ನು ಗುರುವಾರ ಮಧ್ಯರಾತ್ರಿ ಸುಮಾರು ನಾಲ್ಕು ಗಂಟೆಗಳ ಕಾಲ ಕೂಡಿ ಹಾಕಿ ತೀವ್ರ ಪ್ರತಿಭಟನೆ ನಡೆಸಿದರು.

ಉಪತಹಶೀಲ್ದಾರ್‌ ವಿ.ಎನ್‌.ಕುಲಕರ್ಣಿ, ಆರ್‌ಐ ಶಶಿ ಕೆ., ತಲಾಠಿ ಕೆ.ಎ. ಕಿಲ್ಲೇದಾರ ಅವರನ್ನು ಗ್ರಾಮದೇವಿ ದೇವಸ್ಥಾನದಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮುನವಳ್ಳಿ ಗ್ರಾಮದ 18 ಗುಂಟೆ ಹುಲ್ಲುಗಾವಲು ಪ್ರದೇಶವನ್ನು ಏಕಾಏಕಿ ಬಿಸನಳ್ಳಿ ಗ್ರಾಮದ ಸಾರ್ವಜನಿಕ ಸ್ಮಶಾನ ಎಂದು ಬದಲಾಯಿಸಿ ನಾರಾಯಣಪುರ ಗ್ರಾಮ ಪಂಚಾಯಿತಿನಲ್ಲಿ ನೋಂದಣಿ ಮಾಡುವಂತೆ ಕಂದಾಯ ಅಧಿಕಾರಿಗಳು, ಪಿಡಿಒ ಅವರಿಗೆ ನಿರ್ದೇಶನ ನೀಡಿದ್ದರು.

ಈ ವಿಷಯ ನಾರಾಯಣಪುರ ಗ್ರಾಪಂ ಉಪಾಧ್ಯಕ್ಷ ಗದಿಗಯ್ಯ ಹಿರೇಮಠ ಅವರ ಗಮನಕ್ಕೆ ಬಂದ ತಕ್ಷಣ ಅಧಿಕಾರಿಗಳ ಕ್ರಮ ವಿರೋಧಿಸಿದರು. ಅಲ್ಲದೇ, ಗ್ರಾಮದ ಜನರ ಸಭೆ ನಡೆಸಿದರು. ಸಭೆಯಲ್ಲಿ ಈ ವಿಷಯವನ್ನು ತೀವ್ರವಾಗಿ ಖಂಡಿಸಿದ ಗ್ರಾಮಸ್ಥರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಂದಾಯ ಅಧಿಕಾರಿಗಳನ್ನು ಗುರುವಾರ ರಾತ್ರಿ 8 ಗಂಟೆಗೆ ಮುನವಳ್ಳಿ ಗ್ರಾಮಕ್ಕೆ ಕರೆಸಿ, ಗ್ರಾಮದೇವತೆ ದೇವಸ್ಥಾನದಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಗ್ರಾಮದ ಹಿರಿಯರ ಗಮನಕ್ಕೆ ತರದೇ ಮುನವಳ್ಳಿ ಗ್ರಾಮದ ಆಸ್ತಿಯನ್ನು ಬಿಸನಳ್ಳಿ ಗ್ರಾಮಕ್ಕೆ ವರ್ಗಾಯಿಸಿರುವುದು ಸರಿಯೇ ಎಂದು ಪ್ರಶ್ನಿಸಿದರು.

ಯಾರ ಅನುಮತಿ ಇಲ್ಲದೇ, ಯಾರದೋ ಆಸ್ತಿಯನ್ನು ಇನ್ನಾರಿಗೋ ವರ್ಗಾಯಿಸಲು ನಿವೇನು ಸರ್ವಾಧಿಕಾರಿಗಳೇ ಎಂದು ಅಧಿ ಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಮ್ಮೂರ ಆಸ್ತಿ ನಮಗೇ ಸೇರಬೇಕು. ಇನ್ನಾ ರಿಗೋ ಹಸ್ತಾಂತರ ಮಾಡಿದರೆ ನಾವು ಸುಮ್ಮನಿರುವುದಿಲ್ಲ. ಬಿಸನಳ್ಳಿ ಗ್ರಾಮದ ಸಾರ್ವಜನಿಕ ಸ್ಮಶಾನ ಎಂದು ತಿದ್ದುಪಡಿ ಮಾಡಿರುವ ಉತಾರವನ್ನು ಈ ಕೂಡಲೇ ಬದಲಾಯಿಸಿ ಮುನವಳ್ಳಿ ಗ್ರಾಮದ ಹುಲ್ಲುಗಾವಲು ಪ್ರದೇಶ ಎಂದು ಮೊದಲಿನಂತೆ ತಿದ್ದುಪಡಿ ಮಾಡುವವರೆಗೆ ಇಲ್ಲಿಂದ ನಿಮ್ಮನ್ನು ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದರು.

ವಿಷಯ ಅರಿತು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಪರಶುರಾಮ ಕಟ್ಟಿಮನಿ ನೇತೃತ್ವದ ಪೊಲೀಸರ ತಂಡ, ಪ್ರತಿಭಟನಾಕಾರರು ಹಾಗೂ ಅಧಿಕಾರಿಗಳೊಂದಿಗೆ ಸುಧೀರ್ಘ‌ ಚರ್ಚೆ ನಡೆಸಿದರು. ಆಗ ಸಾರ್ವಜನಿಕರೊಂದಿಗೆ ಮಾತನಾಡಿದ ಉಪತಹಶೀಲ್ದಾರ್‌ ವಿ.ಎನ್‌.ಕುಲಕರ್ಣಿ, ಸರ್ಕಾರದ ಆದೇಶದ ಮೇರೆಗೆ ಸ್ಮಶಾನ ಭೂಮಿ ಇಲ್ಲದೇ ಇರುವ ಬಿಸನಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಮುನವಳ್ಳಿ ಗ್ರಾಮದ 18 ಗುಂಟೆ ಜಾಗೆಯನ್ನು ಬಿಸನಳ್ಳಿ ಗ್ರಾಮದ
ಸ್ಮಶಾನಕ್ಕೆ ಹಸ್ತಾಂತರಿಸಲಾಗಿತ್ತು. ಗ್ರಾಮದ ಜನರ ಗಮನಕ್ಕೆ ತರದೇ ಮುನವಳ್ಳಿ ಗ್ರಾಮದ ಆಸ್ತಿಯನ್ನು ಪರಭಾರೆ ಮಾಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಅಲ್ಲದೇ, ಈ ಹಿಂದಿನಂತೆ ಮುನವಳ್ಳಿ ಗ್ರಾಮದ ಆಸ್ತಿಯನ್ನು ಅದೇ ಗ್ರಾಮಕ್ಕೆ ಬಿಟ್ಟು ಕೊಡಲಾಗುವುದು ಎಂದು ಹೇಳಿದ ನಂತರ ಪ್ರತಿಭಟನೆ ಹಿಂಪಡೆದರು.

ಈ ವೇಳೆ ಎಂ.ಎಸ್‌.ಐ.ಎಲ್‌. ನಿರ್ದೇಶಕ ಶಶಿಧರ ಹೊನ್ನಣ್ಣವರ, ಬಾಪುಗೌಡ್ರ ಪಾಟೀಲ, ವೀರಬಸಪ್ಪ ಬಂಗಿ, ವೀರಪ್ಪ ನಾಗನೂರ, ಮಾಲತೆಶ ಉಪ್ಪಣಸಿ, ಗುರುಪಾದಪ್ಪ ಕಿವುಡನವರ, ಸೋಮನಗೌಡ್ರ ಪಾಟೀಲ, ಪುಟ್ಟಪ್ಪ ಬಳ್ಳಾರಿ, ವಸಂತರಾವ್‌ ಕುಕರ್ಣಿ, ಲಿಂಗನಗೌಡ ಪಾಟೀಲ ಸೇರಿದಂತೆ ಗ್ರಾಮಸ್ಥರು ಇದ್ದರು.

ಶನಿವಾರ ಸಂಜೆಯೊಳಗಾಗಿ ನಾವು ಮಾಡಿದ ಆದೇಶ ಹಿಂಪಡೆದು, ಬಿಸನಳ್ಳಿ ಗ್ರಾಮದ ಸ್ಮಶಾನ ಎಂದು ಬದಲಾಯಿಸಿದ ಉತಾರವನ್ನು ಈ ಹಿಂದಿನಂತೆ ಮುನವಳ್ಳಿ ಗ್ರಾಮದ ಹುಲ್ಲುಗಾವಲು ಎಂದು ತಿದ್ದುಪಡಿ ಮಾಡಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು.
ವೆಂಕಟೇಶ ಕುಲಕರ್ಣಿ, ಉಪತಹಶೀಲ್ದಾರ್‌

2021ರಲ್ಲಿ ಮುನವಳ್ಳಿ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮುನವಳ್ಳಿ ಗ್ರಾಮದ ಯಾವುದೇ ಆಸ್ತಿಯನ್ನು ಪರಭಾರೆ ಮಾಡಬಾರದೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದೆವು. ಅದಲ್ಲದೇ, ಗ್ರಾಪಂನ ಯಾವುದೇ ಠರಾವು ಇಲ್ಲದೇ ಆಸ್ತಿ ಬದಲಾವಣೆ ಮಾಡಿರುವ ಅಧಿಕಾರಿಗಳ ಕ್ರಮ ಸರಿಯಲ್ಲ.
ಗದಿಗಯ್ಯ ಹಿರೇಮಠ, ಗ್ರಾಪಂ ಉಪಾಧ್ಯಕ್ಷರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.