ಬಂಕಾಪುರ: ವರದಾ ನದಿ ನೀರು ಪೂರೈಕೆಗೆ ಚಾಲನೆ
Team Udayavani, Jul 6, 2020, 4:49 PM IST
ಬಂಕಾಪುರ: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ವರದಾ ನದಿಯ ನೀರು ಪೂರೈಕೆ ಯೋಜನೆಗೆ ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ವರದಾ ನದಿಯಿಂದ ಬಂಕಾಪುರ, ಸವಣೂರ, ಶಿಗ್ಗಾವಿ ಪಟ್ಟಣಕ್ಕೆ ಶಾಶವತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಿದ್ದಾಗ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತಂದು ಕುಡಿಯುವ ನೀರು ಪೂರೈಕೆಗೆ ಚಾಲನೆ ನೀಡಿದ್ದರು. ಈ ಯೋಜನೆಯಡಿ ಬಂಕಾಪುರ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಸಲು ಸವಣೂರ ತಾಲೂಕಿನ ಹಲಸೂರ ಹತ್ತಿರದ ವರದಾ ನದಿ ದಡದಲ್ಲಿ ಜಾಕ್ ವೆಲ್ ನಿರ್ಮಿಸಲಾಗಿದೆ. ಸುಮಾರು ಒಂದು ವರ್ಷದಿಂದ ಅಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ಪಾವತಿ ಮಾಡದಿರುವುದರಿಂದ ಈ ಯೋಜನೆ ಸ್ಥಗಿತಗೊಂಡು ಪಟ್ಟಣದ ಜನತೆ ನೀರು ಸಿಗದಾಗಿತ್ತು. ಸಾಕಷ್ಟು ನೀರು ಸಂಗ್ರಹವಿದ್ದರೂ ಸರಿಯಾಗಿ ಸದ್ಭಳಕೆಯಾಗದೇ ಜನತೆ ನೀರಿಗಾಗಿ ಪರದಾಡುವಂತಾಗಿತ್ತು. ಜಾಕ್ವೆಲ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸಮಸ್ಯೆಯನ್ನು ಪುರಸಭೆ ಆಡಳಿತ ಇತ್ತೀಚೆಗೆ ಬಗೆಹರಿಸಿದ ಹಿನ್ನೆಲೆಯಲ್ಲಿ ನೀರು ಪೂರೈಸುವ ಜಾಕ್ವೆಲ್ಗೆ ಪುರಸಭೆ ಮುಖ್ಯಾಧಿಕಾರಿ ಚಾಲನೆ ನೀಡಿದರು.
ಖಾಜಾಮೋದಿನ ಬಸರಿಕಟ್ಟಿ, ನಾರಾಯಣ ಟೋಪಣ್ಣವರ, ಜಗದೀಶ ದೊಡ್ಡಗೌಡ್ರ, ಗುಡ್ಡಪ್ಪ ಹರಿಜನ, ಶಿವು ಕಟ್ಟಿಮನಿ, ದುಂಡಪ್ಪ ಮಾಸನಕಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು