ದೇವಿ ಜಾತ್ರೆ ಬಂದರೆ ಊರೇ ಖಾಲಿ ಖಾಲಿ!

ಐದು ವರ್ಷಕ್ಕೊಮ್ಮೆ ನಡೆಯಲಿರುವ ಗ್ರಾಮದೇವಿ ಜಾತ್ರೆ  ಪೂರ್ವಜರ ಕಾಲದಿಂದಲೂ ಆಚರಣೆಯಲ್ಲಿದೆ "ಹೊರಬೀಡು' ಕಾರ್ಯಕ್ರಮ

Team Udayavani, Feb 13, 2020, 3:14 PM IST

13-February-17

ಬಂಕಾಪುರ: ಹೋತನಹಳ್ಳಿ ಗ್ರಾಮದಲ್ಲಿ ಐದು ವರ್ಷಕ್ಕೊಮ್ಮೆ ನಡೆಯಲಿರುವ ಗ್ರಾಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಹೊರಬೀಡು ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ದೊರೆಯಿತು.

ಪೂರ್ವಜರ ಕಾಲದಿಂದಲೂ ಆಚರಿಸುತ್ತ ಬಂದಿರುವ ಈ ಹೊರಬೀಡು ಸಂಪ್ರದಾಯವನ್ನು ಇಂದಿಗೂ ಹೋತನಹಳ್ಳಿ ಗ್ರಾಮಸ್ಥರು ಮುಂದುವರೆಸಿಕೊಂಡು ಬರುತ್ತಿದ್ದಾರೆ. ಫೆ. 20ರಿಂದ ಮಾ.4 ರ ವರೆಗೆ ನಡೆಯಲಿರುವ ಗ್ರಾಮದೇವಿ ಜಾತ್ರೋತ್ಸವದ ಸಂಪ್ರದಾಯದಂತೆ ಗ್ರಾಮಸ್ಥರು ಮಂಗಳವಾರ ಸೂರ್ಯೋದಯಕ್ಕೂ ಮುನ್ನ ಕುರಿ, ಕೋಳಿ, ಬೆಕ್ಕು, ನಾಯಿ, ಜಾನುವಾರಗಳ ಸಮೇತ ಮನೆಬಿಟ್ಟು ಊರ ಹೊರಗಿನ ಹೊಲ, ಗದ್ದೆಗಳಲ್ಲಿ ಪರಿವಾರ ಕುಟುಂಬ ಸಮೇತ ಬೀಡು ಬಿಟ್ಟರು. ಮನೆ ಬಿಡುವುದಕ್ಕಿಂತ ಪೂರ್ವದಲ್ಲಿ ಗ್ರಾಮಸ್ಥರು, ಪ್ರತಿ ಮನೆಯ ಪಡಶಾಲೆಗಳಲ್ಲಿ ರಂಗೋಲಿ ಹಾಕಿ ದೀಪಬೆಳಗಿಸಿ ಗ್ರಾಮದೇವತೆಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆಗೈದರು. ಕಷ್ಟ, ಕಾರ್ಪಣ್ಯಗಳನ್ನು ದೂರಮಾಡಿ ಸುಖ, ಸಂಪತ್ತು, ಸಮೃದ್ಧಿ, ನೆಮ್ಮದಿ ಜೀವನ ನೀಡುವಂತೆ ಬೇಡಿಕೊಂಡರು.

ನಂತರ ತಮಗೆ ಊಟೋಪಚಾರಕ್ಕೆ ಬೇಕಾದ ಆಹಾರ ಪದಾರ್ಥಗಳು, ಬಟ್ಟೆ, ಹಾಸಿಗೆ, ಮತ್ತಿತರ ಅವಶ್ಯ ವಸ್ತುಗಳ ಸಮೇತ ಮನೆಯಿಂದ ಹೊರನಡೆದು ಹೊಲ, ಗದ್ದೆಗಳಿಗೆ ತೆರಳಿ ಅಲ್ಲಿಯೆ ಬೀಡು ಬಿಟ್ಟು ಸಹ ಭೋಜನ ಮಾಡಿದರು.

ನಂತರ ಹರಟೆ ಹೊಡೆಯುತ್ತ ಹಾಡು, ಹಾಸ್ಯ, ಜೀವನದಲ್ಲಿ ಆಗಿ ಹೋದ ಕಷ್ಟ, ಸುಖಗಳ ಮೇಲಕು ಹಾಕುತ್ತ ಕಾಲ ಕಳೆಯುತ್ತಾರೆ. ಸೂರ್ಯಾಸ್ತದ ನಂತರ ಮನೆಗೆ ತೆರಳಿ ಮನೆಯಲ್ಲಿ ಹಚ್ಚಿಬಂದ ದೀಪವನ್ನು ನೋಡಿ ಆನಂದಿಸುತ್ತಾರೆ. ದೀಪ ಊರಿಯುತ್ತಿದ್ದರೆ ಶುಭ ಶಕುನ, ಆಕಸ್ಮಿಕವಾಗಿ ದೀಪ ಆರಿದ್ದರೆ ಅಶುಭ ಶಕುನ ಎಂಬ ಸಂಪ್ರದಾಯ ಜನರ ಮನದಲ್ಲಿ ಬೇರೂರಿದೆ.

ಹೊರಬೀಡು ಸಂದರ್ಭದಲ್ಲಿ ಯಾರು ಕೂಡಾ ಗ್ರಾಮದ ಗಡಿಯನ್ನು ದಾಟಿ ಊರ ಒಳಗೆ ಹೋಗುವಂತಿಲ್ಲ. ಆಕಸ್ಮಾತ ಗಡಿದಾಟಿ ಊರೊಳಗೆ ಪ್ರವೇಶ ಮಾಡಿದರೆ ಅಶುಭ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಬೆಳೆದು ಬಂದಿದೆ.

ಇದಕ್ಕನುಗುಣವಾಗಿ ಮಂಗಳವಾರ ಕೆಎಸ್‌ಆರ್‌ ಟಿಸಿ ಬಸ್ಸೊಂದು ಊರ ಒಳಗೆ ಪ್ರವೇಶಿಸಿ ಕೆಟ್ಟು ನಿಂತ ಪರಿಣಾಮ ಗ್ರಾಮಸ್ಥರ ನಂಬಿಕೆಗೆ ಮತ್ತಷ್ಟು ಪುಷ್ಠಿ ನೀಡಿದಂತಾಯಿತು. ವಿಷಯ ಅರಿತ ಪ್ರಯಾಣಿಕರು ಲಗು, ಬಗೆಯಿಂದ ಬಸ್‌ ಇಳಿದು ಊರಗಡಿದಾಟಿ ಹೊರ ಬಂದು ಬೇರೆ ವಾಹನದ ಮೂಲಕ ತಮ್ಮ ಗ್ರಾಮ ಸೇರಿಕೊಂಡರು. ಫೆ. 20 ರಂದು ಶ್ರೀದೇವಿಗೆ ಗಟ್ಟ ಹಾಕಿದಾಗಿನಿಂದ ಹಿಡಿದು ಫೆ. 25 ರ ವರೆಗೆ ಜಾತ್ರೋತ್ಸವಕ್ಕೆ ಚಾಲನೆ ದೊರೆಯುವವರೆಗೆ ಗ್ರಾಮದಲ್ಲಿ ಯಾರು ಕುಟ್ಟುವುದು, ಬೀಸುವುದು, ಹೊಲದಲ್ಲಿ ಗಳೆ ಹೊಡೆಯುವುದು ಮಾಡುವಂತಿಲ್ಲ. ಗ್ರಾಮಸ್ಥರು ಬೇರೆ ಊರುಗಳಲ್ಲಿ ರಾತ್ರಿ ಕಳೆಯುವಂತಿಲ್ಲ ಎಂಬ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ.

ಈ ಹಿಂದೆ ಹೊರಬೀಡು ಸಂದರ್ಭದಲ್ಲಿ ಗಡಿದಾಟಿ ಬಂದರೆ ಏನಾಗುತ್ತದೆ ವ್ಯಕ್ತಿಯೊಬ್ಬ ಊರೊಳಗೆ ಬಂದಿದ್ದ. ನಂತರ ಆತನ ಮನೆಯಲ್ಲಿದ್ದ ಗೋವಿನ ಜೋಳದ ಬಣವೆ ಸುಟ್ಟಿತ್ತು. ಮರೆತು ಹಿತ್ತಲಿನಲ್ಲಿ ಬಿಟ್ಟುಬಂದ ಕೋಳಿಗಳೂ ಸಾವನ್ನಪ್ಪಿದ್ದವು.
 ಹನಮಂತ ಯು.ವಿ.,
ಗ್ರಾಮಸ್ಥ

ಸ್ಥಳೀಯ ಶಾಲೆಗೆ ರಜೆ ಘೋಷಿಸಲಾಗಿದ್ದು, ಬೇರೆ ಊರುಗಳಿಗೆ ತೆರಳುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸೂರ್ಯೋದಯಕ್ಕೂ ಮುನ್ನ ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಿ ಕಳುಹಿಸಿಕೊಡಲಾಗಿದೆ.
ರಮೇಶ ಬೆಳವತ್ತಿ,
ಗ್ರಾಮದ ಮುಖಂಡ

„ಸದಾಶಿವ ಹಿರೇಮಠ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.