ಶಾಲೆಗಳು ಚಾರಿತ್ರ್ಯ ರೂಪಿಸುವ ಕೇಂದ್ರ


Team Udayavani, Jan 27, 2019, 6:38 AM IST

basav.jpg

ಬಂಕಾಪುರ: ಶಾಲೆಗಳು ಮನುಷ್ಯನ ಚಾರಿತ್ರ್ಯ ರೂಪಿಸುವ ಕೇಂದ್ರಗಳಾಗಿವೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.ಸದಾಶಿವಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 14ನೇ ದಶಮಾನೋತ್ಸವ ಸಮಾರಂಭ, ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಧಕನಿಗೆ ಸಾವು ಅಂತ್ಯವಾಗಬಾರದು. ನಾವು ಸತ್ತ ನಂತರವೂ ನಮ್ಮ ಜೀವಿತಾ ಅವಧಿಯಲ್ಲಿ ಮಾಡಿರುವ ಸಾಧನೆ ಶಾಶ್ವತವಾಗಿರಬೇಕು ಎಂದು ಹೇಳಿದರು.

ಸಾಧನೆ ಎಂಬುದು ಸಾಧಕನ ಸೊತ್ತೇ ವಿನಃ ಸೋಮಾರಿಗಳ ಸೊತ್ತಲ್ಲ. ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಅಧ್ಯಯನ ಮಾಡುವ ಮೂಲಕ ಸಾಧಕರಾಗಿ ನೀವು ಕಲೆತ ಶಾಲೆ ಕೀರ್ತಿ ಪತಾಕೆ ಬಾನೆತ್ತರಕೆ ಕೊಂಡೊಯ್ಯುವಂತವರಾಗಿ ಎಂದು ಕರೆ ನೀಡಿದರು.

ಬೆಂಗಳೂರಿನ ರೋಟರಿ ಕ್ಲಬ್‌ ಅಧ್ಯಕ್ಷ ನವೀನ ಕೊಳಾವರ ಮಾತನಾಡಿ, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಶರಣಬಸಪ್ಪನವರು ಈ ಶಾಲೆಯ ಮೇಲಿರಿಸಿದ ಕಾಳಜಿ ಗುರುತಿಸಿ ಈ ಸರ್ಕಾರಿ ಶಾಲೆಗೆ ನಮ್ಮ ಕ್ಲಬ್‌ ವತಿಯಿಂದ ಸ್ಮಾರ್ಟ್‌ಕ್ಲಾಸ್‌ ಸೌಲಭ್ಯ ಕೊಡುಗೆಯಾಗಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಮಕ್ಕಳಿಗೆ ಡೆಸ್ಕ್ ಹಾಗೂ ಬ್ಯಾಂಡ್‌ ಸೆಟ್ನ್ನು ನೀಡುವುದಾಗಿ ಹೇಳಿದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶರಣಬಸಪ್ಪ ಕಿವುಡನವರ ಮಾತನಾಡಿ, ನಾನು ಕೆಡಿಪಿ ಸದಸ್ಯನಾಗಿ ಸಲ್ಲಿಸಿದ ಸೇವೆಗಿಂತ ಈ ಶಾಲೆಯ ಹಳೆಯ ವಿದ್ಯಾರ್ಥಿಯಾಗಿ, ಎಸ್‌ಡಿಎಂಸಿ ಅಧ್ಯಕ್ಷನಾಗಿ ಮಾಡಿದ ಅಭಿವೃದ್ಧಿ ಕೆಲಸ ನನಗೆ ಕಾಯಕ ತೃಪ್ತಿ ತಂದಿದೆ. ಬರುವ ದಿನಗಳಲ್ಲಿ ಈ ಶಾಲೆಯನ್ನು ರಾಜ್ಯದಲ್ಲಿಯೆ ಮಾದರಿಯನ್ನಾಗಿ ಮಾಡುವ ಗುರಿ ಇದೆ ಎಂದು ಹೇಳಿದರು.

ಗದಗ ಪುಣ್ಯಾಶ್ರಮದ ಪಂಡಿತ ಶ್ರೀ ಕಲ್ಲಿನಾಥ ಶಾಸ್ತ್ರಿಗಳು ಮಾತನಾಡಿ, ಅಧ್ಯಯನ ವಿಲ್ಲದೆ ವಿದ್ಯೆ ಸಿದ್ಧಿಯಾಗಲಾರದು. ಮರಳು, ತಾಳೆಗರಿ, ಬಿದಿರಿನಕಡ್ಡಿ, ನವಿಲುಗರಿ, ಸೀಸ್‌ ಪೆನ್ಸಿಲ್‌, ಪಾಟಿ, ಪೆನ್ಸಿಲ್‌ ನಿಂದ ಪ್ರಾರಂಭವಾದ ಶಿಕ್ಷಣ ಇಗ ಅತ್ಯಾಧುನಿಕ ತಂತ್ರಜ್ಞಾನದ ಕಂಪ್ಯೂಟರ್‌ ವರೆಗೆ ಬಂದು ತಲುಪಿದೆ. ಅಂಧರಾದರೂ ಶ್ರೀ ಪುಟ್ಟರಾಜ ಗವಾಯಿಗಳು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ಮಿನುಗುತಾರೆಯಾಗಿ ಮೆರೆದರೆ, ತುಮಕೂರಿನ ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮಿಗಳು ಬಡ ಮಕ್ಕಳಿಗೆ ಉಚಿತವಾಗಿ ವಿದ್ಯೆ, ಅನ್ನದಾನ ಮಾಡಿ ಶೈಕ್ಷಣಿಕ ಕ್ರಾಂತಿ ಮೊಳಗಿಸಿದವರು ಎಂದರು.

ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಮಾತನಾಡಿ, ಇಂದಿನ ಮಕ್ಕಳಿಗೆ ಕೇವಲ ಪಠ್ಯ, ಪುಸ್ತಕದ ವಿದ್ಯೆ ನೀಡದೆ ಬದುಕಿಗೆ ಬೇಕಾದ ಮೌಲ್ಯಗಳನ್ನು ನೀಡುವ ಕಾರ್ಯವಾಗಬೇಕಿದೆ. ಮಕ್ಕಳ ಮೇಲೆ ಶಿಕ್ಷಕರಿಗೆ ಹಕ್ಕು ಇದ್ದಾಗ ಮಕ್ಕಳು ವಿಕಾಸ ಹೊಂದಲು ಸಾಧ್ಯವಿದೆ. ಹಿಂದಿನ ಕಾಲದಲ್ಲಿ ಛಡಿ.. ಛಂ..ಛಂ.. ವಿದ್ಯಾ ಘಂ..ಘಂ.. ಎಂದು ಹೇಳಲಾಗುತ್ತಿತ್ತು, ಆದರೆ ಇಗ ಶಿಕ್ಷಕರು ಛಡಿ ಹಿಡಿದುಕೊಳ್ಳುವುದೇ ಅಪರಾಧವಾಗಿರುವುದು ವಿಷಾದ ಸಂಗತಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು. ಶಿರಹಟ್ಟಿ ಸಂಸ್ಥಾನಮಠದ ಜ| ಫಕೀರಸಿದ್ಧರಾಮ ಸ್ವಾಮೀಜಿ ಸಭೆಯ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.

ಚಂದಾಪುರ ವೀರಕ್ತಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಶರಣಬಸವೇಶ್ವರ ದಾಸೋಹ ಮಠದ ಶ್ರೀ ಶಿವದೇವ ಶರಣರು, ನಿವೃತ್ತ ಎಇ ಸುಭಾಷಚಂದ್ರ ವಿಶ್ವಬ್ರಾಹ್ಮಣ, ನಿವೃತ್ತ ಸಿಡಿಪಿಒ ಬಿ.ಆರ್‌. ಶೇಟ್ಟರ, ಗ್ರಾಪಂ ಅಧ್ಯಕ್ಷ ವೀರಣ್ಣ ನಾಗನೂರ, ರಮೇಶ ದುಗ್ಗತ್ತಿ, ಶೋಭಾ ಗಂಜಿಗಟ್ಟಿ, ಯಲ್ಲಪ್ಪ ನರಗುಂದ, ಉಮೇಶ ಅಂಗಡಿ, ಶಶಿಧರ ಹೊನ್ನಣ್ಣವರ, ಲಿಂಗರಾಜ ಹಳವಳ್ಳಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.