ಬ್ಯಾಟರಿ ಶಾರ್ಟ್ ಸರ್ಕ್ನೂಟ್; ಕಾರ್ ಭಸ್ಮ
Team Udayavani, Aug 9, 2019, 12:28 PM IST
ರಾಣಿಬೆನ್ನೂರ: ಪೆಟ್ರೋಲ್ ಹಾಕಿಸುವಾಗ ಕಾರಿನ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ನೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರವೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ತಾಲೂಕಿನ ಕಮದೋಡ ಬಳಿ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಇಂಡಿಯನ್ ಪೆಟ್ರೋಲ್ ಬಂಕ್ನಲ್ಲಿ ಗುರುವಾರ ನಡೆದಿದೆ.
ಸೈಯದ್ ಹುಸೇನ್ಸಾಬ್ ಕಾರಿಗನೂರು ಎಂಬುವವರಿಗೆ ಸೇರಿದ್ದ ಕಾರು ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಹಲಗೇರಿ ಠಾಣೆ ಪೊಲೀಸರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.