ಬರಹಗಾರರಿಗೆ ಪ್ರೇರಣೆ ನೀಡುವಂತವರಾಗಿ

ಕೃತಿಯಲ್ಲಿನ‌ ವೈಚಾರಿಕತೆ-ಮೌಡ್ಯ ವಿರೋಧಿ ಧೋರಣೆ ಸ್ವಾಗತಾರ್ಹ: ಬಸವಶಾಂತಲಿಂಗ ಶ್ರೀ

Team Udayavani, May 7, 2019, 12:47 PM IST

haveri-tdy-1..

ಹಾವೇರಿ: ಶ್ರೀದ್ವಯರು, ಗಣ್ಯರು, ಸಾಹಿತಿಗಳು ಕೃತಿ ಲೋಕಾರ್ಪಣೆಗೊಳಿಸಿದರು.

ಹಾವೇರಿ: ಸಮಕಾಲೀನ ಸಮಸ್ಯೆಗಳನ್ನು ಅರ್ಥೈಸಿ ಅವುಗಳಿಗೆ ತಕ್ಷಣದ ಪ್ರತಿಕ್ರಿಯೆ ನೀಡಿ ಚರ್ಚೆಗೊಡ್ಡುವ ಶಕ್ತಿ ಅಂಕಣ ಬರಹಗಳಿಗಿದೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ನುಡಿದರು.

ಇಲ್ಲಿಯ ಹೊಸಮಠದ ಆವರಣದಲ್ಲಿ ನಡೆದ ಜಿಲ್ಲೆಯ ಆರು ಯುವ ಬರಹಗಾರರು ಬರೆದ ‘ಆರಂಕಣಕಾರರು’ ಮತ್ತು ಕವಯತ್ರಿ ಗಾಯತ್ರಿ ರವಿಯವರ ‘ಕುರುಡನಿಗೆ ಕನ್ನಡಿ’ ಎಂಬೆರಡು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಾವೇರಿ ನೆಲದ ಆರು ಯುವ ಬರಹಗಾರರ ಸಂಪಾದಿತ ‘ಆರಂಕಣಕಾರರು’ ಕೃತಿಯಲ್ಲಿ ವೈಚಾರಿಕತೆ ಮತ್ತು ಮೌಡ್ಯ ವಿರೋಧಿ ಧೋರಣೆಗಳಿರುವುದು ಸ್ವಾಗತಾರ್ಹ. ಇದೊಂದು ಸಾಮಾಜಿಕ ಜಾಗೃತಿಯ ಕೆಲಸ ಎಂದರು.

ತಮ್ಮ ಜೀವನದಲ್ಲಿ ಕಂಡುಂಡ ಸಹಜ ಅನುಭವಗಳನ್ನು ‘ಕುರುಡನಿಗೆ ಕನ್ನಡಿ’ ಕಾವ್ಯ ಸಂಕಲನದಲ್ಲಿ ಬಹಳ ಸೂಕ್ಷ ್ಮವಾಗಿ ಗಾಯತ್ರಿ ರವಿ ಚಿತ್ರಿಸಿದ್ದಾರೆ. ಇದು ಹೊಸ ಕವಿಗಳಿಗೆ ಕಾವ್ಯ ಪ್ರೀತಿ ಬೆಳೆಯಲು ಪ್ರೇರಣಾದಾಯಕವಾಗಿದೆ ಎಂದರು.

ಸಾನ್ನಿಧ್ಯವಹಿಸಿದ್ದ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಬರಹಗಾರರಾಗಲು ಸಾಧ್ಯವಾಗದಿದ್ದರೆ ಬರಹಗಾರರಿಗೆ ಪ್ರೇರಣೆ ನೀಡುವಂತವರಾಗಬೇಕು. ಈ ಎರಡೂ ಕೆಲಸಗಳು ‘ಆರಂಕಣಕಾರರು’ ಮತ್ತು ‘ಕುರುಡನಿಗೆ ಕನ್ನಡಿ’ ಪುಸ್ತಕಗಳ ಸಂದರ್ಭದಲ್ಲಿ ಆಗಿರುವುದು ಶ್ಲಾಘನೀಯ. ಹಲವು ಹೊಸ ಬರಹಗಾರರಿಗೆ ನೆಲೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕವಿಪ್ರ ನೌಕರರ ಸಂಘದ ನಾಯಕರಾದ ವಿಜಯಕುಮಾರ ಮುದಕಣ್ಣನವರ ಮಾತನಾಡಿ, ಹೊಸ ಕಾಲದಲ್ಲಿ ಪುಸ್ತಕದ ಸ್ವರೂಪ ಮತ್ತು ಅಸ್ತಿತ್ವ ತುಂಬ ಬೇರೆಯಾಗಿದೆ. ಕ್ಷಣಾರ್ಧದಲ್ಲಿ ನೂರಾರು ಪುಟಗಳ ಪುಸ್ತಕಗಳನ್ನು ಅಂತರ್ಜಾಲದಲ್ಲಿ ಮುಳಗಿಸಿ ಬಿಡುವ ಈ ದಿನಗಳಲ್ಲಿ ಪುಸ್ತಕಗಳು ಉಳಿಯಬೇಕು. ಪುಸ್ತಕದ ಓದು ಮಾತ್ರ ಸುಖ ಕೊಡಬಲ್ಲವು. ಪುಸ್ತಕ ಸಂಸ್ಕೃತಿ ನಾಶವಾಗಬಾರದು ಎಂದರು.

‘ಆರಂಕಣಕಾರರು’ ಕೃತಿ ಪರಿಚಯಿಸಿದ ಲೇಖಕಿ ರೇಖಾ ಭೈರಕ್ಕನವರ, ಸರಳ ಭಾಷೆ, ನಿತ್ಯದ ಜ್ವಲಂತ ಅನುಭವಗಳನ್ನು ಕಟ್ಟಿಕೊಡವ ಅಂಕಣ ಬರಹ ತುಂಬ ಕಠಿಣವಾದ ಕೆಲಸ. ಆದರೆ, ಹಾವೇರಿ ಆರು ಹೊಸ ಪ್ರತಿಭೆಗಳು ವಿಮರ್ಶೆ, ಲಲಿತ ಪ್ರಬಂಧ ಹಾಗೂ ಸಾಮಾಜಿಕ ಸಮಸ್ಯೆಗಳ ಬರೆದ ‘ಆರಂಕಣಕಾರರು’ ಓದಿಗೆ ಸೆಳೆಯುವ ಕೃತಿ ಎಂದರು.

ಲೇಖಕಿ ಗಾಯತ್ರಿ ರವಿ ಅವರ ‘ಕುರುಡನಿಗೆ ಕನ್ನಡಿ’ ಸಂಕಲನ ಪರಿಚಯ ಮಾಡಿಕೊಟ್ಟ ಪ್ರತಿಭಾವಂತ ಕವಿ ಶಿಗ್ಗಾವಿಯ ರಂಜಾನ್‌ ಕಿಲ್ಲೇದಾರ್‌, ಮಾತು ಮತ್ತು ಮೌನಗಳ ಮೌಲ್ಯಗೊತ್ತಿರುವ ಗಾಯತ್ರಿ ರವಿಯವರು ಅತ್ಯಂತ ಸೂಕ್ಷ ್ಮಗ್ರಾಹಿಯಾಗಿ ಕಾವ್ಯ ರಚಿಸಿದ್ದು ಹಾವೇರಿ ನೆಲದ ಹೆಮ್ಮೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ‘ಆರಂಕಣಕಾರರು’ ಕೃತಿಯೊಳಗಿನ ಲೇಖಕರಾದ ವಾಗೀಶ ಬ. ಹೂಗಾರ, ಜಿ.ಎಂ. ಓಂಕಾರಣ್ಣನವರ, ಚಿನ್ನು ಎಸ. ರಾಗಿ (ಸವಣೂರು), ಗಾಯತ್ರಿ ರವಿ, ಲತಾ ರಮೇಶ ವಾಲಿ (ಸವಣೂರು) ಹಾಗೂ ರಾಜೇಶ್ವರಿ ರವಿ ಸಾರಂಗಮಠ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಗಣ್ಯರಾದ ಡಾ| ಜೆ.ಜಿ. ದೇವಧರ, ಮಾಧುರಿ, ನಾಗೇಂದ್ರ ಕಟಕೋಳ, ಎನ್‌.ಕೆ. ಮರೋಳ, ಕರಿಯಪ್ಪ ಹಂಚಿನಮನಿ, ವೈ.ಬಿ. ಆಲದಕಟ್ಟಿ, ಗಂಗಾಧರ ನಂದಿ, ಮಾರುತಿ ಶಿಡ್ಲಾಪೂರ, ದಾಕ್ಷಾಯಿಣಿ ಗಾಣಗೇರ, ಲಲಿತಕ್ಕ ಹೊರಡಿ, ರುದ್ರಪ್ಪ ಜಾಬೀನ್‌, ಸಿ.ಎ. ಕೂಡಲಮಠ, ಶಶಿಕಲಾ ಅಕ್ಕಿ, ಮುಂತಾದವರು ಭಾಗವಹಿಸಿದ್ದರು.

ವೈಷ್ಣವಿ ಪ್ರಾರ್ಥನೆ ಹಾಡಿದಳು. ನಾಗರಾಜ ನಡುವಿನಮಠ ಸ್ವಾಗತಿಸಿದರು. ಎಸ್‌.ಆರ್‌. ಹಿರೇಮಠ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಲ್ಲಕಾರ್ಜುನ ಹಿಂಚಿಗೇರಿ ಕಾರ್ಯಕ್ರಮ ನಿರೂಪಿಸಿದರು. ಪೃಥ್ವಿರಾಜ ಬೆಟಗೇರಿಯವರು ವಂದಿಸಿದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.