ಉತ್ತಮ ಮುಂಗಾರು; ಕೃಷಿ ಚಟುವಟಿಕೆ ಶುರು


Team Udayavani, Jun 8, 2021, 2:52 PM IST

ಉತ್ತಮ ಮುಂಗಾರು; ಕೃಷಿ ಚಟುವಟಿಕೆ ಶುರು

ರಾಣಿಬೆನ್ನೂರ: ತಾಲೂಕಿನಾದ್ಯಂತ ಮುಂಗಾರು ಮಳೆ ಉತ್ತಮವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.

ರೈತರು ಹೊಲ ಹಸನು ಮಾಡಿ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ತಾಲೂಕಿನಲ್ಲಿ ಮೇ ತಿಂಗಳ ವಾಡಿಕೆ ಮಳೆ 135 ಮಿಮೀ ಇದ್ದು, ಜೂ.7ರವರೆಗೆ144 ಮಿಮೀ ಮಳೆಯಾಗಿದೆ. ಈ ಮಳೆ ಭೂಮಿ ಸಿದ್ಧಪಡಿಸಲು ಹಾಗೂ ಬಿತ್ತನೆಗೆ ಪೂರಕವಾಗಿದೆ. ತಾಲೂಕಿನಲ್ಲಿ 90,475 ಹೆಕ್ಟೇರ್‌ ಭೌಗೋಳಿಕ ಕ್ಷೇತ್ರಹೊಂದಿದ್ದು, ಇದರಲ್ಲಿ 68,900 ಹೆಕ್ಟೇರ್‌ ಸಾಗುವಳಿ ಕ್ಷೇತ್ರ ಇರುತ್ತದೆ. ತಾಲೂಕಿನಲ್ಲಿ 53,391 ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, ಭತ್ತ 6,250 ಹೆಕ್ಟೇರ್‌, ಗೋವಿನಜೋಳ39,000 ಹೆಕ್ಟೇರ್‌, ಹತ್ತಿ 970 ಹೆಕ್ಟೇರ್‌, ಶೇಂಗಾ 900 ಹೆಕ್ಟೇರ್‌, ಹೆಸರು 200 ಹೆಕ್ಟೇರ್‌, ಸೂರ್ಯಕಾಂತಿ 115 ಹೆಕ್ಟೇರ್‌, ತೊಗರಿ 2,575 ಹೆಕ್ಟೇರ್‌, ಜೋಳ 400 ಹೆಕ್ಟೇರ್‌, ರಾಗಿ 50 ಹೆಕ್ಟೇರ್‌, ತೃಣಧಾನ್ಯ 100 ಹೆಕ್ಟೇರ್‌, ಇತರೆ ಬೆಳೆಗಳು 1181 ಹೆಕ್ಟೇರ್‌, ಕಬ್ಬುಹೊಸದು 200 ಹೆಕ್ಟೇರ್‌, ಕುಳೆ ಕಬ್ಬು 1450 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಗೆ ಗುರಿ ಹೊಂದಲಾಗಿದೆ.

ಈರುಳ್ಳಿ 4200 ಹೆಕ್ಟೇರ್‌, ಬೆಳ್ಳುಳ್ಳಿ 1250 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಲಾಗಿದೆ. ಹಾವೇರಿ ಜಿಲ್ಲೆ ದೇವಿ ಹೊಸೂರು ತೋಟಗಾರಿಕೆ ವಿಸ್ತರಣಾ ಕೇಂದ್ರದಲ್ಲಿ ಬೆಳ್ಳುಳ್ಳಿ ಬೀಜ ದರ ಪ್ರತಿ ಕೆಜಿಗೆ 100 ರೂ. ಇದೆ ಎಂದು ತೋಟಗಾರಿಕೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ “ಉದಯವಾಣಿ’ಗೆ ತಿಳಿಸಿದ್ದಾರೆ.

ಈರುಳ್ಳಿ, ಬೆಳ್ಳುಳ್ಳಿ, ಹೈಬ್ರೀಡ್‌ ಜೋಳ, ಹತ್ತಿ, ಶೇಂಗಾ, ಸೋಯಾಬೀನ್‌ ಸೇರಿದಂತೆ ಇತರೆ ತೃಣ ಧಾನ್ಯಗಳ ಬಿತ್ತನೆಗೆ ರಂಟೆ ಸಾಲು ಬಿಡಲು ರೈತರು ಮುಂದಾಗಿದ್ದಾರೆ. ಕೃಷಿ ಇಲಾಖೆಯಿಂದ ಮೇಡ್ಲೆರಿ, ಕುಪ್ಪೇಲೂರು, ರಾಣಿಬೆನ್ನೂರು ಹೋಬಳಿಯ ರೈತ ಸಂಪರ್ಕ ಕೇಂದ್ರಗಳು, ಐದು ಮಾರಾಟ ಮಳಿಗೆಗಳಲ್ಲಿ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ನಗರದ ಎಪಿಎಂಸಿ ಆವರಣದಲ್ಲಿ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗುತ್ತಿದೆ.

ರೈತರು ಕೋವಿಡ್‌ ನಿಯಮಗಳನ್ನು ಪಾಲಿಸುವ ಮೂಲಕ ಬಿತ್ತನೆ ಬೀಜ ಖರೀದಿಸಬೇಕು. ಮುಗಿ ಬೀಳಬಾರದೆಂದು ರೈತರಿಗೆ ಕೃಷಿ ಅಧಿಕಾರಿಗಳು ಸೂಚನೆ ನೀಡಿದ್ದು, ಯೂರಿಯಾ 10,000 ಟನ್‌, ಡಿಎಪಿ 4,353 ಟನ್‌, ಎಂಒಪಿ 1092 ಮೆಟ್ರಿಕ್‌ ಟನ್‌ ದಾಸ್ತಾನು ಇದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಗೋವಿನಜೋಳ ಮತ್ತು ಹತ್ತಿ, ಈರುಳ್ಳಿ ಉತ್ತಮ ಬೆಳೆ ಬಂದರೂ ಸೂಕ್ತ ಬೆಲೆ ಸಿಗಲಿಲ್ಲ.

ಹೆಚ್ಚಿನ ಮಳೆಗೆ ಈರುಳ್ಳಿ-ಬೆಳ್ಳುಳ್ಳಿ ಹೊಲದಲ್ಲಿಯೇ ಕೊಳೆತು ಹೋಯಿತು. ದರ ಕೂಡ ಸಿಗಲಿಲ್ಲ. ಲಾಕ್‌ಡೌನ್‌ನಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯಿತು. ಇದರಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಯಿತು ಎನ್ನುತ್ತಾರೆ ತಾಲೂಕಿನ ಮಾಕನೂರು ಗ್ರಾಮದ ರೈತ ಈರಣ್ಣ ಹಲಗೇರಿ ತಿಳಿಸಿದರು.

ಹಾವೇರಿಯ ಫೆಡರೇಷನ್‌ನಲ್ಲಿ ಗೊಬ್ಬರ ಸಾಕಷ್ಟು ದಾಸ್ತಾನು ಇದೆ. ತಾಲೂಕಿಗೆ 18,900 ಮೆಟ್ರಿಕ್‌ ಟನ್‌ ಗೊಬ್ಬರ ಬೇಡಿಕೆ ಇದೆ.ಕೃಷಿ ಪರಿಕರ ಮಾರಾಟಗಾರರು ಎಂಆರ್‌ಪಿ ದರದಲ್ಲಿ ಗೊಬ್ಬರ ಮಾರಾಟ ಮಾಡಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.-ಎಚ್‌.ಬಿ. ಗೌಡಪ್ಪಳವರ, ಸಹಾಯಕ ಕೃಷಿ ನಿರ್ದೇಶಕ

 

-ಮಂಜುನಾಥ .ಎಚ್‌.ಕುಂಬಳೂರ

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.