BJP; ಹಾವೇರಿ ಬಿಜೆಪಿ ಕಚೇರಿಗೆ ಬೊಮ್ಮಾಯಿ ಆಗಮಿಸುತ್ತಿದಂತೆ ಕೋಲಾಹಲ!
ಕಾರ್ಯಕ್ರಮ ಮೊಟಕುಗೊಳಿಸಿ ಹೊರಟ ಘೋಷಿತ ಅಭ್ಯರ್ಥಿ, ಮಾಜಿ ಸಿಎಂ
Team Udayavani, Mar 15, 2024, 7:32 PM IST
ಹಾವೇರಿ: ಮಾಜಿ ಸಿಎಂ, ಶಾಸಕ, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದಂತೆ ಗದ್ದಲ ಗಲಾಟೆ ನಡೆದ ಘಟನೆ ಶುಕ್ರವಾರ ನಡೆದಿದೆ.
ಕಚೇರಿಗೆ ಬೊಮ್ಮಾಯಿ ಅವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರ ಹೈ ಡ್ರಾಮಾ ನಡೆಸಿದ್ದಾರೆ.ಹಾವೇರಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಅವರನ್ನು ಎಳೆದಾಡಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಗ್ರಾಮೀಣ ಭಾಗದ ಅಧ್ಯಕ್ಷರನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ನಗರ ಕಾರ್ಯಕರ್ತರನ್ನ ಗ್ರಾಮೀಣ ಭಾಗದ ಅಧ್ಯಕ್ಷರಾಗಿ ಮಾಡಿದ್ದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ.
ಈ ವೇಳೆ ಬೊಮ್ಮಾಯಿ ಅವರು ಎಲ್ಲ ಸರಿ ಮಾಡುತ್ತೇನೆ, ಕಾರ್ಯಕರ್ತರು ಒಗಟ್ಟು ಪ್ರದರ್ಶಿಸಿ. ಚುನಾವಣೆ ಹತ್ತಿರ ಇದೆ ಗಲಾಟೆ ಸರಿಯಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿ ಕಾರ್ಯಕ್ರಮ ಮೊಟಕುಗೊಳಿಸಿ ಕಚೇರಿಯಿಂದ ಹೊರನಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ