ರಾಣಿಬೆನ್ನೂರಲ್ಲೂ ಬಿಜೆಪಿಗೆ ಬಂಡಾಯ ಬಿಸಿ


Team Udayavani, Nov 16, 2019, 1:22 PM IST

hv-tdy-2

ಹಾವೇರಿ: ರಾಣಿಬೆನ್ನೂರು ವಿಧಾನಸಭೆ ಕ್ಷೇತ್ರಕ್ಕೆ ಬಿಜೆಪಿ ಶುಕ್ರವಾರ ಅಭ್ಯರ್ಥಿಯನ್ನು ಘೋಷಿಸುವ ಮೂಲಕ ಟಿಕೆಟ್‌ ಗೊಂದಲಕ್ಕೆ ತೆರೆ ಎಳೆದಿದೆ. ಆದರೆ, ಅನರ್ಹ ಶಾಸಕ ಆರ್‌. ಶಂಕರ್‌ ಹಾಗೂ ಇತರ ಟಿಕೆಟ್‌ ಆಕಾಂಕ್ಷಿಗಳ ಅಸಮಾಧಾನ ಮುಂದುವರಿದಿದೆ.

ರಾಣಿಬೆನ್ನೂರು ವಿಧಾನಸಭೆ ಕ್ಷೇತ್ರದ ಟಿಕೆಟ್‌ಗಾಗಿ ಸ್ಥಳೀಯವಾಗಿ ಅಷ್ಟೇ ಅಲ್ಲ ರಾಜ್ಯದ ಬೇರೆ ಭಾಗದವರಿಂದಲೂ ಭಾರಿ ಪೈಪೋಟಿ ಏರ್ಪಟ್ಟಿತ್ತು. ಕೊನೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿ ಎಂಬಂತೆ ಶುಕ್ರವಾರ ಅರುಣಕುಮಾರ ಪೂಜಾರ ಅವರಿಗೆ ಟಿಕೆಟ್‌ ಘೋಷಿಸಿದೆ. ಬಿಜೆಪಿಯ ಈ ನಿರ್ಧಾರಕ್ಕೆ ಸ್ಥಳೀಯವಾಗಿ ಕೆಲ ಮುಖಂಡರಿಂದ ವಿರೋಧ ವ್ಯಕ್ತವಾಗಿದ್ದು, ಈ ವಿರೋಧ ಶಮನಗೊಳಿಸುವ ಯತ್ನವೂ ಮುಂದುವರಿದಿದೆ. ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಗಳಲ್ಲಿ ಈಶ್ವರಪ್ಪ ಮಗ ಕಾಂತೇಶ, ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕೂಡ ಇದ್ದರು. ಇವರಲ್ಲಿ ಯಾರೊಬ್ಬರಿಗೆ ಟಿಕೆಟ್‌ ನೀಡಿದರೂ ಅದು ಪಕ್ಷದ ಉನ್ನತ ಮಟ್ಟದ ನಾಯಕರ ನಡುವಿನ ತಿಕ್ಕಾಟಕ್ಕೆ ನಾಂದಿಯಾಗುತ್ತದೆ ಹಾಗೂ ಇದು ಚುನಾವಣೆಯಲ್ಲಿ ಪಕ್ಷದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಘಟಾನುಘಟಿಗಳ ಪುತ್ರರಿಗೆ ಟಿಕೆಟ್‌ ನೀಡದಿರಲು ಪಕ್ಷ ನಿರ್ಧರಿಸಿತು. ಜತೆಗೆ ಸ್ಥಳೀಯರಿಗೆ ಟಿಕೆಟ್‌ ನೀಡುವುದು ಸೂಕ್ತ

ಎಂಬ ತೀರ್ಮಾನಕ್ಕೆ ಬಂದಿತು. ಜಿಲ್ಲೆಯಲ್ಲಿ ವಿಪ ಮಾಜಿ ಸದಸ್ಯ ಶಿವರಾಜ ಸಜ್ಜನರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಸಹ ಆಕಾಂಕ್ಷಿಯಾಗಿದ್ದರು. ಕ್ಷೇತ್ರದಲ್ಲಿ ಸ್ಥಳೀಯವಾಗಿ ಡಾ| ಬಸವರಾಜ ಕೇಲಗಾರ, ಅರುಣಕುಮಾರ ಪೂಜಾರ, ಭಾರತಿ ಜಂಬಗಿ, ಸಂತೋಷ ಪಾಟೀಲ ಸೇರಿದಂತೆ ಅನೇಕರು ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಇವರಲ್ಲಿ ಪಕ್ಷ ಅರುಣಕುಮಾರ ಪೂಜಾರ ಅವರಿಗೆ ಟಿಕೆಟ್‌ ಘೋಷಿಸಿದೆ.

ಈಶ್ವರಪ್ಪ ಶಿಫಾರಸು?: ಅರುಣಕುಮಾರ ಪೂಜಾರ 2013ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಆಗ ಪಕ್ಷ ಕೆಜೆಪಿ-ಬಿಜೆಪಿ ಘಟಕಗಳಾಗಿ ಒಡೆದಿತ್ತು. ಕೆ.ಎಸ್‌. ಈಶ್ವರಪ್ಪ ಪ್ರಭಾವದಿಂದ ಅಂದು ಪೂಜಾರ ಅವರಿಗೆ ಟಿಕೆಟ್‌ ಸಿಕ್ಕಿತ್ತು. ಆಗ ಪೂಜಾರ 9476 ಮತಗಳನ್ನು ಪಡೆದು ಐದನೇ ಸ್ಥಾನ ಪಡೆದಿದ್ದರು. ಇಂದು ಸಹ ಈಶ್ವರಪ್ಪ ಅವರ ಶಿಫಾರಸಿನ ಆಧಾರದಲ್ಲಿಯೇ ಅರುಣಕುಮಾರಅವರಿಗೆ ಟಿಕೆಟ್‌ ಸಿಕ್ಕಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.

ತನ್ಮೂಲಕ ಈಶ್ವರಪ್ಪ ಕ್ಷೇತ್ರದಲ್ಲಿ ತಮ್ಮ ಮಗನಿಗೆ ಟಿಕೆಟ್‌ ಕೊಡಿಸಲು ಸಾಧ್ಯವಾಗದಿದ್ದರೂ ತಮ್ಮ ಬೆಂಬಲಿಗನಿಗೆ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಬಿಜೆಪಿ ಅನರ್ಹ ಶಾಸಕ ಆರ್‌. ಶಂಕರ್‌ ಗೊಂದಲದಿಂದ ಹೊರಬಂದು ಕ್ಷೇತ್ರದಲ್ಲಿ ಅರುಣಕುಮಾರ ಅವರಿಗೆ ಟಿಕೆಟ್‌ ಘೋಷಿಸಿದ್ದು ಸ್ಥಳೀಯವಾಗಿ ಇರುವ ಆಕಾಂಕ್ಷಿಗಳ ಅಸಮಾಧಾನಕ್ಕೆ ಮುಲಾಮು ಹಚ್ಚುವುದು ಬಾಕಿ ಇದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.