ನಾಯಕತ್ವ ಬದಲಾವಣೆ ಹಾದಿ ಬೀದಿಯ ಚರ್ಚೆ ವಿಷಯವಲ್ಲ: ಯತ್ನಾಳ್ ಗೆ ಕಟೀಲ್ ತಿರುಗೇಟು
Team Udayavani, Jul 5, 2021, 3:01 PM IST
ಹಾವೇರಿ: ನಾಯಕತ್ವ ಬದಲಾವಣೆ ಚರ್ಚೆಯು ಹಾದಿ ಬೀದಿಯಲ್ಲಿ ಮಾಡುವ ವಿಷಯವಲ್ಲ. ಈ ಬಗ್ಗೆ ಚರ್ಚೆ ಮಾಡಲು ಪಕ್ಷ, ಶಾಸಕಾಂಗ ಸಭೆ ಇದೆ. ಆ ಸಂದರ್ಭದಲ್ಲಿ ಮಾತಾಡಬೇಕು. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಗೊಂದಲಗಳು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಹಿರೇಕೇರೂರಿನಲ್ಲಿ ಮಾತನಾಡಿದ ಅವರು. ಕಾಂಗ್ರೆಸ್ ಮುಳುಗುವ ಹಡಗು. ಕಾಂಗ್ರೆಸ್ ಹಡಗಿಗೆ ತೂತು ಬಿದ್ದಿದೆ. ಯಾವಾಗ ಮುಳುಗುತ್ತೋ ಗೊತ್ತಿಲ್ಲ. ಯಾರಾದರೂ ಬಂದು ರಕ್ಷಿಸಲಿ ಎಂದು ಡಿ ಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಮುಳುಗುವ ಹಡಗನ್ನು ಹತ್ತುವ ಜನ ಇಲ್ಲ. ಹೀಗಾಗಿ ಯಾವ ಪಕ್ಷದವರಾದರೂ ನಮ್ಮ ಹಡಗು ಹತ್ತಲಿ ಎಂದು ಬಾಂಬೆ ಟೀಂ ಶಾಸಕರಿಗೆ ಡಿ.ಕೆ ಶಿವಕುಮಾರ್ ಮತ್ತ ಕಾಂಗ್ರೆಸ್ ಪಕ್ಷ ಸೇರಿ ಎಂಬ ಆಫರ್ ನೀಡಿದೆ ಎಂದರು.
ಇದನ್ನೂ ಓದಿ:ಕಾಂಗ್ರೆಸ್ ನವರನ್ನು ಜನ ಮರೆತು ಬಿಟ್ಟಿದ್ದಾರೆ : ಬಿ.ಸಿ. ಪಾಟೀಲ್
ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ವಿಚಾರವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಏನು ಬೇಕೋ ಅದು ಮಾಡುತಿದ್ದಾರೆ. ರಾಜ್ಯ ಸರ್ಕಾರ ಏನು ಧೋರಣೆ ಬೇಕೋ ಅದನ್ನು ತೋರಲಿದೆ ಎಂದರು.
ಸಿ.ಪಿ. ಯೋಗೇಶ್ವರ್ ಸಿಎಂ ಬಗ್ಗೆ ಅಂಬಾರಿ ಆನೆಗೆ ಹೋಲಿಸಿ ಹೇಳಿಕೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ಕಟೀಲ್, ಅವರು ಯಾವ ರೀತಿ ಭಾವನೆ ವ್ಯಕ್ತಪಡಿಸಿದ್ದಾರೋ ಗೊತ್ತಿಲ್ಲ. ನಾನು ಇದರ ವಿವರಣೆ ಪಡೆಯುವೆ. ನಮ್ಮ ಮಂತ್ರಿಗಳು, ಶಾಸಕರು ಮಾಧ್ಯಮಗಳ ಮುಂದೆ ಅನಗತ್ಯ ಮಾತಾಡಬಾರದು. ಕೋವಿಡ್ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ನಾನು ಸಿ.ಪಿ ಯೋಗೇಶ್ವರ್ ಅವರಿಂದ ವಿವರಣೆ ಪಡೆಯುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ