ಗೋವಿನ ಜೋಳದ್ದೇ ಸಿಂಹಪಾಲು


Team Udayavani, Aug 3, 2019, 11:57 AM IST

hv-tdy-2

•49183 ಹೆಕ್ಟೇರ್‌ ಕೃಷಿ ಕ್ಷೇತ್ರದಲ್ಲಿ ಬಿತ್ತನೆ•ಆತಂಕದಲ್ಲಿ ಕೃಷಿ ಚಟುವಟಿಕೆ

ಹಾನಗಲ್ಲ: ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಮಳೆಯ ಕೊರತೆ ಕಾಡುತ್ತಿದೆಯೇ ಹೊರತು ರಸಗೊಬ್ಬರದ ಕೊರತೆ ಕಾಣಿಸಿಕೊಂಡಿಲ್ಲ. ಗೋವಿನ ಜೋಳಕ್ಕೆ ಲದ್ದಿ ಹುಳದ ಬಾಧೆ ಕಾಡುತ್ತಿದೆ ಆದರೂ ಹತೋಟಿಗೆ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ತಾಲೂಕಿನ 49183 ಹೆಕ್ಟೇರ್‌ ಕೃಷಿ ಕ್ಷೇತ್ರದಲ್ಲಿ ಶೇ.78.91ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. 8 ಸಾವಿರ ಹೆಕ್ಟೇರ್‌ ಭತ್ತದ ನಾಟಿಗೆ ಸಿದ್ಧಗೊಳ್ಳುತ್ತಿದೆ. ಆದರೆ ಮಳೆಯ ವಿಷಯದಲ್ಲಿ ರೈತ ವಿಶ್ವಾಸ ಕಳೆದುಕೊಂಡಿದ್ದು, ಆತಂಕದಲ್ಲಿಯೇ ಕೃಷಿ ಚಟುವಟಿಕೆಗಳಲ್ಲಿ ತಲ್ಲೀನನಾಗಿದ್ದಾನೆ.

ಹಾನಗಲ್ಲ ತಾಲೂಕು ವಿಶೇಷವಾಗಿ ಶೇ.80ರಷ್ಟು ಭತ್ತ ಬೆಳೆಯುವ ನಾಡು. ಆದರೆ ದಶಕಗಳಿಂದ ಮಳೆಯ ವಿರಳತೆ ಹಾಗೂ ಅನಿಶ್ಚಿತತೆಯಿಂದಾಗಿ ಹೆಚ್ಚು ಮಳೆಯಾಶ್ರಿತ ಭತ್ತದ ಬೆಳೆಯಿಂದ ವಿಮುಖನಾಗಿ ರೈತರು ಗೋವಿನಜೋಳ, ಶೇಂಗಾ, ದ್ವಿದಳಧಾನ್ಯ, ಸೋಯಾ ಅವರೆ ಸೇರಿದಂತೆ ವಿವಿಧ ದ್ವಿದಳ ಧಾನ್ಯ ಬೆಳೆಯಲು ಮುಂದಾಗಿದ್ದಾರೆ.

ತಾಲೂಕಿನಲ್ಲಿ ಈಗ ಭತ್ತದ ಸ್ಥಾನವನ್ನು ಹಿಂದಿಕ್ಕೆ ಗೋವಿನಜೋಳ ಹೆಚ್ಚು ಕ್ಷೇತ್ರದಲ್ಲಿ ಕೃಷಿಗೊಳಪಟ್ಟಿದೆ. ಪ್ರಸ್ತುತ ವರ್ಷ 17530 ಹೆಕ್ಟೇರ್‌ನಲ್ಲಿ ಗೋವಿನಜೋಳ ಬಿತ್ತನೆಯಾಗಿದ್ದರೆ, ಭತ್ತ ಕೇವಲ 14265 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದೆ. 2352 ಹೆಕ್ಟೇರ್‌ ಸೋಯಾ ಅವರೆ, 3271 ಹೆಕ್ಟೇರ್‌ ಹತ್ತಿ, 885 ಹೆಕ್ಟೇರ್‌ ಕಬ್ಬು, 442 ಹೆಕ್ಟೇರ್‌ ಶೇಂಗಾ ಹಾಗೂ ದ್ವಿದಳ ಧಾನ್ಯಗಳು ಸೇರಿದಂತೆ ಇತರ ಕೃಷಿಗೆ ರೈತ ಮುಂದಾಗಿದ್ದಾನೆ.

ಗೋವಿನಜೋಳಕ್ಕೆ ಕೆಲವೆಡೆ ಲದ್ದಿಹುಳು ಆಕ್ರಮಣ ಮಾಡಿದೆ. ಇನ್ನು ಕೆಲವೆಡೆ ಮಳೆಯ ಅಭಾವ ಕಾರಣದಿಂದಾಗಿ ಭತ್ತದ ಜಮೀನಿಗೆ ಗೋವಿನಜೋಳ ಬಿತ್ತಿದ್ದರಿಂದ ಕೊಳೆ ರೋಗ ಕಾಣಿಸಿಕೊಂಡಿದೆ. ಉಳಿದ ಬೆಳೆಗಳು ಸುರಕ್ಷಿತವಾಗಿವೆ.

ಮುಂಗಾರು ತಡವಾಗಿ ಆರಂಭವಾಗಿದ್ದರಿಂದ ಕೆರೆ-ಕಟ್ಟೆಗಳು ಖಾಲಿ ಖಾಲಿ ಇವೆ. ಧರ್ಮಾ ಹಾಗೂ ವರದಾ ನದಿಗಳು ಒಂದಷ್ಟು ಪ್ರಮಾಣದಲ್ಲಿ ನೀರು ಹರಿಯುತ್ತಿವೆ. ಆದರೆ ರೈತ ಆತಂಕದಲ್ಲಿಯೇ ಮುಂದಿನ ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದಾನೆ. ಕಳೆದ ದಶಕಗಳಿಂದ ಈ ರೀತಿಯ ಆತಂಕದಲ್ಲಿಯೇ ರೈತ ಕಾಲ ಕಳೆಯಬೇಕಾಗಿದೆ.

ತಾಲೂಕಿನಲ್ಲಿ ರಸಾಯನಿಕ ಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಇಲಾಖೆ ಹೇಳಿದೆ. ತಾಲೂಕಿನಲ್ಲಿ 63 ಪರವಾನಿಗೆ ಹೊಂದಿದ ರಸಗೊಬ್ಬರ ಮಾರಾಟ ಅಂಗಡಿಗಳಿವೆ. ತಾಲೂಕಿನಲ್ಲಿರುವ 27 ಸೊಸೈಯಿಟಿಗಳಲ್ಲಿ ರಸಗೊಬ್ಬರ ಮಾರಾಟಕ್ಕೆ 12 ಸೊಸೈಯಿಟಿಗಳು ಪರವಾನಿಗೆ ಪಡೆದಿವೆ. ಆದರೆ 4 ಸೊಸೈಯಿಟಿಗಳಲ್ಲಿ ಮಾತ್ರ ಗೊಬ್ಬರ ಮಾರಾಟ ನಡೆಯುತ್ತಿದೆ. ಪ್ರಸ್ತುತ ಕೃಷಿ ವರ್ಷಕ್ಕೆ 5151 ಟನ್‌ ಡಿಎಪಿ, 6842 ಟನ್‌ ಯೂರಿಯಾ, 3882 ಟನ್‌ ಕಾಂಪ್ಲೆಕ್ಷ್, 1665 ಟನ್‌ ಪೋಟ್ಯಾಸ್‌ ಸೇರಿದಂತೆ 17540 ಟನ್‌ ಗೊಬ್ಬರಬೇಕೆಂದು ಅಂದಾಜಿಸಲಾಗಿದ್ದು, ತಾಲೂಕಿನಲ್ಲಿ ಎಲ್ಲಿಯೂ ರಸಗೊಬ್ಬರದ ಕೊರತೆ ಕಾಣಿಸಿಕೊಂಡಿಲ್ಲ ಎಂಬುದು ಕೃಷಿ ಇಲಾಖೆ ಮಾಹಿತಿ.

 

•ರವಿ ಲಕ್ಷ್ಮೇಶ್ವರ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.