ಹಾವೇರಿಯಲ್ಲಿ ರಸ್ತೆಗಿಳಿದ 140 ಬಸ್‌: ಪ್ರಯಾಣಿಕರ ನಿಟ್ಟುಸಿರು

 12ನೇ ದಿನ ಪೂರೈಸಿದ ಸಾರಿಗೆ ನೌಕರರ ಮುಷ್ಕರ ದಿನದಿಂದ ದಿನಕ್ಕೆ ಕ್ಷೀಣ | ಶೇ.40 ಬಸ್‌ಗಳ ಓಡಾಟ

Team Udayavani, Apr 19, 2021, 8:52 PM IST

hrtr

ಹಾವೇರಿ: ಸಾರಿಗೆ ನೌಕರರ ಮುಷ್ಕರ 12ನೇ ದಿನ ಪೂರೈಸಿದ್ದು, ಇದರ ನಡುವೆಯೇ ರವಿವಾರ ಜಿಲ್ಲೆಯಲ್ಲಿ 140ಬಸ್‌ಗಳು ಸಂಚಾರ ಆರಂಭಿಸಿರುವುದರಿಂದ ಪ್ರಯಾಣಿಕರು ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.

6ನೇ ವೇತನ ಆಯೋಗದ ಶಿಫಾರಸ್ಸು ಅನುಷ್ಠಾನಕ್ಕೆ ಒತ್ತಾಯಿಸಿ ಕಳೆದ 12 ದಿನಗಳಿಂದ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ದಿನದಿಂದ ದಿನಕ್ಕೆ ಮುಷ್ಕರ ಶಕ್ತಿ ಕಳೆದುಕೊಳ್ಳುತ್ತಿದೆ. ಶಿಸ್ತು ಕ್ರಮಕ್ಕೆ ಹೆದರಿ ಚಾಲಕರು, ನಿರ್ವಾಹಕರು ಸೇರಿದಂತೆ 250ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರಿಂದ ರವಿವಾರ ಜಿಲ್ಲೆಯ 6 ಡಿಪೋಗಳಿಂದ 140 ಬಸ್‌ಗಳು ಸಂಚರಿಸಿದವು. ಪ್ರಮುಖ ಸ್ಥಳಗಳ ನಡುವೆ ಬಸ್‌ಗಳು ಓಡಾಟ ಆರಂಭಿಸಿದ್ದರಿಂದ ಪ್ರಯಾಣಿಕರು ಸಾರಿಗೆ ಬಸ್‌ನಲ್ಲೇ ಪ್ರಯಾಣಿಸಲು ಅನುಕೂಲವಾಯಿತು.

ರವಿವಾರ ಹಿರೇಕೆರೂರಿನಿಂದ 30 ಬಸ್‌ಗಳು ಸಂಚರಿಸಿದವು. ರಾಣೆಬೆನ್ನೂರಿನಿಂದ ಅತಿ ಹೆಚ್ಚು 38 ಬಸ್‌ಗಳು ಓಡಾಡಿದವು. ಹಾವೇರಿ 37, ಬ್ಯಾಡಗಿ 18, ಹಾನಗಲ್ಲ 11 ಹಾಗೂ ಸವಣೂರಿನಿಂದ 7 ಬಸ್‌ ಗಳು ಸಂಚರಿಸಿದವು. ಇದಲ್ಲದೇ ಬೇರೆ ಜಿಲ್ಲೆಗಳಿಂದಲೂ ಬಸ್‌ಗಳು ಆಗಮಿಸಿದವು. ಹುಬ್ಬಳ್ಳಿ, ಶಿರಸಿ, ದಾವಣಗೆರೆಯಿಂದಲೂ ಜಿಲ್ಲೆಯ ವಿವಿಧ ಕಡೆ ಬಸ್‌ಗಳು ನಗರಕ್ಕೆ ಬಂದಿದ್ದವು. ಹೆಚ್ಚಿನ ಸಂಖ್ಯೆಯ ನೌಕರರು ಕೆಲಸಕ್ಕೆ ಹಾಜರಾಗಿದ್ದರಿಂದ ಬೆಳಗ್ಗೆಯಿಂದಲೇ ಡಿಪೋದಿಂದ ಒಂದೊಂದಾಗಿ ಬಸ್‌ ಗಳು ನಿಲ್ದಾಣಕ್ಕೆ ಬಂದವು.

ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್‌ಗಳನ್ನು ಬಿಡಲಾಯಿತು. ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಟೆಂಪೋ, ಖಾಸಗಿ ಬಸ್‌ಗಳು ಖಾಲಿ ಖಾಲಿಯಾಗಿದ್ದವು. ಬಸ್‌ಗಳ ಸಂಖ್ಯೆ ಹೆಚ್ಚುತ್ತಿದ್ದಂತೆ ಟೆಂಪೋಗಳು ನಿಲ್ದಾಣದಿಂದ ಜಾಗ ಖಾಲಿ ಮಾಡಿದವು. ಕೆಲವು ಟೆಂಪೋಗಳು ಪ್ರಯಾಣಿಕರಿಲ್ಲದೇ ಮಧ್ಯಾಹ್ನದವರೆಗೂ ಖಾಲಿ ಇರುವಂತಾಯಿತು.

ಬಸ್‌ ಸಂಚಾರದಲ್ಲಿ ವ್ಯತ್ಯಯ ಆಗುತ್ತಿರುವುದರಿಂದ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಿತ್ತು. ಆದ್ದರಿಂದ ಗಂಟೆಗಟ್ಟಲೇ ನಿಲ್ಲಿಸಿ ಪ್ರಯಾಣಿಕರು ಭರ್ತಿಯಾದ ಮೇಲೆ ಬಸ್‌ ಓಡಿಸಲಾಯಿತು. ಆದರೂ, ಸಾರಿಗೆ ಸಂಸ್ಥೆ ಬಸ್‌ಗಳು ಓಡಾಟ ಹೆಚ್ಚಿದ್ದರಿಂದ ಪ್ರಯಾಣಿಕರು 12 ದಿನಗಳ ಬಳಿಕ ನೆಮ್ಮದಿಯಿಂದ ಪ್ರಯಾಣಿಸುವಂತಾಯಿತು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.