ಎತ್ತುಗಳ ಖರೀದಿ ಬಲು ಜೋರು

ಮುಂಗಾರು ಪೂರ್ವ ಮಳೆಗೆ‌ ಅನ್ನದಾತರ ಹರ್ಷ

Team Udayavani, Jun 2, 2022, 2:43 PM IST

16

ಹಾವೇರಿ: ಕಳೆದೆರಡು ವರ್ಷ ಕೊರೊನಾದಿಂದ ಮುಂಗಾರು ಹಂಗಾಮಿನ ವೇಳೆ ಉಳುಮೆ ಎತ್ತುಗಳ ಖರೀದಿಗೆ ಪರದಾಡಿದ್ದ ರೈತರು, ಈ ಸಲ ಮುಂಗಾರು ಪೂರ್ವದಲ್ಲಿ ಬಿದ್ದಿರುವ ಉತ್ತಮ ಮಳೆಯಿಂದ ಹರ್ಷಗೊಂಡು ಎತ್ತುಗಳ ಖರೀದಿಗೆ ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ಉತ್ತಮ ಹದ ಮಳೆಯಾಗಿ ಈಗ ಬಿಡುವು ಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈಗ ಮುಂಗಾರು ಪೂರ್ವ ಸಿದ್ಧತೆಗೆ ಅನುಕೂಲವಾಗಿದ್ದು, ರೈತರು ಹೊಲದ ಕಡೆ ಮುಖ ಮಾಡುವಂತೆ ಮಾಡಿದೆ. ಕಳೆದ ಎರಡು ವರ್ಷ ಮುಂಗಾರು ಹಂಗಾಮು ಆರಂಭದ ಸಂದರ್ಭದಲ್ಲಿ ಕೊರೊನಾ ಅಟ್ಟಹಾಸದಿಂದ ರೈತರು ಸೇರಿದಂತೆ ಯಾರೂ ಮನೆಯಿಂದ ಹೊರಗೆ ಬರುವಂತಿರಲಿಲ್ಲ. ಇದರಿಂದ ಉಳುಮೆಗೆ ಎತ್ತುಗಳನ್ನು ಖರೀದಿಸಲು, ಹೈನುಗಾರಿಕೆಗೆ ಆಕಳು, ಎಮ್ಮೆ ಖರೀದಿಗೆ ತೊಂದರೆಯಾಗಿತ್ತು. ಸದ್ಯ ಕೊರೊನಾ ಕಾಟ ದೂರವಾಗಿರುವುದರಿಂದ ರೈತರು ಮುಂಗಾರು ಹಂಗಾಮಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನಗರದ ಎಪಿಎಂಸಿ ಜಾನುವಾರು ಸಂತೆಗೆ ಜೀವಕಳೆ ಬಂದಂತಾಗಿದ್ದು, ಅಕ್ಕಪಕ್ಕದ ಧಾರವಾಡ, ಗದಗ, ದಾವಣಗೆರೆ, ಬಳ್ಳಾರಿ, ದೂರದ ತೆಲಂಗಾಣ, ಆಂಧ್ರದಿಂದಲೂ ಎತ್ತುಗಳ ಖರೀದಿಗೆ ರೈತರು ಬರುತ್ತಿದ್ದಾರೆ. ಇದರಿಂದ ಮಾರುಕಟ್ಟೆಯಲ್ಲಿ ಜನಜಂಗುಳಿ ಉಂಟಾಗಿದೆ. ಅಲ್ಲದೇ, ಜಿಲ್ಲೆಯ ರೈತರ ದನಕರುಗಳಿಗೆ ಭರ್ಜರಿ ದರ ಸಿಗುತ್ತಿದೆ. ಅದೇ ರೀತಿ, ಎತ್ತುಗಳ ದರವೂ ಹೆಚ್ಚಿದ್ದು, ರೈತರು ಚೌಕಾಶಿ ಮಾಡಿ ಖರೀದಿ ಮಾಡುತ್ತಿದ್ದಾರೆ.

ಜಿಲ್ಲೆಯ ರಾಣಿಬೆನ್ನೂರು, ಹಂಸಭಾವಿ, ಅಕ್ಕಿಆಲೂರು ಮತ್ತು ಹಾವೇರಿಯಲ್ಲಿ ಪ್ರತಿ ವಾರ ಜಾನುವಾರು ಸಂತೆ ನಡೆಯುತ್ತದೆ. ಈ ಪೈಕಿ ಹಾವೇರಿ ಸಂತೆ ದೊಡ್ಡಮಟ್ಟದಲ್ಲಿ ನಡೆಯುತ್ತಿದ್ದು, ಕಳೆದ ಎರಡೂ¾ರು ವಾರಗಳಿಂದ ಜಾನುವಾರುಗಳ ಭರ್ಜರಿ ಮಾರಾಟ ನಡೆದಿದೆ. ಎತ್ತುಗಳ ಖರೀದಿ ಮತ್ತು ಮಾರಾಟ ಮಾಡುವ ರೈತರೆಲ್ಲ ಹಾವೇರಿಯತ್ತ ಬರುತ್ತಿದ್ದಾರೆ.

ಸ್ಥಳೀಯ ಹಾನಗಲ್ಲ ರಸ್ತೆಯಲ್ಲಿರುವ ಜಾನುವಾರು ಮಾರುಕಟ್ಟೆ ಆವರಣವೆಲ್ಲ ಭರ್ತಿಯಾಗಿ ಕಿಲೋ ಮೀಟರ್‌ವರೆಗೂ ರಸ್ತೆ ಪಕ್ಕದಲ್ಲೇ ಎತ್ತುಗಳ ಖರೀದಿಯಲ್ಲಿ ರೈತರು ತೊಡಗಿಕೊಳ್ಳುತ್ತಿದ್ದಾರೆ. ಮುಂಗಾರು ಕೃಷಿ ಚಟುವಟಿಕೆ ಇನ್ನೇನು ಶುರುವಾಗಲಿದ್ದು, ಈಗಿನಿಂದಲೇ ಎತ್ತುಗಳ ಖರೀದಿಗೆ ಮುಂದಾಗುತ್ತಿದ್ದಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಇಲ್ಲಿಗೆ ಎತ್ತುಗಳ ಖರೀದಿಗೆ ಬರುತ್ತಿರುವುದರಿಂದ ಬೇಡಿಕೆ ಹೆಚ್ಚಿದ್ದು, ಎತ್ತುಗಳನ್ನು ಮಾರಾಟ ಮಾಡುವ ರೈತರಿಗೆ ಉತ್ತಮ ದರ ಸಿಗುತ್ತಿದೆ. ಇದರಿಂದ ವಾರದಿಂದ ವಾರಕ್ಕೆ ಜಾನುವಾರು ಮಾರುಕಟ್ಟೆಗೆ ಬರುವ ರೈತರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ.

ಯಂತ್ರೋಪಕರಣ ಬಾಡಿಗೆ ದರ ಏರಿಕೆ: ಡೀಸೆಲ್‌ ದರ ಹೆಚ್ಚಾಗಿರುವ ಪರಿಣಾಮ ಯಂತ್ರೋಪಕರಣಗಳ ಬಾಡಿಗೆ ದರವೂ ದುಬಾರಿಯಾಗಿದೆ. ಇದರಿಂದ ಬಡ, ಸಣ್ಣ ಹಿಡುವಳಿದಾರರು ಎತ್ತುಗಳನ್ನೇ ನೆಚ್ಚಿಕೊಳ್ಳುತ್ತಿದ್ದಾರೆ. ದುಬಾರಿ ಬಾಡಿಗೆ ಕೊಟ್ಟು ಯಂತ್ರಗಳ ಮೂಲಕ ಉಳುಮೆ ಮಾಡುವುದಕ್ಕಿಂತ ಎತ್ತುಗಳನ್ನು ಖರೀದಿಸುವುದೇ ವಾಸಿ ಎಂಬ ಅಭಿಪ್ರಾಯಕ್ಕೆ ಬರುತ್ತಿದ್ದಾರೆ. ಈಗ ಕೃಷಿ ಯಂತ್ರೋಪಕರಣಗಳ ಬಾಡಿಗೆ ದರ ದುಪ್ಪಟ್ಟಾಗಿದೆ. ಇದೇ ವೇಳೆ ರಸಗೊಬ್ಬರ, ಬಿತ್ತನೆ ಬೀಜದ ದರವೂ ಹೆಚ್ಚಿರುವುದರಿಂದ ರೈತರು ಎತ್ತುಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಆದ್ದರಿಂದ, ಇಲ್ಲಿಯ ಎಪಿಎಂಸಿ ಜಾನುವಾರು ಸಂತೆಯಲ್ಲಿ ಜನಜಾತ್ರೆಯೇ ಕಂಡುಬರುತ್ತಿದೆ.

ಜಿಲ್ಲೆಯಲ್ಲಿ ಉತ್ತಮ ಹದ ಮಳೆಯಾಗಿ ಈಗ ಮಳೆರಾಯ ಬಿಡುವು ಕೊಟ್ಟಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಬಿತ್ತನೆಗಾಗಿ ಹೊಲ ಸಿದ್ಧಪಡಿಸಿಕೊಳ್ಳಲು ಎತ್ತುಗಳ ಖರೀದಿಗೆ ಬಂದಿದ್ದೇವೆ. ಎತ್ತುಗಳ ಬೆಲೆಯೂ ಹೆಚ್ಚಾಗಿದೆ. ಯಂತ್ರೋಪಕರಣಗಳ ಬಾಡಿಗೆ ದರವೂ ಹೆಚ್ಚಾಗಿದೆ. ಯಂತ್ರೋಪಕರಣಕ್ಕೆ ಬಾಡಿಗೆ ಕೊಟ್ಟು ಕೃಷಿ ಮಾಡಿದ್ರೆ ಏನೂ ಲಾಭ ಆಗಲ್ಲ. ಹೀಗಾಗಿ, ಎತ್ತುಗಳನ್ನು ಖರೀದಿಸುತ್ತಿದ್ದೇವೆ. ಮಂಜಪ್ಪ ಅರಳಿ, ರೈತ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.