ಬ್ಯಾಡಗಿ ಎಪಿಎಂಸಿ ಮಾರುಕಟ್ಟೆ ಕೆಂಪು ಕೆಂಪು


Team Udayavani, May 22, 2020, 3:02 PM IST

ಬ್ಯಾಡಗಿ ಎಪಿಎಂಸಿ ಮಾರುಕಟ್ಟೆ ಕೆಂಪು ಕೆಂಪು

ಬ್ಯಾಡಗಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಮೆಣಸಿನಕಾಯಿ ವಹಿವಾಟು ಎಂದಿನಂತೆ ಆರಂಭವಾಗಿದ್ದು, ಮೊದಲ ದಿನವೇ ಸುಮಾರು 60 ಸಾವಿರಕ್ಕೂ ಅಧಿಕ ಚೀಲ ಆವಕವಾಗಿದೆ.

ಕೋವಿಡ್‌-19 ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿಂದ ಮಾರುಕಟ್ಟೆ ವಹಿವಾಟು ಸ್ಥಗಿತಗೊಂಡಿತ್ತು. ಲಾಕ್‌ಡೌನ್‌ ಕುರಿತು ಮುಂಜಾಗ್ರತಾ ಕ್ರಮಗಳ ಯಶಸ್ವಿ ಪಾಲನೆ ಸೇರಿದಂತೆ ವಿವಿಧ ಷರತ್ತು ವಿಧಿಸಿದ್ದ ಎಪಿಎಂಸಿ ಆಡಳಿತ ಮಂಡಳಿಯ ನಿಭಂದನೆಗಳಿಗೆ ಒಪ್ಪಿ ವಹಿವಾಟು ನಡೆಸಲು ವ್ಯಾಪಾರಸ್ಥರು ಆಸಕ್ತಿ ತೋರಿದ ಹಿನ್ನೆಲೆಯಲ್ಲಿ ಎಂದಿನಂತೆ ಇ-ಟೆಂಡರ್‌ ಮೂಲಕ ಮೆಣಸಿನಕಾಯಿ ವಹಿವಾಟು ಆರಂಭಿಸಿದರು.

ಸೂಕ್ತ ಭದ್ರತಾ ವ್ಯವಸ್ಥೆ: ಮಾರುಕಟ್ಟೆಯಲ್ಲಿ ಮುಖ್ಯದ್ವಾರದಿಂದ ಆಗಮನ ಮತ್ತು ನಿರ್ಗಮನ, ಅಂಗಡಿಗೆ ಇಬ್ಬರಂತೆ ಪಾಸ್‌ ವಿತರಣೆ, ಕಡ್ಡಾಯ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಬಳಕೆ, ಟೆಂಡರ್‌ ಹಾಕುವ ವರ್ತಕರಲ್ಲೂ ಸಾಮಾಜಿಕ ಅಂತರ ಕಾಪಾಡುವಿಕೆ, ಹೊರಜಿಲ್ಲೆ ಮತ್ತು ರಾಜ್ಯದಿಂದ ಬಂದ ವಾಹನಗಳ ಚಾಲಕರು ಮತ್ತು ಕ್ಲೀನರ್ಗೆ ಎಪಿಎಂಸಿ ಹಳೇ ಕಟ್ಟಡದಲ್ಲಿ ವಾಸ್ತವ್ಯ, ಪ್ಯಾಕ್‌ ಮಾಡಿದ ಊಟ ಮತ್ತು ಉಪಹಾರ ಸರಬರಾಜು, ಅಲ್ಲಲ್ಲಿ ಪೊಲೀಸ್‌ ಸಿಬ್ಬಂದಿ ನಿಯೋಜನೆಯಿಂದ ಭದ್ರತಾ ವ್ಯವಸ್ಥೆ ಅತ್ಯಂತ ಯಶಸ್ವಿಯಾಯಿತು.

ಸಹಕಾರವಿದ್ದರೆ ಏನೆಲ್ಲಾ ಸಾಧಿಸಬಹುದು: ಬೃಹತ್‌ ಸಂಖ್ಯೆಯಲ್ಲಿ ರೈತರು ಸೇರುವ ಅನುಮಾನದಿಂದ ಲಾಕ್‌ ಡೌನ್‌ ನಿಯಮ ಪಾಲನೆ ಕಷ್ಟಸಾಧ್ಯವೆಂಬ ತೀರ್ಮಾನಕ್ಕೆ ಬಂದಿದ್ದ ಆಡಳಿತ ಮಂಡಳಿಯು ವಹಿವಾಟು ಆರಂಭಕ್ಕೆ ಅನುಮತಿಸಿರಲಿಲ್ಲ. ಆದರೆ ಎಪಿಎಂಸಿ ವಿಧಿಸಿದ ಷರತ್ತುಗಳಿಗೆ ವರ್ತಕರು ಒಪ್ಪಿದ್ದಲ್ಲದೇ ಪಾಲನೆಯಲ್ಲೂ ಹಿಂದೆ ಬೀಳದೇ ಸಿಬ್ಬಂದಿಯೊಂದಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ವಹಿವಾಟು ಸುಗಮವಾಗಿ ನಡೆಯಿತು.

ಎಲ್ಲೆಲ್ಲೂ ಕೆಂಪು: ಕಳೆದೆರಡು ತಿಂಗಳಿಂದ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ಎಪಿಎಂಸಿಯಲ್ಲಿ ಗುರುವಾರ ಎಲ್ಲೆಲ್ಲೂ ಕೆಂಪನೆಯ ಬಣ್ಣದ ಮೆಣಸಿನಕಾಯಿ ಕಂಗೊಳಿಸಿತು. ಪ್ರತಿ ಅಂಗಡಿಗಳ ಮುಂಭಾಗದಲ್ಲೂ ರೈತರಿಗಾಗಿ ಸ್ಯಾನಿಟೈಸರ್‌ ಸೇರಿದಂತೆ ಮಾಸ್ಕ್ ವಿತರಣೆಗೆ ಕ್ರಮ, ಪ್ರಾಂಗಣದ ಒಳಭಾಗದಲ್ಲಿ ಪಾನ್‌, ಗುಟ್ಕಾ ತಂಬಾಕು ಉಗುಳುವುದನ್ನು ನಿಷೇಧಿಸಲಾಗಿತ್ತು

ಶಾಸಕರಿಂದ ಪರಿಶೀಲನೆ: ಎಪಿಎಂಸಿ ಪ್ರಾಂಗಣಕ್ಕೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ತಹಶೀಲ್ದಾರ್‌ ಶರಣಮ್ಮಕಾರಿ, ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಸ್‌. ನಾಯ್ಕರ್‌, ಕಾರ್ಯದರ್ಶಿ ಎಸ್‌.ಬಿ.ನ್ಯಾಮಗೌಡ ಸೇರಿದಂತೆ ಸರ್ವ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರ ಮತ್ತು ವ್ಯಾಪಾರಸ್ಥರ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರ ಸಹಕಾರವಿದ್ದರೆ ಏನೆಲ್ಲಾ ಉತ್ತಮ ಕಾರ್ಯಗಳನ್ನು ಮಾಡಬಹುದು ಎಂಬುದಕ್ಕೆ ಇಂದಿನ ಮಾರುಕಟ್ಟೆ ವಹಿವಾಟು ಆರಂಭವೇ ಸಾಕ್ಷಿ, ಸಹಕರಿಸಿದ ಸ್ಥಳೀಯ ವರ್ತಕರು, ರೈತರು ಹಾಗೂ ಸಿಬ್ಬಂದಿ ಅಭಿನಂದಿಸುತ್ತೇನೆ. –ವಿರೂಪಾಕ್ಷಪ್ಪ ಬಳ್ಳಾರಿ, ಶಾಸಕ

ಬ್ಯಾಡಗಿ ಇನ್ನುಳಿದಂತಲ್ಲ. ಇದೊಂದು ಬೃಹತ್‌ ಮಾರುಕಟ್ಟೆ. ವಹಿವಾಟು ಆರಂಭಿಸಿದಲ್ಲಿ ರೆಡ್‌ ಜೋನ್‌ಗಳಿಂದ ರೈತರು ಆಗಮಿಸುವ ಹಿನ್ನೆಲೆಯಲ್ಲಿ ಕೋವಿಡ್ ವೈರಸ್‌ ನಿಯಂತ್ರಣ ಸವಾಲಾಗಿತ್ತು. ಇದಕ್ಕೆ ಸಹಕರಿಸಿದ ರೈತರು ಹಾಗೂ ಎಪಿಎಂಸಿ ಸಿಬ್ಬಂದಿಗೆ ಅಭಿನಂದಿಸುತ್ತೇನೆ. –ಸುರೇಶಗೌಡ ಪಾಟೀಲ, ವರ್ತಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.