Byadgi: ವಿದ್ಯಾವಂತ ಯುವಕರು ಸ್ವ ಉದ್ಯೋಗಕ್ಕೆ ಮುಂದಾಗಲಿ-ಮಂಜುಳಾ ಜಯಪ್ಪ

ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ ನಂಬಿಕೆ ನಮ್ಮಲ್ಲಿರಬೇಕು

Team Udayavani, Oct 21, 2023, 6:03 PM IST

Byadgi: ವಿದ್ಯಾವಂತ ಯುವಕರು ಸ್ವ ಉದ್ಯೋಗಕ್ಕೆ ಮುಂದಾಗಲಿ-ಮಂಜುಳಾ ಜಯಪ್ಪ

ಬ್ಯಾಡಗಿ: ವಿದ್ಯಾವಂತ ಯುವಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದರಿಂದ ಉದ್ಯೋಗಾವಕಾಶಗಳು ವಿರಳವಾಗಿವೆ. ಸರ್ಕಾರಿ ಉದ್ಯೋಗದ ವ್ಯಾಮೋಹಕ್ಕೆ ಬಿದ್ದಿರುವ ಬಹುತೇಕ ಪದವೀಧರರು ನಿರುದ್ಯೋಗಿಗಳಾಗುತ್ತಿದ್ದಾರೆ. ಆದರೆ,
ವಿಶ್ವದ ನಂ.1 ಶ್ರೀಮಂತರೆಲ್ಲರೂ ತಮ್ಮ ವೃತ್ತಿ ಜೀವನದಲ್ಲಿ ಒಂದಿಲ್ಲೊಂದು ಸ್ವಯಂ ಉದ್ಯೋಗ ಆರಂಭಿಸಿಯೇ ಆರ್ಥಿಕ ಪ್ರಗತಿ ಸಾ ಧಿಸಿದ್ದಾರೆ. ಇನ್ನಾದರೂ ದೇಶದ ಯುವಕರು ಯಾವುದಾದರೊಂದು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಳ್ಳುವಂತೆ ಬ್ಯಾಂಕ್‌ ಆಫ್‌ ಬರೋಡಾ ತರಬೇತಿ ಕೇಂದ್ರದ ಜಿಲ್ಲಾ ಸಂಘಟಕಿ ಮಂಜುಳಾ ಜಯಪ್ಪ ಕರೆ ನೀಡಿದರು.

ಪಟ್ಟಣದ ಸ್ನೇಹ ಸದನ ಟ್ರಸ್ಟ್‌, ಸಮಗ್ರ ಸಮಾಜ ಕಾರ್ಯ ನಿರ್ವಹಣಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯೋಗದ ಕುರಿತು ಯುವಕರಿಗೆ ಏರ್ಪಡಿಸಿದ್ದ ವಿವಿಧ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವದ ಯಾವುದೇ ಶಿಕ್ಷಣ ಸಂಸ್ಥೆಗಳು ಉದ್ಯೋಗ ನೀಡುವ ಭರವಸೆ ಮೇಲೆ ಶಿಕ್ಷಣ ನೀಡುತ್ತಿರುವ ಉದಾಹರಣೆಗಳಿಲ್ಲ. ವಿದ್ಯೆ ಕೊಟ್ಟವರು ಉದ್ಯೋಗ ಕೊಡಬೇಕೆಂಬ ನಿಯಮಗಳಿಲ್ಲ. ಶಿಕ್ಷಣವಂತರನ್ನಾಗಿಸುವುದಷ್ಟೇ ಸರ್ಕಾರದ ಕೆಲಸ. ಸ್ನಾತಕೋತ್ತರ ಪದವೀಧರರಿಗೂ ಉದ್ಯೋಗ ನೀಡಲು ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳಿಂದ ಸಾಧ್ಯವಿಲ್ಲ.

ಇಂತಹ ಪರಿಸ್ಥಿತಿಯಲ್ಲಿ ಉತ್ತಮ ಶೈಕ್ಷಣಿಕ ಅರ್ಹತೆ ಹೊಂದಿರುವವರು ಸ್ವಯಂ ಉದ್ಯೋಗದ ಬಗ್ಗೆ ಯೋಚಿಸುವಂತೆ ಸಲಹೆ ನೀಡಿದರು. ಬ್ಯಾಂಕ್‌ಗಳ ಹಣಕಾಸಿನ ಬೆಂಬಲದೊಂದಿಗೆ ಗ್ರಾಮೀಣ ಪ್ರದೇಶದಲ್ಲಿನ ಸ್ವ-ಸಹಾಯ ಗುಂಪುಗಳು ಇಂದು ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿವೆ. ಇಂತಹ ಹತ್ತು ಹಲವು ಕ್ಷೇತ್ರಗಳಲ್ಲಿ ಬ್ಯಾಂಕ್‌ಗಳ ಸಹಕಾರದೊಂದಿಗೆ ವೇಗವಾಗಿ ಪ್ರಗತಿ ಕಾಣುತ್ತಿದ್ದೇವೆ. ವಿದ್ಯಾವಂತ ಯುವಕರಿಗೆ ಉದ್ಯಮಗಳನ್ನು ಆರಂಭಿಸಲು ಬ್ಯಾಂಕ್‌ ಗಳು ಸಾಲ ಸೌಲಭ್ಯಗಳನ್ನು ಆರಂಭಿಸಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳು ವಂತೆ ಮನವಿ ಮಾಡಿದರು.

ಸ್ವಯಂ ಉದ್ಯೋಗ ಯುವಕರ ಶೈಕ್ಷಣಿಕ ಅರ್ಹತೆಗೆ ತಕ್ಕ ಉದ್ಯೋಗ ನೀಡದಿರ ಬಹುದು. ಆದರೆ ನಿರುದ್ಯೋಗಿಗಳು ಕೆಲಸವಿಲ್ಲದೇ ಬೇಸರಗೊಳ್ಳದೇ ಉದ್ಯಮಿಗಳಾಗುವತ್ತ ಯೋಚಿಸಬೇಕು. ಆರಂಭಿಕ ಹಂತದಲ್ಲಿ ಕೆಲವು ಸಮಸ್ಯೆಗಳಿರಬಹುದು. ಅದನ್ನು ಕ್ರಮೇಣ ನಿವಾರಿಸಿಕೊಳ್ಳಬೇಕು. ವ್ಯಾಪಾರ, ವಹಿವಾಟಿನಿಂದ ಬದಲಾದ ಯಶಸ್ವಿ ಉದ್ಯಮಿಗಳಿಗೇನು ಕೊರತೆಯಿಲ್ಲ. ಆದರೆ ನಾವು ಮಾಡುವ ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ ನಂಬಿಕೆ ನಮ್ಮಲ್ಲಿರಬೇಕು ಎಂದರು.

ಯಾರಿಗೂ ಹೊರೆಯಾಗದಂತೆ 30 ಸಾವಿರ ರೂ. ಒಳಗೆ ಮಾಡಬಹುದಾದ ಕೃಷಿ, ಹೈನುಗಾರಿಕೆ, ಎಲೆಕ್ಟ್ರಿಷಿಯನ್‌, ಮತ್ಸ್ಯೋ ದ್ಯಮ, ಜೇನು ಸಾಕಾಣಿಕೆ, ಗುಡಿ ಕೈಗಾರಿಕೆ ಇನ್ನಿತರ ಸ್ವಯಂ ಉದ್ಯೋಗಗಳ ಕುರಿತು ತರಬೇತಿ ನೀಡಿದ ಅವರು, ಆಸಕ್ತ ಯುವಕರು ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕಿ ರೂಪಾ, ನಿರ್ದೇಶಕ ಗ್ಲೋರಿಯಾ ತೆರೆಸಿಟಾ, ಆರೋಗ್ಯ ವಿಭಾಗದ ಸಂಯೋಜಕರಾದ ಅಚಲಾ ಯುವಕಲರಾದ, ಫಕ್ಕೀರಪ್ಪ ಮಾಳಪ್ಪನವರ, ಸೋಮೇಶ ನಾಯಕ, ಮಹಾಂತೇಶ ಕಳಕ್ಕನವರ, ಸಂಯೋಜಕರಾದ ಈರಣ್ಣ ಮಾಸಣಗಿ, ಎಲ್‌.ಶಿವಪ್ಪ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ 42 ಯುವಕರು ಉಪಸ್ಥಿತರಿದ್ದರು. ಕುಟೀರದ ಮಕ್ಕಳು ಪ್ರಾರ್ಥನೆ ಸಲ್ಲಿಸಿದರು. ಸಂಯೋಜಕಿ ಸುವರ್ಣಾ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.