ವೃತ್ತಿ ರಂಗಭೂಮಿಗೆ ಕಾಯಕಲ್ಪ ಅಗತ್ಯ

ಕಲೆಗಿಂತ ದುಡ್ಡೇ ಇಂದಿನ ಓಟದಲ್ಲಿ ಮುಂದಿದೆ. ಪ್ರತಿಭೆ, ಪುರಸ್ಕಾರಗಳು ಸಾಂಕೇತಿಕವಾಗಿವೆ

Team Udayavani, Mar 18, 2022, 6:22 PM IST

ವೃತ್ತಿ ರಂಗಭೂಮಿಗೆ ಕಾಯಕಲ್ಪ ಅಗತ್ಯ

ಹಾವೇರಿ: ಮುಖದಲ್ಲಿ ಗೆರೆ ಮೂಡಿ, ತಲೆ ತುಂಬ ಬಿಳಿ ಕೂದಲು ಬಂದಾಗ ಎಂತಹ ದೊಡ್ಡ ಕಲಾವಿದನೇ ಇರಲಿ ಆತನ ಪ್ರದರ್ಶನ ವ್ಯಕ್ತಿತ್ವಕ್ಕೆ ಕೊನೆಗೊಳ್ಳುತ್ತದೆ. ವೃತ್ತಿ ರಂಗಭೂಮಿ ಇಂದು ಸೋತು ಸುಣ್ಣವಾಗಿದೆ. ಅದಕ್ಕೆ ಕಾಯಕಲ್ಪ ಕೊಡುವುದು ಹೇಗೆಂದು ಚಿಂತಿಸಬೇಕಾಗಿದೆ ಎಂದು ನಾಟಕ ಅಕಾಡೆಮಿಯ 2021ನೇ ಸಾಲಿನ ಜೀವಮಾನ ರಂಗ ಸಾಧನೆ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ದತ್ತಾತ್ರೇಯ ಕುರಹಟ್ಟಿ ಹೇಳಿದರು.

ನಗರದಲ್ಲಿ ಕಲಾವಿದರು, ಸ್ನೇಹಿತರ ಕೂಟದಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ತಮ್ಮ ಕುಟುಂಬದ ಸಹಾಯಾರ್ಥ ಪ್ರದರ್ಶನಕ್ಕಾಗಿ ನಾಟಕ ಕಂಪನಿಯ ಮಾಲೀಕರೆದುರು ಅಂಗಲಾಚುವ ವೃದ್ಧ ಕಲಾವಿದರನ್ನು ನೋಡಿ, ರಾತ್ರೋರಾತ್ರಿ ಆರೋಗ್ಯ ಇಲಾಖೆಯ ಸರ್ಕಾರಿ ನೌಕರಿಗಾಗಿ ಹಾವೇರಿಯಿಂದ ಮೂಡಬಿದರಿಗೆ ಓಡಿ ಹೋದೆ. ಅದರಿಂದಾಗಿಯೇ ಎರಡು ಹೊತ್ತಿನ ಊಟ, ನೆಮ್ಮದಿಯ ಜೀವನ ಕಂಡುಕೊಂಡೆ.

1982ರಿಂದ 2006ರವರೆಗೆ 24ವರ್ಷಗಳ ಕಾಲ ಜಿಲ್ಲಾಸ್ಪತ್ರೆ ಮತ್ತು ಹಾನಗಲ್ಲ ತಾಲೂಕು ಆಡೂರು ಗ್ರಾಮದಲ್ಲಿ ಆರೋಗ್ಯ ಸಹಾಯಕನಾಗಿ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು. ನಾನು ನೂರಾರು ಧಾರಾವಾಹಿಗಳಲ್ಲಿ ನಟಿಸಿರಬಹುದು. ಪ್ರಸಿದ್ಧಿ, ಅವಕಾಶ, ಅನ್ನ ಕೂಡ ಸಿಕ್ಕಿರಬಹುದು. ಆದರೆ ಅದೊಂದು ಯಂತ್ರಭೂಮಿ. ರಂಗಭೂಮಿಯ ತಾಯಿ ಪ್ರೀತಿಯನ್ನು ಅದು ಕೊಟ್ಟಿಲ್ಲ ಎಂದರು.

ಜಾನಪದ ಗಾಯಕ ಗುರುರಾಜ ಹೊಸಕೋಟೆ ಮಾತನಾಡಿ, ಹುಮ್ಮಸ್ಸು ಮತ್ತು ವಯಸ್ಸು ಇದ್ದಾಗ ಪ್ರಶಸ್ತಿಗಳು ಬರಬೇಕು. ಕುರಹಟ್ಟಿ ಅವರಿಗೆ ತಡವಾಗಿ ಬಂದಿದೆ. ಅಂತೂ ಲಭಿಸಿತಲ್ಲ ಎಂದು ಸಮಾಧಾನ ಪಡಬೇಕಿದೆ. ಕಲೆಗಿಂತ ದುಡ್ಡೇ ಇಂದಿನ ಓಟದಲ್ಲಿ ಮುಂದಿದೆ. ಪ್ರತಿಭೆ, ಪುರಸ್ಕಾರಗಳು ಸಾಂಕೇತಿಕವಾಗಿವೆ ಎಂದರು.

ಜ್ಯೂನಿಯರ್‌ ರಾಜಕುಮಾರ್‌ ಖ್ಯಾತಿಯ ಅಶೋಕ ಬಸ್ತಿ ಮಾತನಾಡಿ, ಕುರಹಟ್ಟಿ ಅದ್ಭುತ ಕಂಠಸಿರಿಯ ಸಹಜ ಕಲಾವಿದ. ಹಾವೇರಿ ನೆಲದ ಹೆಮ್ಮೆಯ ಪ್ರತಿಭೆ. ನಾಟಕ ಅಕಾಡೆಮಿಯ ಈ ಪ್ರಶಸ್ತಿಯಿಂದಾಗಿ ಅಕಾಡೆಮಿಗೇ ದೊಡ್ಡ ಗೌರವ ಬಂದಿದೆ ಎಂದರು. ರಾಘವೇಂದ್ರ ಕಬಾಡಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಸತೀಶ ಕುಲಕರ್ಣಿ, ಪ್ರಾಚಾರ್ಯ ಕಷ್ಣಪ್ಪ ಕೆ., ಆರೋಗ್ಯ ಇಲಾಖೆ ನಿವೃತ್ತ ಅಧಿಕಾರಿ ಶಂಕರ ಸುತಾರ, ಲಯನ್ಸ್‌ ಕ್ಲಬ್‌ ಅಧ್ಯಕ್ಷ ವಿರೂಪಾಕ್ಷ ಹಾವನೂರ, ನಿವೃತ್ತ ಪ್ರಾಚಾರ್ಯ ಪಿ.ಸಿ. ಹಿರೇಮಠ, ಪ್ರೊ.ಶೇಖರ ಭಜಂತ್ರಿ, ವಾಗೀಶ ಹೂಗಾರ, ಶಿವಣ್ಣ ಬಣಕಾರ, ಲತಾ ಪಾಟೀಲ, ಸಿ.ಎಸ್‌. ಮರಳಿಹಳ್ಳಿ, ಆರ್‌.ಎಫ್‌. ಕಾಳೆ, ವಿರೂಪಾಕ್ಷ ಲಮಾಣಿ, ಸಿ.ಎಫ್‌. ಹೆಡಿಯಾಲ, ವಸಂತ ಕಡತಿ, ಕರಿಯಪ್ಪ ಹಂಚಿನಮನಿ ಇತರರು ಇದ್ದರು.ಧನಶ್ರೀ ಲಮಾಣಿ ಪ್ರಾರ್ಥಿಸಿ, ಆರ್‌.ಸಿ.ನಂದಿಹಳ್ಳಿ
ಸ್ವಾಗತಿಸಿ, ಎಸ್‌.ಆರ್‌. ಹಿರೇಮಠ ನಿರೂಪಿಸಿ, ಪೃಥ್ವಿರಾಜ ಬೆಟಗೇರಿ ವಂದಿಸಿದರು.

ನಾನು ನೂರಾರು ಧಾರಾವಾಹಿಗಳಲ್ಲಿ ನಟಿಸಿರಬಹುದು. ಪ್ರಸಿದ್ಧಿ, ಅವಕಾಶ, ಅನ್ನ ಕೂಡ ಸಿಕ್ಕಿರಬಹುದು. ಆದರೆ, ಅದೊಂದು ಯಂತ್ರಭೂಮಿ. ರಂಗಭೂಮಿಯ ತಾಯಿ ಪ್ರೀತಿಯನ್ನು ಅದು ಕೊಟ್ಟಿಲ್ಲ.
ದತ್ತಾತ್ರೇಯ ಕುರಹಟ್ಟಿ,
ಜೀವಮಾನ ರಂಗ ಸಾಧನೆ ಪ್ರಶಸ್ತಿ ಪುರಸ್ಕೃತ ಕಲಾವಿದರು

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.