ಉದಾಸಿಗೆ ಕೇಂದ್ರ ಸಚಿವ ಸ್ಥಾನ ನಿರೀಕ್ಷೆ

•ಸಾಧನೆ-ಪ್ರಭಾವ-ಜಾತಿ ಸಮೀಕರಣ ಎಲ್ಲವೂ ಪೂರಕ •ಮೂರು ಅವಧಿಯಲ್ಲಿ ಹೆಚ್ಚಿನ ಕೆಲಸ ಮಾಡಿದ ಸಂಸದ

Team Udayavani, May 27, 2019, 3:19 PM IST

haveri-tdy-3

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಶಿವಕುಮಾರ ಉದಾಸಿ ಅವರಿಗೆ ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎರಡನೇ ಅವಧಿಯಲ್ಲಿ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬಹುದೇ ಎಂಬ ಬಗ್ಗೆ ನಿರೀಕ್ಷೆ ಗರಿಗೆದರಿದೆ.

ಸಂಸದ ಶಿವಕುಮಾರ ಉದಾಸಿ 2009ರಿಂದ ಎದುರಾಳಿ ಕಾಂಗ್ರೆಸ್‌ನ್ನು ಮಣಿಸಿ ಹ್ಯಾಟ್ರಿಕ್‌ ಜಯ ಸಾಧಿಸಿದ್ದಾರೆ. ಕಳೆದ ಆಡಳಿತಾವಧಿ ಸಂಸತ್‌ ಅಧಿವೇಶನದಲ್ಲಿ ಹೆಚ್ಚು ಹಾಜರಾತಿ ಹಾಗೂ ಪ್ರಮುಖ ವಿಷಯಗಳ ಬಗ್ಗೆ ಪ್ರಶ್ನೆ ಕೇಳಿ ಉದಾಸಿ ಅವರು ಪ್ರಧಾನಿ ಮೋದಿ ಅವರ ಗಮನ ಸೆಳೆದಿದ್ದರು. ಅಷ್ಟೇ ಅಲ್ಲ ಕೇಂದ್ರ ಹಣಕಾಸು ಸಮಿತಿ, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿ ಯೋಜನೆ ರೂಪಿಸಲು ಅತ್ಯುತ್ತಮ ಸಲಹೆ ನೀಡಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದ್ದರು. ಈ ಎಲ್ಲ ಕಾರಣಗಳಿಂದಾಗಿ ಶಿವಕುಮಾರ ಉದಾಸಿ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ. ಇನ್ನು ಜಾತಿ ಸಮೀಕರಣದ ವಿಚಾರದಲ್ಲಿಯೂ ಶಿವಕುಮಾರ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಪ್ರಾಬಲ್ಯಯುಳ್ಳ ಲಿಂಗಾಯತರಿಗೆ ಸಚಿವ ಸ್ಥಾನ ನೀಡುವ ಲೆಕ್ಕಾಚಾರ ನಡೆದರೆ ಇಲ್ಲಿ ಶಿವಕುಮಾರ ಉದಾಸಿ ಅವರನ್ನು ಪರಿಗಣಿಸಬಹುದು ಎನ್ನಲಾಗಿದೆ.

ಸಾಧನೆಗಳೇನು?: ಶಿವಕುಮಾರ ಉದಾಸಿ ಚುನಾವಣೆ ಪ್ರಚಾರದಲ್ಲಿ ಹೇಳಿಕೊಂಡಂತೆ ಅವರ ಅವಧಿಯಲ್ಲಿ ಕ್ಷೇತ್ರದಲ್ಲಿ ದಾಖಲೆ ಕೆಲಸವಾಗಿದೆ. ಕ್ಷೇತ್ರಕ್ಕೆ 260 ಕೋಟಿ ಸಿಆರ್‌ಆಫ್‌ ಅನುದಾನ ಬಂದಿದೆ. 815 ಕಿಮೀ ಕ್ಷೇತ್ರದ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಕ್ಷೇತ್ರದಲ್ಲಿ 1.92 ಲಕ್ಷ ಗ್ಯಾಸ್‌ ಸಂಪರ್ಕ, 300 ಕೋಟಿಗೂ ಅಧಿಕ ವೆಚ್ಚದಲ್ಲಿ ರೈಲ್ವೆ ಸ್ಟೇಶನ್‌, ಅಂಡರ್‌ ಬ್ರಿಜ್‌, ಓವರ್‌ ಬ್ರಿಜ್‌, ಇತರ ಕಾಮಗಾರಿ ಮಾಡಲಾಗಿದೆ. ಆಯುಷ್ಮಾನ್‌ ಭಾರತ ಎರಡು ಲಕ್ಷ ಜನರಿಗೆ ದೊರಕಿಸುವ ಪ್ರಯತ್ನ ನಡೆದಿದೆ. ಕೃಷಿ ಸಮ್ಮ್ಮಾನ್‌ ಯೋಜನೆ ಲಾಭ 2.70 ಜನರಿಗೆ ಸಿಗಲಿದೆ. 2009ರಲ್ಲಿ ಹಾವೇರಿ ಜಿಲ್ಲೆಯಲ್ಲಿ 117 ಬ್ಯಾಂಕ್‌ ಶಾಖೆಗಳಿದ್ದವು. ಈಗ ಹಾವೇರಿ ಜಿಲ್ಲೆಯಲ್ಲಿ 314, ಗದಗ ಜಿಲ್ಲೆಯಲ್ಲಿ 55 ಹೆಚ್ಚುವರಿ ಶಾಖೆಗಳಾಗಿವೆ. ಕ್ಷೇತ್ರದಲ್ಲಿನ ಈ ಸಾಧನೆಗಳು ಸಹ ಸಚಿವ ಸ್ಥಾನ ಸಿಗುವ ಲೆಕ್ಕಾಚಾರದಲ್ಲಿ ಸೇರಿಕೊಳ್ಳಬಹುದು ಎನ್ನಲಾಗಿದೆ.

ಪ್ರಭಾವವೂ ಇದೆ: ಕೇವಲ ವೈಯಕ್ತಿಕ ಅರ್ಹತೆ, ಸಾಧನೆ ಅಷ್ಟೇ ಅಲ್ಲದೇ ಶಿವಕುಮಾರ ಉದಾಸಿ ತಮ್ಮ ಪರ ಕೇಂದ್ರ ಮಟ್ಟದಲ್ಲಿ ಪ್ರಭಾವ ಬೀರುವ ಶಕ್ತಿಯನ್ನೂ ಹೊಂದಿದ್ದಾರೆ. ಶಿವಕುಮಾರ ಉದಾಸಿ ಹಾಗೂ ಅವರ ತಂದೆ ಹಿರಿಯ ಧುರೀಣ ಸಿ.ಎಂ. ಉದಾಸಿ ಇಬ್ಬರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತರಾಗಿದ್ದಾರೆ. ಹೀಗಾಗಿ ಶಿವಕುಮಾರ ಉದಾಸಿ ಪರವಾಗಿ ಯಡಿಯೂರಪ್ಪ ಕೇಂದ್ರದಲ್ಲಿ ಪ್ರಭಾವ ಬೀರಿ ಸಚಿವ ಸ್ಥಾನ ದೊರಕಿಸಿಕೊಡಬಹುದು. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿಗೆ ಹೆಚ್ಚು ಸ್ಥಾನಗಳು ದೊರಕಿರುವುದರಿಂದ ಯಡಿಯೂರಪ್ಪ ಅವರ ಮಾತಿಗೂ ಕೇಂದ್ರದಲ್ಲಿ ಹೆಚ್ಚಿನ ಮನ್ನಣೆ ಸಿಗುವುದರಿಂದ ಶಿವಕುಮಾರ ಉದಾಸಿ ಅವರಿಗೆ ಸಚಿವ ಸ್ಥಾನ ಖಚಿತ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.

ಶಿವಕುಮಾರ ಉದಾಸಿ ಕೇಂದ್ರ ಸಚಿವರಾಗಲು ಎಲ್ಲ ರೀತಿಯಲ್ಲಿ ಅರ್ಹರಾಗಿದ್ದಾರೆ. ಪ್ರಧಾನಿ ಮೋದಿ ಅವರು ಉದಾಸಿ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವ ನಿರೀಕ್ಷೆ ಇದೆ. ಉದಾಸಿ ಅವರಿಗೆ ಸಚಿವ ಸ್ಥಾನ ದೊರೆತರೆ ಕ್ಷೇತ್ರದಲ್ಲಿ ಅಭಿವೃದ್ಧಿ ವೇಗ ಪಡೆದುಕೊಳ್ಳಲಿದೆ.
-ಶಿವರಾಜ ಸಜ್ಜನರ, ಬಿಜೆಪಿ ಜಿಲ್ಲಾಧ್ಯಕ್ಷ
ಉದಾಸಿ ಪರಿಚಯ:

ಶಿವಕುಮಾರ ಉದಾಸಿ ಜಿಲ್ಲೆಯ ಹಾನಗಲ್ಲ ಪಟ್ಟಣದವರು. ಶಿವಕುಮಾರ ಉದಾಸಿ 52 ವರ್ಷ ವಯೋಮಾನದವರಾಗಿದ್ದು, 1984ರಿಂದ 1999ವರೆಗೆ ಬಿಇ ಮೆಕ್ಯಾನಿಕಲ್ ಅಧ್ಯಯನ ಮಾಡಿದ್ದಾರೆ. ಕೃಷಿ ಹಾಗೂ ವ್ಯವಹಾರ ಅವರ ವೃತ್ತಿ. ತಂದೆ ಸಿ.ಎಂ. ಉದಾಸಿ ಹಿರಿಯ ರಾಜಕಾರಣಿಯಾಗಿದ್ದು, ಪ್ರಸ್ತುತ ಹಾನಗಲ್ಲ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.
ಜಾತಿ ಲೆಕ್ಕಾಚಾರ ಹೇಗಿದೆ?:

ಶಿವಕುಮಾರ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗಲು ಧನಾತ್ಮಕ ಅಂಶಗಳೇ ಹೆಚ್ಚಾಗಿವೆ. ಆದರೂ ಜಾತಿ ಸಮೀಕರಣದ ಇನ್ನೊಂದು ಲೆಕ್ಕಾಚಾರದಲ್ಲಿ ಸ್ವಲ್ಪ ಹಿನ್ನಡೆಯೂ ಆಗುವ ಸಾಧ್ಯತೆ ಇದೆ. ರಾಜ್ಯ ರಾಜಕಾರಣದಲ್ಲಿ ರಾಜಕೀಯ ಬದಲಾವಣೆಯಾಗಿ ಬಿಜೆಪಿ ಸರ್ಕಾರ ರಚನೆಯಾದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ. ಲಿಂಗಾಯತ ಮುಖಂಡರಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಸಿಗುವುದರಿಂದ ಅದೇ ಸಮುದಾಯದ ಮುಖಂಡರಿಗೆ ಕೇಂದ್ರ ಸಚಿವ ಸ್ಥಾನ ಪಡೆಯಲು ಹಿನ್ನಡೆಯಾಗಬಹುದು ಎಂಬ ಲೆಕ್ಕಾಚಾರವೂ ನಡೆದಿದೆ.
ನಾನು ಸಚಿವ ಸ್ಥಾನದ ಕನಸು ಕಂಡಿಲ್ಲ. ಜನರು ನನ್ನನ್ನು ಮೂರನೇ ಬಾರಿ ಗೆಲ್ಲಿಸಿ ಅವರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಸಂಸದನಾಗಿ ಸಮರ್ಥವಾಗಿ ಕೆಲಸ ಮಾಡುತ್ತೇನೆ. ಪಕ್ಷ ಯಾವ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸುತ್ತೇನೆ. ಸಚಿವ ಸ್ಥಾನ ಕೊಡುವುದು ಪಕ್ಷ ಹಾಗೂ ವರಿಷ್ಠರಿಗೆ ಬಿಟ್ಟ ವಿಚಾರ -ಶಿವಕುಮಾರ ಉದಾಸಿ,ಸಂಸದ
•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.