ಮತ್ತೆ ಚಿಗುರಿದ ಚೌಡಯ್ಯ ಪ್ರಾಧಿಕಾರ ಕನಸು


Team Udayavani, Dec 28, 2019, 1:05 PM IST

hv-tdy-1

ಹಾವೇರಿ: ಹನ್ನೆರಡನೇ ಶತಮಾನದ ಪ್ರಮುಖ ಶರಣರಲ್ಲಿ ಒಬ್ಬರಾದ ನಿಜಶರಣ ಅಂಬಿಗರ ಚೌಡಯ್ಯನವರ ಹೆಸರಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂಬ ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. ಬಹುವರ್ಷಗಳಿಂದ ಕನಸಾಗಿಯೇ ಉಳಿದಿರುವ ಪ್ರಾಧಿಕಾರ ರಚನೆ 2020ರ ಹೊಸ ವರ್ಷದಲ್ಲಾದರೂ ಸಾಕಾರಗೊಳ್ಳಬಹುದೆಂಬ ಆಸೆ ಚಿಗುರೊಡೆದಿದೆ. ಜ.14 ಹಾಗೂ 15ರಂದು ನಡೆಯುವ ನಿಜಶರಣ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವದಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಳ್ಳಲಿದ್ದು ಈ ಸಂದರ್ಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ಪ್ರಾ ಧಿಕಾರ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ.

ಅಭಿಮಾನಿಗಳಲ್ಲಿ ಬೇಸರ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ಪ್ರಾಧಿಕಾರ ರಚನೆ ಮೂಲಕ ಅಂಬಿಗರ ಚೌಡಯ್ಯನವರ ಸಮಾಧಿ ಸ್ಥಳದ ಅಭಿವೃದ್ಧಿ, ಅವರ ವಚನಗಳ ಸಂಗ್ರಹ, ಪ್ರಚಾರ ಮಾಡಬೇಕು ಎಂಬುದು ಸಮಾಜದವರ ಗುರಿಯಾಗಿದೆ. ಹೀಗಾಗಿ ಪ್ರಾಧಿಕಾರ ರಚಿಸಲು ಹಲವು ಬಾರಿ ಸರ್ಕಾರದ ಗಮನಸೆಳೆದರೂ ಅದು ಯಾವುದೇ ಪ್ರಯೋಜನಕ್ಕೆ ಬಾರದಿರುವುದು ಚೌಡಯ್ಯ ಅಭಿಮಾನಿಗಳಲ್ಲಿ ಬೇಸರವೂ ಮೂಡಿಸಿದೆ.

ಮರೀಚಿಕೆಯಾದ ಬೇಡಿಕೆ: ವಚನಗಳ ಮೂಲಕ ನಿಷ್ಠುರತೆಗೆ ಹೆಸರಾದ ಅಂಬಿಗರ ಚೌಡಯ್ಯನವರ ಜಯಂತಿಯನ್ನೂ ಮೊದಲು ಸರ್ಕಾರ ಮರೆತಿತ್ತು. ಸಮಾಜ ಸಂಘಟನೆಯ ಭಾರಿ ಒತ್ತಾಯ, ಹೋರಾಟದ ಫಲವಾಗಿ 2012ರಿಂದ ಸರ್ಕಾರ, ಪ್ರತಿವರ್ಷ ಜ.21ರಂದು ಅಂಬಿಗರ ಜಯಂತಿ ಆಚರಿಸುತ್ತ ಬಂದಿದೆ. ತನ್ಮೂಲಕ ಅಂಬಿಗರ ಚೌಡಯ್ಯನವರನ್ನು ನೆನೆಸುವ, ಉಪನ್ಯಾಸದ ಮೂಲಕ ಅವರ ವಚನದ ಗಟ್ಟಿತನ ಪ್ರಚಾರಪಡಿಸುವ ಕಾರ್ಯ ಆಗುತ್ತಿದೆ. ಕಳೆದ ವರ್ಷ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ರಚನೆಯಾಗಿದೆ. ಇದರಿಂದ ಗಂಗಾಮತಸ್ಥರಿಗೆ ಪ್ರತ್ಯೇಕವಾಗಿ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯ ಸಿಗುತ್ತಿದೆ. ಆದರೆ, ಅವರ ಹೆಸರಲ್ಲಿ ಅಭಿವೃದ್ಧಿ ಪ್ರಾಧಿಕಾರ ಆಗಬೇಕು ಎಂಬ ಬೇಡಿಕೆ ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ.

ವೈಜ್ಞಾನಿಕ ವಿಚಾರಗಳ ಶರಣ: ವೈಜ್ಞಾನಿಕ ವಿಚಾರಗಳನ್ನೊಳಗೊಂಡ ವಚನಗಳನ್ನು ರಚನೆ ಮಾಡಿರುವುದು ಚೌಡಯ್ಯನವರ ವಿಶೇಷತೆ. ಚೌಡಯ್ಯನವರ ವಚನಗಳು ಸಾವಿರಾರು ಸಂಖ್ಯೆಯಲ್ಲಿದ್ದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ 284 ವಚನಗಳನ್ನು ಮಾತ್ರ ಪ್ರಕಟಿಸಿದೆ. ಲಭ್ಯವಿರುವ ಅವರ ಎಲ್ಲ ವಚನಗಳನ್ನು ಮುದ್ರಿಸಿ, ಅದನ್ನು ಪ್ರಚುರಪಡಿಸುವ ಕಾರ್ಯ ಇನ್ನಷ್ಟು ಆಗಬೇಕಿದೆ. ಚೌಡಯ್ಯನವರ ವಚನಗಳನ್ನು ಮುದ್ರಿಸುವ ಜತೆಗೆ ರಾಣಿಬೆನ್ನೂರು ತಾಲೂಕಿನ ಚೌಡದಾನಪುರದಲ್ಲಿರುವ ಅವರ ಐಕ್ಯ ಸ್ಥಳದ ಅಭಿವೃದ್ಧಿ ಆಗಬೇಕಿದೆ. ಸ್ಮಾರಕದ ರೀತಿಯಲ್ಲಿ ಚೌಡಯ್ಯನವರ ಐಕ್ಯಸ್ಥಳದ ಅಭಿವೃದ್ಧಿ, ಆಯುರ್ವೇದ ಕಾಲೇಜು ಸ್ಥಾಪನೆ, ವೃದ್ಧಾಶ್ರಮ, ಗೋಶಾಲೆ ತೆರೆಯುವ ಇಚ್ಛೆ ಚೌಡಯ್ಯನವರ ಅಭಿಮಾನಿಗಳದ್ದಾಗಿದ್ದು, ಚೌಡಯ್ಯನವರ ಹೆಸರಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾದರೆ ಇವೆಲ್ಲ ಬೇಡಿಕೆ ಈಡೇರಿಸಿಕೊಳ್ಳಲು ಸಹಕಾರಿಯಾಗುತ್ತದೆ.

ನಿಜಶರಣ ಅಂಬಿಗರ ಚೌಡಯ್ಯನ ಅಭಿವೃದ್ಧಿ ಪ್ರಾಧಿಕಾರ ರಚನೆಗಾಗಿ ಸಮುದಾಯದ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿವೆ. ಆದರೆ, ಈವರೆಗೂ ಸರ್ಕಾರದಿಂದ ಪ್ರಾಧಿಕಾರ ರಚನೆಗೆ ಹಸಿರು ನಿಶಾನೆ ದೊರೆತಿಲ್ಲ. ಈಗ ಮುಖ್ಯಮಂತ್ರಿಯವರೇ ಚೌಡಯ್ಯನವರ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದರಿಂದ ಪ್ರಾಧಿಕಾರ ರಚನೆ ಬೇಡಿಕೆ ಈಡೇರುವ ನಿರೀಕ್ಷೆ ಹೊಂದಲಾಗಿದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.