ತೂಕದಲ್ಲಿ ಮೋಸ; ಹೂ ಬೆಳೆಗಾರರ ಆಕ್ರೋಶ


Team Udayavani, May 17, 2019, 4:52 PM IST

haveri–tdy-1..

ಹಾವೇರಿ: ಇತ್ತೀಚೆಗೆ ಎಪಿಎಂಸಿ ಅಧಿಕಾರಿಗಳು ಹೂ ಮಾರುಕಟ್ಟೆಗೆ ಭೇಟಿ ನೀಡಿ ತೂಕದ ಯಂತ್ರ ಪರಿಶೀಲಿಸಿದರು.

ಹಾವೇರಿ: ರೈತರಿಂದ ಹೂವು ಖರೀದಿಸುವಾಗ ನಗರದ ಹೂವಿನ ವ್ಯಾಪಾರಸ್ಥರು ತೂಕದಲ್ಲಿ ಭಾರಿ ವಂಚನೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರು ಕೇಳಿ ಬಂದಿದೆ.

ರೈತರು ಕಷ್ಟಪಟ್ಟು ಹೂವು ಬೆಳೆದು ಮಾರುಕಟ್ಟೆಗೆ ತಂದರೆ, ವ್ಯಾಪಾರಸ್ಥರು ಎಲೆಕ್ಟ್ರಾನಿಕ್‌ ತೂಕದ ಯಂತ್ರ ಬಳಸದೇ ಕೈತೂಕ ಬಳಸಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ತೂಕದಲ್ಲಿ ಮೋಸ ಮಾಡದಂತೆ ಈ ಹಿಂದೆ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ವ್ಯಾಪಾರಸ್ಥರಿಗೆ ಸಾಕಷ್ಟು ಎಚ್ಚರಿಕೆ ನೀಡಿದರೂ ವ್ಯಾಪಾರಸ್ಥರು ತಮ್ಮ ಹಳೆ ಚಾಳಿ ಮುಂದುವರಿಸಿಕೊಂಡು ಬಂದಿರುವುದು ಹೂ ಬೆಳೆಗಾರರ ಆಕ್ರೋಶಕ್ಕೆ ಗುರಿಯಾಗಿದೆ.

ನಗರದ ಜಿಲ್ಲಾಸ್ಪತ್ರೆ ಎದುರಿಗಿರುವ ಹೂವಿನ ವ್ಯಾಪಾರಿಗಳು ವಿದ್ಯುನ್ಮಾನ ತೂಕದ ಯಂತ್ರ ಹಾಗೂ ಕಲ್ಲಿನ ತೂಕದ ತಕ್ಕಡಿ ಎರಡನ್ನೂ ಹೊಂದಿದ್ದಾರೆ. ಎಪಿಎಂಸಿ ಅಕಾರಿಗಳು ಭೇಟಿ ನೀಡಿದಾಗೊಮ್ಮೆ ವಿದ್ಯುನ್ಮಾನ ಯಂತ್ರ ಬಳಸುವ ವ್ಯಾಪಾರಸ್ಥರು, ನಿತ್ಯ ಕಲ್ಲಿನ ತಕ್ಕಡಿ ಬಳಸುತ್ತಾರೆ. ರೈತರು ಹೊಲದಲ್ಲಿ ಕಟಾವು ಮಾಡಿ ವಿದ್ಯುನ್ಮಾನ ಯಂತ್ರದಲ್ಲಿ ತೂಗಿ ನೋಡಿದಾಗ 20 ಕೆಜಿ. ಇದ್ದ ಹೂವು ವ್ಯಾಪಾರಸ್ಥರ ಕಲ್ಲಿನ ತೂಕಕ್ಕೆ ಹಾಕಿದಾಗ 12-15 ಕೆ.ಜಿ. ತೂಗುತ್ತದೆ. ಪ್ರತಿ ತೂಕದಲ್ಲಿ ಐದರಿಂದ ಎಂಟು ಕೆಜಿ ವ್ಯತ್ಯಾಸವಾಗುವ ಮೂಲಕ ರೈತರಿಗೆ ಅನ್ಯಾಯವಾಗುತ್ತಿದೆ ಎಂಬುದು ರೈತರ ಆರೋಪ.

ಹೂವು ಖರೀದಿಸದ ಬೆದರಿಕೆ: ರೈತರಿಗೆ ಬಹಿರಂಗವಾಗಿಯೇ ಮೋಸ ನಡೆಯುತ್ತಿದ್ದರೂ ತೂಕ ಮಾಪನ ಇಲಾಖೆಯವರು ಮಾತ್ರ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಇನ್ನು ಈ ಮೋಸದ ಬಗ್ಗೆ ಯಾರಾದರೂ ಪ್ರಶ್ನೆ ಮಾಡಿದರೆ ವ್ಯಾಪಾರಸ್ಥರು ಅಂಥವರ ಹೂವು ಖರೀದಿ ಮಾಡುವುದಿಲ್ಲ ಎಂಬ ಬೆದರಿಕೆ ಹಾಕುತ್ತಾರೆ. ಕೆಲ ರೈತರು ಹೂವು ಮಾರಾಟವಾಗದಿದ್ದರೆ ಬಾಡಿ ನಷ್ಟವಾಗುತ್ತದೆ ಎಂಬ ಕಾರಣಕ್ಕೆ ಅವರು ತೂಗಿ ಹೇಳಿದಷ್ಟು ಹೂವಿನ ಹಣ ಪಡೆದು ಮರಳುತ್ತಾರೆ.

ಕೂಡಲೇ ಇಲ್ಲಿನ ಹೂವಿನ ಮಾರುಕಟ್ಟೆಯನ್ನು ಎಪಿಎಂಸಿಗೆ ಸ್ಥಳಾಂತರಿಸಿ ಅಲ್ಲಿ ಪಾರದರ್ಶಕವಾಗಿ ವ್ಯಾಪಾರ ನಡೆಯುವಂತೆ ಮಾಡಬೇಕು. ಇಲ್ಲವೇ ಇಲ್ಲಿಯೇ ಎಪಿಎಂಸಿಯ ಸಿಬ್ಬಂದಿ ನೇಮಕಗೊಳಿಸಿ ರೈತರಿಗೆ ಆಗುತ್ತಿರುವ ಮೋಸ ತಡೆಯಬೇಕು ಎಂಬುದು ರೈತರ ಆಗ್ರಹವಾಗಿದೆ.

ಅಧಿಕಾರಿಗಳು ಬಂದಾಗೊಮ್ಮೆ ಮೋಸ ಬಂದ್‌: ರೈತರ ದೂರು ಕೇಳಿ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಾಗಲೊಮ್ಮೆ ರೈತರಿಗೆ ತೂಕದಲ್ಲಿ ಮಾಡುವ ಮೋಸ ನಿಲ್ಲುತ್ತದೆ. ದಿನಗಳೆದಂತೆ ಮತ್ತೆ ಮೋಸದ ತೂಕ ತಲೆ ಎತ್ತಿಕೊಳ್ಳುತ್ತದೆ. ಅಧಿಕಾರಿಗಳು, ಎಪಿಎಂಸಿ ಅಧ್ಯಕ್ಷರು ಬಂದಾಗ ವಿದ್ಯುನ್ಮಾನ ಯಂತ್ರ ಬಳಕೆ ಮಾಡಿ ತೋರಿಸುವ ವ್ಯಾಪಾರಸ್ಥರು ಅವರು ಹೋದ ಬಳಿಕ ಮತ್ತೆ ಕೈ ತಕ್ಕಡಿ ಕೈಗೆ ಹಿಡಿಯುತ್ತಾರೆ.

ರೈತರ ದೂರಿನನ್ವಯ ಇತ್ತೀಚೆಗೆ ಮತ್ತೆ ಎಪಿಎಂಸಿ ಅಧಿಕಾರಿಗಳು ಹೂ ಮಾರುಕಟ್ಟೆಗೆ ಭೇಟಿ ನೀಡಿ ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಿದ್ದು ವ್ಯಾಪಾರಸ್ಥರು ಅವರ ಆದೇಶ ಎಷ್ಟು ದಿನ ಪಾಲಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.