ಮತದಾರರ ಗುರುತಿನ ಚೀಟಿ ಪರಿಶೀಲಿಸಿ
Team Udayavani, Oct 7, 2019, 1:15 PM IST
ಹಿರೇಕೆರೂರ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾ ಭವನದಲ್ಲಿ ಮತದಾರರ ಪಟ್ಟಿಯ ಸ್ವಯಂ ಪರಿಶೀಲನೆ ಮತ್ತು ದೃಢೀಕರಣ ಕಾರ್ಯಕ್ರಮದ ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ತಾಲೂಕು ಮಟ್ಟದ ಅಧಿಕಾರಿಗಳು, ಬಿಆರ್ಸಿ, ಸಿಆರ್ಪಿ ಮಟ್ಟದ ಅಧಿಕಾರಿಗಳು ಮತದಾರರ ಸ್ವಯಂ ಪರಿಶೀಲನೆ ಮತ್ತು ದೃಢೀಕರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ತಾಲೂಕಿನಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕು. ಬಿಎಲ್ಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಕೂಡಲೇ ಮನೆ, ಮನೆಗೆ ಹೋಗಿ ಪ್ರತಿಯೊಬ್ಬ ಮತದಾರರನ್ನು ಭೇಟಿಯಾಗಿ ಗುರುತಿನ ಚೀಟಿ ಪರಿಶೀಲಿಸಬೇಕು. ಆ ಮೂಲಕ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ಯಾರೂ ಮತದಾದಿಂದ ವಂಚಿತರಾಗಬಾರದು ಎಂದರು.
ಸಭೆಯಲ್ಲಿ ತಹಶೀಲ್ದಾರ್ ಆರ್.ಎಚ್.ಭಾಗವಾನ್, ಶಿರಸ್ತೇದಾರ್ ಎಂ.ಎಲ್.ಸಾರಥಿ, ಪಪಂ ಮುಖ್ಯಾ ಧಿಕಾರಿ ರಾಜಾರಾಮ ಪವಾರ, ಎಚ್.ವೈ.ಕೊಪ್ಪದ, ಆರತಿ ಡೋಣಿ, ಎನ್.ಎಸ್.ಕಟ್ಟಿಮನಿ ಮತ್ತು ಗುಡಿಗೇರಿ, ಕಂದಾಯ ನಿರೀಕ್ಷಕರು, ತಹಶೀಲ್ದಾರ್ ಕಾರ್ಯಾಲಯದ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.