ರಾಸಾಯನಿಕ ಬಳಸಿದ ತರಕಾರಿ ಹಾನಿಕರ


Team Udayavani, Sep 21, 2019, 3:29 PM IST

hv-tdy-3

ರಾಣಿಬೆನ್ನೂರ: ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಾನಗಲ್ಲ ತಾಲೂಕಿನ ಶಿಗ್ಗಿಹಳ್ಳಿ ಗ್ರಾಮದಲ್ಲಿ ಪೌಷ್ಟಿಕ ಕೈತೋಟದ ಪ್ರಮುಖ್ಯತೆ ಕುರಿತ ತರಬೇತಿ ಕಾರ್ಯಗಾರವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ವಿಜ್ಞಾನಿ ಡಾ| ಸಂತೋಷ ಎಚ್‌.ಎಂ. ಮಾತನಾಡಿ, ರೈತ ಮಹಿಳೆಯರಿಗೆ ತರಕಾರಿ ಮತ್ತು ಹಣ್ಣಿನ ಬೆಳೆಗಳ ಬೇಸಾಯ ಹೊಸದೇನಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಕೃಷಿಯು ಕೇವಲ ವಾಣಿಜ್ಯ ಬೆಳೆಗಳು ಮತ್ತು ಹೆಚ್ಚಿನ ಆದಾಯ ನೀಡುವ ಬೆಳೆಗಳಿಗೆ ಮಾತ್ರ ಸೀಮಿತವಾಗಿದೆ. ಪ್ರಸ್ತುತ ತರಕಾರಿ ಮತ್ತು ಹಣ್ಣುಗಳ ಬೇಸಾಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಔಷಧಿ  ಮತ್ತು ಗೊಬ್ಬರಗಳನ್ನು ಬಳಸುತ್ತಿರುವುದರಿಂದ ಇವುಗಳ ಬಳಕೆ ಆರೋಗ್ಯಕ್ಕೆ ಹಾನಿಕರವಾಗಿದೆ ಎಂದರು.

ಆದ್ದರಿಂದ ಮನೆಯ ಸುತ್ತಮುತ್ತಲಿನ ಖಾಲಿ ಜಾಗದಲ್ಲಿ, ಆರೋಗ್ಯ ರಕ್ಷಿಸಿಕೊಳ್ಳಲು ಪೌಷ್ಟಿಕ ಕೈತೋಟ ಮಾಡಿಕೊಳ್ಳುವುದು ಅಗತ್ಯವಿದೆ. ಇದರಿಂದ ಕಡಿಮೆ ಖರ್ಚಿನಲ್ಲಿ ಪ್ರತಿದಿನ ತಾಜಾ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಮನೆಯ ಸದಸ್ಯರು ಸವಿಯಬಹುದು. ಆರೋಗ್ಯವಂತ ಮನುಷ್ಯನು ಪ್ರತಿದಿನ ಸೊಪ್ಪು, ಹೂ, ಕಾಯಿ, ಹಣ್ಣು ಮತ್ತು ಬೇರಿನ ತರಕಾರಿಗಳನ್ನು ಒಳಗೊಂಡಂತೆ ಕನಿಷ್ಟ 325 ಗ್ರಾಂ ನಷ್ಟು ತರಕಾರಿ ಹಾಗೂ 100 ಗ್ರಾಂ ಹಣ್ಣನ್ನು ಪ್ರತಿದಿನ ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾಗುವ ವಿಟಮಿನ, ಖನಿಜಾಂಶ, ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿ ದೊರಕುತ್ತವೆ ಎಂದರು.

ಕೈತೋಟದಲ್ಲಿ ಬೇರಿನ ತರಕಾರಿಗಳಾದ ಬೀಟ್‌ ರೊಟ್‌, ಮೂಲಂಗಿ ಹಾಗೂ ಸೊಪ್ಪಿನ ತರಕಾರಿಗಳಾದ ದಂಟಿನ ಸೊಪ್ಪು, ಕೊತ್ತಂಬರಿ, ಮೆಂತೆ, ಪಾಲಕ, ಕರಿಬೇವು ಸೊಪ್ಪು, ಈರುಳ್ಳಿ ಜತೆಗೆ ಕಾಯಿ ಮತ್ತು ಹಣ್ಣಿನ ರೂಪದಲ್ಲಿ ಬಳಸುವ ಟೋಮ್ಯಾಟೊ, ಬದನೆ, ಮೆಣಸಿನಕಾಯಿ, ಹಿರೇಕಾಯಿ, ಹಾಗಲಕಾಯಿ, ಸೌತೆಕಾಯಿ, ಬೆಂಡೆ, ತೊಂಡೆಕಾಯಿ, ಕುಂಬಳಕಾಯಿ, ನುಗ್ಗೆ, ತಿಂಗಳ ಹುರುಳಿ, ಅಲಸಂ , ಅವರೆಕಾಯಿ ಇತ್ಯಾದಿ ತರಕಾರಿಗಳನ್ನು ಹಾಗೂ ಸಪೋಟ, ಪೇರಲ, ಪಪ್ಪಾಯ, ಮಾವು, ನಿಂಬೆ, ಸೀತಾಫಲ, ಬಾಳೆ ಸೇರಿದಂತೆ ಇತ್ಯಾದಿ ಹಣ್ಣಿನ ಬೆಳೆಗಳನ್ನು ಮಾಡಬಹುದು ಎಂದು ತಿಳಿಸಿದರು,

ಡಾ| ರಾಜಕುಮಾರ ಜಿ.ಆರ್‌. ಮಾತನಾಡಿ, ಸಾವಯವ ಗೊಬ್ಬರ ಬಳಕೆ ಮಾಡುವುದರಿಂದ ಫಲವತ್ತತೆ ಹೆಚ್ಚಾಗುವುದು. ಕೈತೋಟದ ಒಂದು ಮೂಲೆಯಲ್ಲಿ ಎರೆಹುಳು, ಗೊಬ್ಬರ ತಯಾರಿಸಲು ಅವಕಾಶ ಮಾಡಿಕೊಂಡು, ಸಿಗುವಂತಹ ಕಳೆ, ಬೆಳೆಯ ಅವಶೇಷಗಳನ್ನು ಬಳಸಿಕೊಳ್ಳಬಹುದು. ಎರೆಹುಳು ಗೊಬ್ಬರವು ಬೆಳೆಗೆ ಬೇಕಾಗುವ ಪೋಷಕಾಂಶ ಹೊಂದಿರುವ ಜತೆಗೆ ಹ್ಯೂಮಸ್‌ ಅಂಶವನ್ನು ನೀಡುತ್ತದೆ.

ಮಣ್ಣಿನಲ್ಲಿ ನೀರು ಹಿಡಿದಿಡುವ ಜತೆಗೆ ಖನಿಜಾಂಶಗಳು ಮಳೆ ನೀರಿನೊಂದಿಗೆ ಕೊಚ್ಚಿ ಹೋಗುವುದನ್ನು ತಡೆದು ಮಣ್ಣಿನ ಗುಣಮಟ್ಟವನ್ನು ಉತ್ತಮ ಪಡಿಸುತ್ತದೆ ಎಂದು ವಿವರಿಸಿದರು. ಡಾ| ಶಿವಮೂರ್ತಿ ಡಿ., ತರಕಾರಿ ಬೀಜಗಳ ಬಿತ್ತುವ ಕ್ರಮ, ಕಳೆ ನಿರ್ವಹಣೆ, ಸಮಗ್ರ ಕೃಷಿ ಪದ್ಧತಿ ಹಾಗೂ ಕಾಂಪೋಸ್ಟ್‌ ತಯಾರಿಕೆ ಬಗ್ಗೆ ರೈತರಿಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಡಾ| ಮಹೇಶ ಕಡಗಿ ಆರೋಗ್ಯವಂತ ಬದುಕಿಗೆ ಹಾಲಿನ ಮಹತ್ವ ಹಾಗೂ ರಾಸುಗಳಿಗೆ ಮೇವಿನ ಬೆಳೆಗಳ ಬಗ್ಗೆ ಮಾಹಿತಿ

ನೀಡಿದರು. ತರಬೇತಿಯಲ್ಲಿ 40ಕ್ಕೂ ಅಧಿಕ ರೈತ ಮಹಿಳೆಯರು ಮತ್ತು ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.