ನಗರದ ಕಸ ನಗರದಲ್ಲೇ ವಿಲೇವಾರಿ!


Team Udayavani, May 12, 2019, 4:19 PM IST

hav-1

ಹಾವೇರಿ: ಕಸ ವಿಲೇವಾರಿಗೆ ನಿಗದಿತ ಪ್ರತ್ಯೇಕ ಸ್ಥಳವಿದ್ದರೂ ನಗರದ ವಿವಿಧೆ ಇರುವ ಖಾಲಿ ಜಾಗ, ರಸ್ತೆ ಪಕ್ಕದಲ್ಲಿಯೇ ಕಸ ಚೆಲ್ಲಿ, ನಗರದಲ್ಲಿನ ಕಸ ನಗರದಲ್ಲಿಯೇ ವಿಲೇವಾರಿಯಾಗುತ್ತಿದೆ. ಈ ಮೂಲಕ ಕೆರೆ ನೀರು ಕೆರೆಗೆ ಚೆಲ್ಲಿ ಎಂಬ ಗಾದೆಯನ್ನು ನಗರ ಸಭೆಯವರು ವಿಭಿನ್ನವಾಗಿ ಪಾಲಿಸುತ್ತಿರುವಂತಿದೆ.

ನಗರದ ಪಿ.ಬಿ. ರಸ್ತೆ ಅಕ್ಕಪಕ್ಕ, ಬಸ್‌ ನಿಲ್ದಾಣ, ಹಾನಗಲ್ಲ ರಸ್ತೆ, ಜಿಲ್ಲಾಸ್ಪತ್ರೆ ಸುತ್ತಮುತ್ತ, ಎಂ.ಜಿ. ರಸ್ತೆ, ಇಜಾರಿಲಕಮಾಪುರ, ಕಾಗಿನೆಲೆ ರಸ್ತೆ, ಹುಕ್ಕೇರಿಮಠದ ರಸ್ತೆ, ದಾನೇಶ್ವರ ನಗರ ರಸ್ತೆ ಸೇರಿದಂತೆ ನಗರದ ವಿವಿಧೆಡೆ ರಾಶಿ ರಾಶಿಯಾಗಿ ಬಿದ್ದಿರುವ ಕಸದ ಗುಡ್ಡೆಗಳು ಕಣ್ಣಿಗೆ ರಾಚುತ್ತಿದ್ದು ಸುತ್ತಲಿನ ವಾತಾವರಣದಲ್ಲಿ ದುರ್ನಾತ ಬೀರುತ್ತಿವೆ.

ನಗರದ ಪಿ.ಬಿ. ರಸ್ತೆ ಅಕ್ಕಪಕ್ಕ, ಬಸ್‌ ನಿಲ್ದಾಣ ಸೇರಿದಂತೆ ಪ್ರಮುಖ ಸಾರ್ವಜನಿಕ ಪ್ರದೇಶದಲ್ಲಿ ಕಸವೆಲ್ಲ ಚರಂಡಿ ಶೇಖರಣೆಯಾಗಿದೆ. ಧಾರಾಕಾರ ಮಳೆ ಸುರಿದಾಗ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೇ ರಸ್ತೆಯ ಮೇಲೆ ಹರಿದು ಸಂಚಾರಕ್ಕೆ ವ್ಯತ್ಯಯ ಉಂಟಾಗುತ್ತಿದೆ. ಖಾಲಿ ನಿವೇಶನ, ಪುರಾತನ ಕೆರೆ, ಉದ್ಯಾನವನಗಳಿಗೂ ಕಸ ವ್ಯಾಪಿಸಿದೆ. ನಾಗೇಂದ್ರನಮಟ್ಟಿ ಎಂಬುದು ನಗರಸಭೆಯ ಅಘೋಷಿತ ತ್ಯಾಜ್ಯ ವಿಲೇವಾರಿ ಸ್ಥಳವಾಗಿ ಮಾರ್ಪಟ್ಟಿದೆ. ಚರಂಡಿಗಳು ಕಸದಿಂದ ತುಂಬಿಕೊಳ್ಳುತ್ತಿವೆ.

ಪೌರ ಕಾರ್ಮಿಕರು ಎಷ್ಟೇ ಶ್ರಮವಹಿಸಿದರೂ ನಗರದ ಕಸದಿಂದ ಮುಕ್ತಿಗೊಳಿಸಲು ಸಾಧ್ಯವಾಗುತ್ತಿಲ್ಲ. ಸುಮಾರು 70ಸಾವಿರ ಜನಸಂಖ್ಯೆ ಹೊಂದಿರು ನಗರದ ಸ್ಥಿತಿ ಈಗಲೇ ಹೀಗಾದರೆ ಮುಂದೇನು ಎಂಬ ಆತಂಕ ನಾಗರಿಕರನ್ನು ಕಾಡುತ್ತಿದೆ. ನಗರದ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಸಮೀಪದ ಗೌರಾಪುರ ಗುಡ್ಡದಲ್ಲಿ ವಿಲೇವಾರಿ ಘಟಕ ಸ್ಥಾಪನೆಗೆ ಜಮೀನು ಖರೀದಿಸಿದೆ. ನಗರದ ಎಲ್ಲ ಕಸವನ್ನು ಅಲ್ಲಿಗೆ ಕೊಂಡೊಯ್ಯಲು ಟ್ರ್ಯಾಕ್ಟರ್‌, ಲಾರಿಗಳನ್ನು ಮೀಸಲಿಡಲಾಗಿದೆ. ಆದರೆ, ನಿತ್ಯ ಒಂದರಿಂದ ಎರಡು ಲೋಡ್‌ ಕಸ ಮಾತ್ರ ಗೌರಾಪುರ ಗುಡ್ಡವನ್ನು ತಲುಪುತ್ತಿದೆ. ಅಲ್ಲಿಯೂ ಎಲ್ಲೆಂದರಲ್ಲಿ ಕಸವನ್ನು ಎಸೆಯಲಾಗುತ್ತಿದ್ದು, ಮಾಲಿನ್ಯ ಉಂಟಾಗುವಂತೆ ಬೆಂಕಿ ಹಾಕಿ ಸುಡಲಾಗುತ್ತಿದೆ.

ಪ್ರತಿ ತಿಂಗಳು ತ್ಯಾಜ್ಯ ವಿಲೇವಾರಿಗೆಂದು ಲಕ್ಷಾಂತರ ರೂ., ಖರ್ಚು ಮಾಡುತ್ತಿದ್ದರೂ ಕಸ ಮಾತ್ರ ನಗರದಿಂದ ಹೊರ ಹೋಗುತ್ತಿಲ್ಲ. ನಗರಸಭೆಯ ಈ ರೀತಿಯ ನಿರ್ಲಕ್ಷ್ಯ ಧೋರಣೆಯಿಂದ ಜನ ದುರ್ನಾತದ ಮಧ್ಯೆಯೇ ಬದುಕುವಂತಾಗಿದೆ. ಕಸದ ಹೆಚ್ಚಳದಿಂದ ಹಂದಿಗಳ ಉಪಟಳ ವಿಪರೀತವಾಗಿದೆ. ಕಾರಣ ಕಸದ ಸೂಕ್ತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂಬುದು ಜನತೆಯ ಆಗ್ರಹವಾಗಿದೆ.

ನಗರದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಕಸ ತುಂಬಿಕೊಂಡು ಹೋಗಿ ಗೌರಾಪುರದ ವಿಲೇವಾರಿ ಘಟಕಕ್ಕೆ ಹಾಕುವ ಬದಲಿಗೆ ನಗರದ ಯಾವುದೋ ಖಾಲಿ ಪ್ರದೇಶದಲ್ಲಿ, ಜನಸಂಚಾರ ಕಡಿಮೆ ಇರುವ ರಸ್ತೆಗಳ ಪಕ್ಕದಲ್ಲಿಯೇ ಸುರಿಯಲಾಗುತ್ತಿದೆ. ಕಸ ವಿಲೇವಾರಿ ನಗರದಲ್ಲಿ ಸಮರ್ಪಕವಾಗಿ ಆಗದೆ ಇರುವುದರಿಂದ ನಗರದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ.

•ಶಿವಯೋಗಿ, ನಗರ ನಿವಾಸಿ

ನಗರದ ಕಸವನ್ನು ಸಮೀಪದ ಗೌರಾಪುರದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಒಯ್ದು ಹಾಕಬೇಕು. ಒಂದು ವೇಳೆ ನಗರದಲ್ಲಿಯೇ ಕಸ ಹಾಕುತ್ತಿದ್ದರೆ ಘನತ್ಯಾಜ್ಯ ವಿಲೇವಾರಿ ಘಟಕಕ್ಕೇ ಕಸ ಒಯ್ಯುವಂತೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು.

•ಪೌರಾಯುಕ್ತರು, ನಗರಸಭೆ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.