ಹಸಿ ಕಸ-ಒಣ ಕಸ ಬೇರ್ಪಡಿಸಿ ಸಹಕರಿಸಿ: ಶೈಲಾ
Team Udayavani, Mar 24, 2021, 2:47 PM IST
ಸವಣೂರ: ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಪುರಸಭೆಯ ಕಸ ಸಂಗ್ರಹಣಾ ವಾಹನದಲ್ಲಿ ಹಾಕುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಇದರಿಂದ, ಶುದ್ಧ ವಾತಾವರಣ ನಿರ್ಮಿಸಲು ಸಾಧ್ಯ ಎಂದು ಪುರಸಭೆ ಅಧ್ಯಕ್ಷೆ ಶೈಲಾ ಹನುಮಂತಗೌಡ ಮುದಿಗೌಡ್ರ ತಿಳಿಸಿದರು.
ಪಟ್ಟಣದ ಪುರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಾರಕ್ಕೊಂದು ವಾರ್ಡ್ ಸ್ವಚ್ಛತೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗರಿಕರು ಈ ಮೂಲಕ ಪುರಸಭೆಯೊಂದಿಗೆ ಸಹಕರಿಸಿ ತ್ಯಾಜ್ಯ ಮುಕ್ತ ಸವಣೂರ ಸಂಕಲ್ಪಕ್ಕೆ ಮುಂದಾಗಬೇಕು ಎಂದರು. ಶುದ್ಧ ವಾತಾವರಣ ನಿರ್ಮಾಣವಾಗ ಬೇಕಾದರೆ ಸುತ್ತಮುತ್ತಲಿನ ಪರಿಸರದ ಸ್ವಚ್ಛವಾಗಿರಬೇಕು. ಇದನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಕಸವನ್ನು ಒಂದೆಡೆ ಶೇಖರಣೆ ಮಾಡಿ ಕಸ ಸಂಗ್ರಹಣಾ ವಾಹನಕ್ಕೆ ಒಪ್ಪಿಸುವ ಮೂಲಕ ನಗರದ ಸ್ವಚ್ಛತೆಗೆ ಪುರಸಭೆ ಯೊಂದಿಗೆ ಕೈಜೋಡಿಸಬೇಕು. ಪುರಸಭೆಯಲ್ಲಿ ಕಾರ್ಯ ನಿರ್ವಹಿಸುವ ಸರ್ವ ಪೌರ ಕಾರ್ಮಿಕರು, ಸಿಬ್ಬಂದಿಯೊಂದಿಗೆ ಜನಪತ್ರಿನಿಧಿಗಳು ಹಾಗೂ ಸಮಾಜ ಸೇವಾಸಕ್ತರು ಭಾಗವಹಿಸಿ ಸ್ವಚ್ಛತೆ ಕೈಗೊಳ್ಳುವ ಮೂಲಕ ಪಟ್ಟಣದ ಸ್ವಚ್ಛತೆಗೆ ಕೈ ಜೋಡಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಾರಕ್ಕೊಂದು ವಾರ್ಡಿನಂತೆ, ಪಟ್ಟಣದ 27 ವಾರ್ಡ್ಗಳಲ್ಲಿ ಸಂಪೂರ್ಣ ಸ್ವಚ್ಛತೆಗೆ ಮೊದಲ ಹಂತದ ಕಾರ್ಯ ಆರಂಭಿಸಲಾಗಿದೆ ಎಂದು ತಿಳಿಸಿದರು.
ಉಪಾಧ್ಯಕ್ಷ ಅಲ್ಲಾವುದೀನ್ ಮನಿಯಾರ, ಸದಸ್ಯರಾದ ಮಹೇಶ ಮುದಗಲ್ಲ,ಸದಾನಂದ ಕೆಮ್ಮಣಕೇರಿ, ಪ್ರಮುಖರಾದಹನುಮಂತಗೌಡ ಮುದಿಗೌಡ್ರ, ರಾಮಣ್ಣಸಂಕ್ಲಿಪೂರ, ಶ್ರೀಕಾಂತ ಲಕ್ಷ್ಮೇಶ್ವರ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ, ಪೌರ ಕಾರ್ಮಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ