ನವೀನ್ಗೆ ಸಿಎಂ ಚಿನ್ನದ ಪದಕ
Team Udayavani, Jul 14, 2021, 9:15 PM IST
ಹಾವೇರಿ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವುದಕ್ಕಾಗಿ ಬೆಂಗಳೂರು ಹೆಬ್ಟಾಳ ಅಗ್ನಿಶಾಮಕದಳ ಕಚೇರಿ ವಾಹನ ಚಾಲಕ ಎಸ್.ನವೀನ್ ಅವರಿಗೆ ಮಂಗಳವಾರ ಮುಖ್ಯಮಂತ್ರಿಗಳು ಚಿನ್ನದ ಪದಕ ಪ್ರದಾನ ಮಾಡಿದ್ದಾರೆ.
ನವೀನ್ ಅವರು ಸುಮಾರು 14 ವರ್ಷಗಳಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಚಾಲಕರಾಗಿದ್ದು, ಈ ವೃತ್ತಿಯ ಜೊತೆಯಲ್ಲಿ ಅ ಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಯೊಂದಿಗೆ ಅಗ್ನಿ ಅವಘಡ, ತುರ್ತು ಸೇವೆಯ ಸಂದರ್ಭದಲ್ಲಿ ಸಹಾಯ ಮಾಡಲು ಸದಾ ಸಿದ್ಧರಿರುತ್ತಾರೆ. 2019ರಲ್ಲಿ ಧಾರವಾಡದಲ್ಲಿ ನಡೆದ ಕಟ್ಟಡ ಕುಸಿತ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಹಲವಾರು ಜೀವಗಳನ್ನು ರಕ್ಷಿಸಿದ ಕೀರ್ತಿ ಇವರದ್ದಾಗಿದೆ.