ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ


Team Udayavani, May 13, 2019, 4:02 PM IST

hav-4

ರಾಣಿಬೆನ್ನೂರ: ‘ಕಾಲಮಿತಿಯಲ್ಲಿ ಕೆರೆ ಅಭಿವೃದ್ಧಿ ಅನುಮಾನ’ ಎಂಬ ತಲೆ ಬರಹದಡಿ ಏ. 27 ರಂದು ಉದಯವಾಣಿಯಲ್ಲಿ ಸುದ್ದಿ ಪ್ರಕಟವಾಗಿದ್ದ ಹಿನ್ನೆಲೆ ಮಾಜಿ ಸಭಾಪತಿ ಕೆ.ಬಿ.ಕೋಳಿವಾಡ ಅವರು ಇಲ್ಲಿನ ದೊಡ್ಡಕೆರೆ ಕಾಮಗಾರಿ ವೀಕ್ಷಿಸಿ, ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿ ಮಾರುತಿ ಗುಜ್ಜರ ಅವರಿಗೆ ಸೂಚಿಸಿದರು.

ಕೇಂದ್ರ ಪುರಸ್ಕೃತ ಅಮೃತ್‌ ಯೋಜನೆಯಡಿ 29.82 ಕೋಟಿ ರೂ.ಗಳಲ್ಲಿ ಕಾಮಗಾರಿ ಪ್ರಾರಂಭವಾಗಿ 6 ತಿಂಗಳು ಗತಿಸಿದರೂ ಕೇವಲ ಶೇ.20 ರಷ್ಟು ಕಾಮಗಾರಿಯಾಗಿದೆ. ಕೆಲವು ದಿನಗಳಿಂದ ಕಾಮಗಾರಿಯೂ ಸ್ಥಗಿತಗೊಂಡಿದೆ. ಈ ರೀತಿ ಸಾಗಿದರೆ 24 ತಿಂಗಳ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವುದು ಅಸಾಧ್ಯ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುವುದು ಸೂಕ್ತ ಎಂಬ ಸುದ್ದಿ ಪ್ರಕಟವಾಗಿತ್ತು.

ಕೆರೆ ವೀಕ್ಷಣೆ ಮಾಡಿ ಮಾತನಾಡಿದ ಮಾಜಿ ಸಭಾಪತಿ ಕೆ.ಬಿ.ಕೋಳಿವಾಡ ಅವರು, ನಗರದ ಜನರು ಕುಡಿಯುವ ನೀರಿಗೆ ಪರಿತಪಿಸಬಾರದು ಎಂಬ ಉದ್ದೇಶದಿಂದ ನಗರದ ಗಂಗಾಜಲ ದೊಡ್ಡ ಕೆರೆ ಹಾಗೂ ತಾಲೂಕಿನ ಕರೂರ, ಚಳಗೇರಿ, ಕಮದೋಡ ಕೆರೆಗಳಿಗೆ ಅಪ್ಪರ ತುಂಗಾ ಕಾಲುವೆಯ ಮೂಲಕ ನೀರು ತುಂಬಿಸುವ 100 ಕೋಟಿ ರೂ.ಗಳ ಕ್ರೀಯಾ ಯೋಜನೆ ತಯಾರಿಸಿ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಗಂಗಾಜಲ ದೊಡ್ಡ ಕೆರೆ ಅಭಿವೃದ್ಧಿಪಡಿಸುವ ಕನಸು ನನ್ನದಾಗಿತ್ತು. ಕಾರಣಾಂತರದಿಂದ ರಾಜಕೀಯ ಬೆಳವಣಿಗೆಯಿಂದ ಮುಂದುವರಿಸಲು ಸಾಧ್ಯವಾಗಲಿಲ್ಲ. ನಂತರ ಶಾಸಕ ಆರ್‌.ಶಂಕರ್‌ ಮತ್ತು ಸಂಸದ ಶಿವಕುಮಾರ ಉದಾಸಿ ಅವರು ಈ ಯೋಜನೆಗೆ 2018 ಅ. 5ರಂದು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದು ಸ್ವಾಗತಾರ್ಹ. ತಾಲೂಕಿನ ಅಭಿವೃದ್ಧಿ ಯಾರೇ ಮಾಡಿದರೂ ಸಂತೋಷದ ವಿಷಯ. ಆದರೆ, ಅಭಿವೃದ್ಧಿ ಕಾಮಗಾರಿಗಳತ್ತ ಗಮನ ಹರಿಸುವುದು ಸೂಕ್ತ ಎಂದರು.

ಈ ಸಂದರ್ಭದಲ್ಲಿ ನೀಲಕಂಠಪ್ಪ ಕುಸಗೂರ, ಬಸನಗೌಡ ಮರದ, ಪುಟ್ಟಪ್ಪ ಮರಿಯಮ್ಮನವರ, ಶೇಖಪ್ಪ ಹೊಸಗೌಡ್ರ, ಶೇರುಖಾನ್‌ ಕಾಬೂಲಿ, ಬಸವರಾಜ ಹುಚ್ಚಗೊಂಡರ, ಸಿದ್ದಣ್ಣ ಚಿಕ್ಕಬಿದರಿ, ಇಕ್ಬಾಲಸಾಬ್‌ ರಾಣೆಬೆನ್ನೂರ, ಗಂಗಾಧರ ಬಣಕಾರ, ಶಶಿಧರ ಬಸೇನಾಯ್ಕರ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ಪ್ರಾರಂಭದಲ್ಲಿ ಚುರುಕುಗೊಂಡಿದ್ದ ಕಾಮಗಾರಿ ಪ್ರಸ್ತುತ ಮಂದಗತಿಯಲ್ಲಿ ಸಾಗಿದೆ ಎಂಬ ಸುದ್ದಿ ಉದಯವಾಣಿಯಲ್ಲಿ ಪ್ರಕಟವಾದ ವರದಿ ನೋಡಿ ಇಂದು ಕೆರೆ ವೀಕ್ಷಣೆ ಮಾಡಲು ಆಗಮಿಸಿದ್ದೇನೆ. ಸಮ್ಮಿಶ್ರ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತದೆ. ಸಾರ್ವಜನಿಕರ ಅಭ್ಯುದಯಕ್ಕೆ ನಾನು ಸದಾಸಿದ್ಧನಾಗಿದ್ದು, ಅಧಿಕಾರಿಗಳ ಮೇಲೆ ಒತ್ತಡ ತಂದು ಕೆರೆ ಅಭಿವೃದ್ಧಿ ಕಾಮಗಾರಿ ಕಾಲ ಮಿತಿಯಲ್ಲಿ ಪೂರ್ಣಗೊಳಿಸಲು ಶ್ರಮಿಸುವೆ.
•ಕೆ.ಬಿ.ಕೋಳಿವಾಡ,ಮಾಜಿ ಸಭಾಪತಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.