ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ


Team Udayavani, May 13, 2019, 4:02 PM IST

hav-4

ರಾಣಿಬೆನ್ನೂರ: ‘ಕಾಲಮಿತಿಯಲ್ಲಿ ಕೆರೆ ಅಭಿವೃದ್ಧಿ ಅನುಮಾನ’ ಎಂಬ ತಲೆ ಬರಹದಡಿ ಏ. 27 ರಂದು ಉದಯವಾಣಿಯಲ್ಲಿ ಸುದ್ದಿ ಪ್ರಕಟವಾಗಿದ್ದ ಹಿನ್ನೆಲೆ ಮಾಜಿ ಸಭಾಪತಿ ಕೆ.ಬಿ.ಕೋಳಿವಾಡ ಅವರು ಇಲ್ಲಿನ ದೊಡ್ಡಕೆರೆ ಕಾಮಗಾರಿ ವೀಕ್ಷಿಸಿ, ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿ ಮಾರುತಿ ಗುಜ್ಜರ ಅವರಿಗೆ ಸೂಚಿಸಿದರು.

ಕೇಂದ್ರ ಪುರಸ್ಕೃತ ಅಮೃತ್‌ ಯೋಜನೆಯಡಿ 29.82 ಕೋಟಿ ರೂ.ಗಳಲ್ಲಿ ಕಾಮಗಾರಿ ಪ್ರಾರಂಭವಾಗಿ 6 ತಿಂಗಳು ಗತಿಸಿದರೂ ಕೇವಲ ಶೇ.20 ರಷ್ಟು ಕಾಮಗಾರಿಯಾಗಿದೆ. ಕೆಲವು ದಿನಗಳಿಂದ ಕಾಮಗಾರಿಯೂ ಸ್ಥಗಿತಗೊಂಡಿದೆ. ಈ ರೀತಿ ಸಾಗಿದರೆ 24 ತಿಂಗಳ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವುದು ಅಸಾಧ್ಯ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುವುದು ಸೂಕ್ತ ಎಂಬ ಸುದ್ದಿ ಪ್ರಕಟವಾಗಿತ್ತು.

ಕೆರೆ ವೀಕ್ಷಣೆ ಮಾಡಿ ಮಾತನಾಡಿದ ಮಾಜಿ ಸಭಾಪತಿ ಕೆ.ಬಿ.ಕೋಳಿವಾಡ ಅವರು, ನಗರದ ಜನರು ಕುಡಿಯುವ ನೀರಿಗೆ ಪರಿತಪಿಸಬಾರದು ಎಂಬ ಉದ್ದೇಶದಿಂದ ನಗರದ ಗಂಗಾಜಲ ದೊಡ್ಡ ಕೆರೆ ಹಾಗೂ ತಾಲೂಕಿನ ಕರೂರ, ಚಳಗೇರಿ, ಕಮದೋಡ ಕೆರೆಗಳಿಗೆ ಅಪ್ಪರ ತುಂಗಾ ಕಾಲುವೆಯ ಮೂಲಕ ನೀರು ತುಂಬಿಸುವ 100 ಕೋಟಿ ರೂ.ಗಳ ಕ್ರೀಯಾ ಯೋಜನೆ ತಯಾರಿಸಿ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಗಂಗಾಜಲ ದೊಡ್ಡ ಕೆರೆ ಅಭಿವೃದ್ಧಿಪಡಿಸುವ ಕನಸು ನನ್ನದಾಗಿತ್ತು. ಕಾರಣಾಂತರದಿಂದ ರಾಜಕೀಯ ಬೆಳವಣಿಗೆಯಿಂದ ಮುಂದುವರಿಸಲು ಸಾಧ್ಯವಾಗಲಿಲ್ಲ. ನಂತರ ಶಾಸಕ ಆರ್‌.ಶಂಕರ್‌ ಮತ್ತು ಸಂಸದ ಶಿವಕುಮಾರ ಉದಾಸಿ ಅವರು ಈ ಯೋಜನೆಗೆ 2018 ಅ. 5ರಂದು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದು ಸ್ವಾಗತಾರ್ಹ. ತಾಲೂಕಿನ ಅಭಿವೃದ್ಧಿ ಯಾರೇ ಮಾಡಿದರೂ ಸಂತೋಷದ ವಿಷಯ. ಆದರೆ, ಅಭಿವೃದ್ಧಿ ಕಾಮಗಾರಿಗಳತ್ತ ಗಮನ ಹರಿಸುವುದು ಸೂಕ್ತ ಎಂದರು.

ಈ ಸಂದರ್ಭದಲ್ಲಿ ನೀಲಕಂಠಪ್ಪ ಕುಸಗೂರ, ಬಸನಗೌಡ ಮರದ, ಪುಟ್ಟಪ್ಪ ಮರಿಯಮ್ಮನವರ, ಶೇಖಪ್ಪ ಹೊಸಗೌಡ್ರ, ಶೇರುಖಾನ್‌ ಕಾಬೂಲಿ, ಬಸವರಾಜ ಹುಚ್ಚಗೊಂಡರ, ಸಿದ್ದಣ್ಣ ಚಿಕ್ಕಬಿದರಿ, ಇಕ್ಬಾಲಸಾಬ್‌ ರಾಣೆಬೆನ್ನೂರ, ಗಂಗಾಧರ ಬಣಕಾರ, ಶಶಿಧರ ಬಸೇನಾಯ್ಕರ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ಪ್ರಾರಂಭದಲ್ಲಿ ಚುರುಕುಗೊಂಡಿದ್ದ ಕಾಮಗಾರಿ ಪ್ರಸ್ತುತ ಮಂದಗತಿಯಲ್ಲಿ ಸಾಗಿದೆ ಎಂಬ ಸುದ್ದಿ ಉದಯವಾಣಿಯಲ್ಲಿ ಪ್ರಕಟವಾದ ವರದಿ ನೋಡಿ ಇಂದು ಕೆರೆ ವೀಕ್ಷಣೆ ಮಾಡಲು ಆಗಮಿಸಿದ್ದೇನೆ. ಸಮ್ಮಿಶ್ರ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತದೆ. ಸಾರ್ವಜನಿಕರ ಅಭ್ಯುದಯಕ್ಕೆ ನಾನು ಸದಾಸಿದ್ಧನಾಗಿದ್ದು, ಅಧಿಕಾರಿಗಳ ಮೇಲೆ ಒತ್ತಡ ತಂದು ಕೆರೆ ಅಭಿವೃದ್ಧಿ ಕಾಮಗಾರಿ ಕಾಲ ಮಿತಿಯಲ್ಲಿ ಪೂರ್ಣಗೊಳಿಸಲು ಶ್ರಮಿಸುವೆ.
•ಕೆ.ಬಿ.ಕೋಳಿವಾಡ,ಮಾಜಿ ಸಭಾಪತಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.