ಸೇತುವೆ ಕಾಮಗಾರಿ ಕಳಪೆ ಖಂಡಿಸಿ ಪ್ರತಿಭಟನೆ


Team Udayavani, Dec 12, 2019, 3:07 PM IST

hv-tdy-1

ಬ್ಯಾಡಗಿ: ಮೋಟೆಬೆನ್ನೂರಗುತ್ತಲ ಮಾರ್ಗ ಮಧ್ಯದ ಅಳಲಗೇರಿ ಗ್ರಾಮದ ಬಳಿ ಒಂದೂವರೆ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆ ಕಾಮಗಾರಿ ಕಳಪೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಗುತ್ತಿಗೆದಾರನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿಅಳಲಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಬುಧವಾರ ಸೇತುವೆ ಬಳಿಯಲ್ಲಿ ಸೇರಿದ್ದ ಗ್ರಾಮಸ್ಥರು ಸೇತುವೆ ಕಾಮಗಾರಿಯಲ್ಲಿ ಕಳಪೆ ಸಾಮಗ್ರಿಗಳನ್ನು ಬಳಸಿ ನಿರ್ಮಿಸಿದ ಕಾರಣ ಸೇತುವೆ ಉದ್ಘಾಟನೆಗೂ ಮುನ್ನವೇ ಬಿರುಕು ಕಾಣಿಸುತ್ತಿವೆ ಎಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯವಾದಿ ರಾಮನಗೌಡ ತಂಗೊಡರ, ಮೋಟೆಬೆನ್ನೂರ ಗ್ರಾಮದಿಂದ ಅಳಲಗೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 1.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆ ಸಂಪೂರ್ಣ ಕಳಪೆಯಾಗಿದೆ. ಈ ಕುರಿತು ನಿರ್ಮಾಣ ಹಂತದಲ್ಲಿಯೇ ಹಲವು ಬಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇಷ್ಟಾದರೂ ಗುತ್ತಿಗೆದಾರನ ಕೈಗೊಂಬೆಗಳಂತೆ ವರ್ತಿಸಿದ ಅಧಿಕಾರಿಗಳು ಬೇಜವಾಬ್ದಾರಿತ ತೋರಿದ್ದಾರೆ. ಸಾರ್ವಜನಿಕರ ಬಳಕೆಗೂ ಮುನ್ನವೇ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕಳಪೆ ಮಟ್ಟದ ಸಾಮಗ್ರಿ ಬಳಸಿದ ಕಾರಣ ಸೇತುವೆ ಈ ಸ್ಥಿತಿ ಬಂದಿದ್ದು, ಇಂತಹ ಕಾಮಗಾರಿ ನಡೆಸಿದ ಗುತ್ತಿದಾರನನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದರು.

ಶರೀಫ್‌ ಕೋಟಿಯವರ ಮಾತನಾಡಿ, 2018ರಲ್ಲಿ ಆರಂಭವಾದ ಕಾಮಗಾರಿಯನ್ನು ಇದೆ-2019 ವರ್ಷದ 5ನೇ ತಿಂಗಳಿನಲ್ಲಿ ಮುಗಿಸಬೇಕಿತ್ತು. ಆದರೆ, ಈ ವರೆಗೂ ಗುತ್ತಿಗೆದಾರ ಕಾಮಗಾರಿ ಮುಕ್ತಾಯಗೊಳಿಸಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಅ ಧಿಕಾರಿಗಳು ಸಹ ಯಾವುದೇ ಮುತುವರ್ಜಿ ವಹಿಸುತ್ತಿಲ್ಲ. ಪರಿಣಾಮ ಸೇತುವೆ ಮುಂದಿನ ರಸ್ತೆ ಹಾಳು ಬಿದ್ದಿದ್ದು, ಸಂಚಾರ ದುಸ್ಥರವಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಗುತ್ತಿಗೆದಾರನಿಗೆ ಉಳಿದ ಬಿಲ್‌ ಪಾವತಿಸದಂತೆ ಆಗ್ರಹಿಸಿದರು.

ಶಾಂತಪ್ಪ ಕೋಟಿಯವರ ಮಾತನಾಡಿ, ಸೇತುವೆಗೆ ಬಳಸಿದ ಸಾಮಗ್ರಿಗಳು ಸಂಪೂರ್ಣ ಕಳಪೆಯಾಗಿದ್ದು, ಪರಿಣಾಮ ಈಗಾಗಲೇ ಸೇತುವೆ ಮೇಲಿನ ಸಿಮೆಂಟ್‌ ಸೇರಿದಂತೆ ಕೈಯಿಂದ ಕಿತ್ತರೂ ಕಲ್ಲುಗಳು ಹೊರಬರುತ್ತಿವೆ. ಸೇತುವೆ ಮೇಲೆ ಓಡಾಡಲು ಭಯವಾಗುತ್ತಿದೆ. ಸೇತುವೆಗೆ ಬಳಸಿದ ವಸ್ತುಗಳನ್ನು ಪರೀಕ್ಷೆ ಮಾಡಿಸಿದಲ್ಲಿ ಗುಣಮಟ್ಟದ ಸತ್ಯಾ ಸತ್ಯತೆ ಹೋರಬೀಳಲಿದೆ. ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಮಾಡಿದ್ದು, ಸರಕಾರಕ್ಕೆ ಸೇತುವೆಗೆ ಬಳಸಿದ ಮೊತ್ತವನ್ನು ಮರು ಭರಣ ಮಾಡಿಕೊಳ್ಳುವಂತೆ ಆಗ್ರಹಿಸಿದರು. ಬಸಣ್ಣ ಬಣಕಾರ, ಫಕ್ಕೀರಗೌಡ ತಂಗೊಡರ, ಸಂಜೀವ ಯಮನಕ್ಕನವರ, ರಾಜನಗೌಡ ತಂಗೊಡರ, ನಿಂಗಪ್ಪ ಹೊನ್ನತ್ತಿ, ಬೀರಪ್ಪ ಹೊನ್ನತ್ತಿ, ಕರಿಯಪ್ಪ ಮಾಗಳದ, ಹೊನ್ನಪ್ಪ ತಳವಾರ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.