ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗೊಂದಲ
Team Udayavani, Jun 5, 2020, 3:01 PM IST
ಹಾವೇರಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಗುರುವಾರ ಎಷ್ಟು ಜನರಲ್ಲಿ ದೃಢಪಟ್ಟಿದೆ ಎಂಬ ಮಾಹಿತಿ ಸ್ಪಷ್ಟತೆ ಇಲ್ಲದೇ ಕೆಲಹೊತ್ತು ಗೊಂದಲಕ್ಕೆಡೆ ಮಾಡಿಕೊಟ್ಟ ಪ್ರಸಂಗ ನಡೆಯಿತು.
ಜಿಲ್ಲಾಡಳಿತವು ಗುರುವಾರ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ನೀಡಿದರೆ, ರಾಜ್ಯ ಆರೋಗ್ಯ ಇಲಾಖೆ ಬುಲೆಟಿನ್ ಮೂಲಕ ಒಬ್ಬರಿಗೆ ಮಾತ್ರ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿತು. ಜಿಲ್ಲಾಡಳಿತ ನೀಡಿದ ಇಬ್ಬರು ಸೋಂಕಿತರ ವಿವರ ಮತ್ತು ರಾಜ್ಯ ಆರೋಗ್ಯ ಇಲಾಖೆ ನೀಡಿದ ಸೋಂಕಿತನ ವಿವರ ಬೇರೆ ಬೇರೆಯಾಗಿತ್ತು. ಜತೆಗೆ ರಾಜ್ಯ ಆರೋಗ್ಯ ಇಲಾಖೆ ನಮೂದಿಸಿದ ಸೋಂಕಿತನ ಮಾಹಿತಿ ಜಿಲ್ಲಾಡಳಿತದ ಬಳಿ ಇರಲಿಲ್ಲ. ಇದುವೇ ಗೊಂದಲಕ್ಕೆ ಕಾರಣವಾಯಿತು.
ಜಿಲ್ಲಾಧಿಕಾರಿಗಳು ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್ ಬರುವ ಮೊದಲೇ ಮುಂಬಯಿಯಿಂದ ಬಂದಿದ್ದ ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಶಿಗ್ಗಾವಿ ಮೂಲದ 46 ವರ್ಷದ ಮಹಿಳೆ ಹಾಗೂ ಬಂಕಾಪುರ ಪಟ್ಟಣದ ಕಂಟೇನ್ಮೆಂಟ್ ಪ್ರದೇಶದ 63 ವರ್ಷದ ವ್ಯಕಿಗೆ ಸೋಂಕು ದೃಢಪಟ್ಟಿದೆ. ಈ ಸೋಂಕಿತರ ಕ್ರಮಾಂಕ ಬರುವುದೊಂದೇ ಬಾಕಿ ಇದೆ ಎಂದು ತಿಳಿಸಿದ್ದರು.
ಆದರೆ, ಸಂಜೆ ಬಂದ ರಾಜ್ಯ ಬುಲೆಟಿನ್ನಲ್ಲಿ ಹಾವೇರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿದೆ. ದೆಹಲಿಯಿಂದ ಬಂದ 30 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ ಎಂದು ಉಲ್ಲೇಖವಿರುವುದು ಗೊಂದಲವುಂಟುಮಾಡಿತು. ಈ ಕುರಿತು ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಗುರುವಾರ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಆದರೆ, ಈ ವಿವರ ಬುಲೆಟಿನ್ನಲ್ಲಿ ನಮೂದಾಗಿಲ್ಲ. ನಾಳೆಯ ಬುಲೆಟಿನ್ನಲ್ಲಿ ರೋಗಿಯ ಸಂಖ್ಯೆ ನಮೂದಾಗಲಿದೆ. ಗುರುವಾರ ಬುಲೆಟಿನ್ ನಲ್ಲಿ ನಮೂದಾಗಿರುವ ಒಂದು ಪ್ರಕರಣ ಜಿಲ್ಲೆಯದಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ