ಎಸ್‌.ಆರ್‌. ಪಾಟೀಲ ಆರೋಪ ನಿರಾಧಾರ

ದಾಖಲೆ ಸಮೇತ ಸಾಬೀತುಪಡಿಸಲು ಸವಾಲು

Team Udayavani, May 10, 2022, 4:04 PM IST

18

ಬ್ಯಾಡಗಿ: ಕಾಂಗ್ರೆಸ್‌ ಮುಖಂಡ ಎಸ್‌.ಆರ್‌. ಪಾಟೀಲ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನನ್ನ ಕುಟುಂಬಕ್ಕೆ ಸೇರಿದವರು ಯಾವ ಕಾಮಗಾರಿ ಮಾಡಿದ್ದು ಎಂಬುವುದು ದಾಖಲೆ ಸಮೇತ ಸಾಬೀತುಪಡಿಸವಂತೆ ಸವಾಲೆಸೆದ ಅವರು, ಈ ಕುರಿತು ಬಹಿರಂಗ ಚರ್ಚೆಗೂ ಸಿದ್ಧ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿರುಗೇಟು ನೀಡಿದ್ದಾರೆ.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಅವಧಿಯಲ್ಲಿನ ಹಗರಣ ಬಯಲೆಗೆಳೆದರೆ ಪಾಟೀಲರು ರಾಜಕಾರಣದಲ್ಲಿ ಮುಂದುವರೆಯಲು ಕಷ್ಟವಾಗುತ್ತದೆ. ಅಷ್ಟೇ ಏಕೆ ಗಾಂಧಿ ಯಾರು? ಗೋಡ್ಸೆ ಯಾರು? ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ಅಧಿಕಾರವಿಲ್ಲದೇ ಹತಾಶೆ ಮನೋಭಾವನೆಯಿಂದ ಇಂತಹ ಹೇಳಿಕೆ ನೀಡಿದ್ದಾರೆ ಎಂದರು.

40 ಪರ್ಸೆಂಟ್‌ ಕಮೀಶನ್‌ ಕೊಟ್ಟ ಗುತ್ತಿಗೆದಾರರನ್ನು ಕೂರಿಸಿಕೊಂಡು ದಾಖಲೆ ಸಮೇತ ಸುದ್ದಿಗೋಷ್ಠಿ ನಡೆಸಲಿ. ಬಳಿಕ ಉತ್ತರಿಸಲಿದ್ದೇನೆ. ಮೊದಲಿನಿಂದಲೂ ನಮ್ಮದ್ದು ಗುತ್ತಿಗೆದಾರರ ಕುಟುಂಬ. ನಾನು ಶಾಸಕನಾದ ಮೇಲೆ ಸಹೋದರರು ಅಥವಾ ಮಕ್ಕಳು ಯಾವುದೇ ಕಾಮಗಾರಿ ಗುತ್ತಿಗೆ ಪಡೆದಿಲ್ಲ. ಪಡೆದಿರುವ ಬಗ್ಗೆ ದಾಖಲೆಗಳಿದ್ದರೆ ಬಹಿರಂಗಪಡಿಸಲಿ. ಕೇವಲ ಗಾಳಿಯಲ್ಲಿ ಗುಂಡು ಹೊಡೆಯುವುದು ಅವರ ಘನತೆಗೆ ತಕ್ಕುದಲ್ಲ ಎಂದರು.

ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಹಗರಣ ನಡೆದಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಪ್ರತಿ ಗ್ರಾಮದಲ್ಲಿಯೂ ಕೆರೆ ಬಳಕೆದಾರರ ಸಂಘಕ್ಕೆ ಹಣವನ್ನು ವರ್ಗಾವಣೆ ಮಾಡಿಸಿ ಅವರಿಂದಲೇ ಕಾಮಗಾರಿ ನಡೆಸಲಾಗುತ್ತಿದೆ. ಈ ಕುರಿತು ಅಧಿಕಾರಿಗಳಿಂದ ತಪಾಸಣೆ ಮಾಡಿಸಿ ತಪ್ಪು ಸಾಬೀತಾದಲ್ಲಿ ಹೊಣೆಯಾಗುತ್ತೇನೆ. ಸತ್ಯಾಸತ್ಯತೆ ತಿಳಿದುಕೊಂಡು ಸುದ್ದಿಗೋಷ್ಠಿ ನಡೆಸಬಹುದಿತ್ತು ಎಂದರು.

ಕೊಳಚೆ ನಿರ್ಮೂಲನಾ ಮಂಡಳಿಯಿಂದ ಪಟ್ಟಣದಲ್ಲಿ 500 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಡವರಿಗಾಗಿ ಮತ್ತೆ ಒಂಬತ್ತೂವರೆ ಎಕರೆ ಭೂಮಿ ಖರೀದಿಸಲು ನಿರ್ಧರಿಸಿದ್ದು, ಮೊದಲಿದ್ದ 10 ಎಕರೆ ಭೂಮಿಯಲ್ಲಿ 633 ಫಲಾನುಭವಿಗಳಿಗೆ ಮನೆ ನೀಡಲು ಸಿದ್ಧತೆ ನಡೆಸಲಾಗಿದ್ದು, ಅವರಿಂದ ಮುಂಗಡ ಹಣ ಕಟ್ಟಿಸಿಕೊಳ್ಳಲಾಗುತ್ತಿದೆ ಎಂದರು.

ಕೆಲ ಕಾಮಗಾರಿಗಳಲ್ಲಿ ಗುಜ್ಜರಿ ಕಬ್ಬಿಣ ಬಳಸಲಾಗಿದೆ ಎಂಬ ಆರೋಪ ನಿರಾಧಾರವಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ವಿಶ್ವಾಸವಿದೆ. ಎಲ್ಲಿಯೂ ಅಂತ ಕೆಲಸ ನಡೆದಿಲ್ಲ. ಅವರಲ್ಲಿ ದಾಖಲೆಯಿದ್ದರೆ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ದಾಖಲೆಯೊಂದಿಗೆ ಮಾತನಾಡಬೇಕಿತ್ತು ಎಂದರು.

ಪಟ್ಟಣದಲ್ಲಿರುವ ರಾಜ ಕಾಲುವೆ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆಯಾಗಿದೆ ಎಂಬುದು ಶುದ್ಧ ಸುಳ್ಳು. ರಾಜಕಾಲುವೆ ಕಾಮಗಾರಿಗೆ ಇಂದಿಗೂ ಹಣವೇ ಬಿಡುಗಡೆಯಾಗಿಲ್ಲ. ಕಾಮಗಾರಿ ಮೊತ್ತ 10 ಕೋಟಿ ರೂ.ಗೆ ನಿಗದಿಯಾಗಿದ್ದು, ಇನ್ನೂ ಟೆಂಡರ್‌ ಪ್ರಕ್ರಿಯೆ ನಡೆದಿದೆ. ಈ ಕುರಿತು ನನ್ನನ್ನು ಕೇಳುವ ಬದಲು ಸಂಬಂಧಿಸಿದ ಇಲಾಖೆಗೆ ಪತ್ರ ಬರೆದು ಮಾಹಿತಿ ಪಡೆದುಕೊಳ್ಳಬಹುದಿತ್ತು ಎಂದರು.

ಯುಟಿಪಿಯಿಂದ 36 ಕೋಟಿ ರೂ. ಅನುದಾನ ಬ್ಯಾಡಗಿ ಪುರಸಭೆಗೆ ತಂದಿದ್ದೇನೆ. ಪ್ರಸಕ್ತ ವರ್ಷ ಮತ್ತೆ 5 ಕೋಟಿ ರೂ. ಬಿಡುಗಡೆಯಾಗಲಿದೆ. ಎಲ್ಲ ಕಡೆಯಲ್ಲಿಯೂ ಕಾಮಗಾರಿ ಆರಂಭವಾಗಿವೆ. ಆಧಾರ ರಹಿತ ಆರೋಪ ಸರಿಯಲ್ಲ. ತಮ್ಮ ಸುದೀರ್ಘ‌ ರಾಜಕಾರಣದಲ್ಲಿ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಇಂತಹ ಹೇಳಿಕೆ ನೀಡಿದ್ದರೂ ನೀಡಿರಬಹುದು. ಬರುವ 2023 ಚುನಾವಣೆಯಲ್ಲಿ ಪಾಟೀಲರಿಗೆ ಜನ ಉತ್ತರಿಸಲಿದ್ದಾರೆ ಎಂದರು.

ಶಂಕ್ರಣ್ಣ ಮಾತನವರ, ಶಿವಬಸಪ್ಪ ಕುಳೇನೂರ, ಎಸ್‌.ಎನ್‌. ಯಮನಕ್ಕರ, ಹಾಲೇಶ್‌ ಜಾಧವ, ದ್ಯಾಮನಗೌಡ್ರ, ವೈ.ಎನ್‌. ಕರೇಗೌಡ್ರು ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.