ಜನ ಕಲ್ಯಾಣಕ್ಕೆ ಕಾಂಗ್ರೆಸ್ ಬೆಂಬಲಿಸಿ
Team Udayavani, Oct 26, 2021, 3:29 PM IST
ಹಾನಗಲ್ಲ: ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಾವು ನೋಡುತ್ತಲೇ ಇದ್ದೇವೆ. ಮಹಿಳೆಯರ ಸುರಕ್ಷತೆ ಹಾಗೂ ಎಲ್ಲ ವರ್ಗದ ಬಂಧುಗಳ ಕಲ್ಯಾಣಕ್ಕೆ ಕಾಂಗ್ರೆಸ್ ಬೆಂಬಲಿಸಿ, ಆಶೀರ್ವದಿಸುವಂತೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ ಮನವಿ ಮಾಡಿದರು.
ಹಾನಗಲ್ಲ ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಬ್ಯಾಗವಾದಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಮತಯಾಚಿಸಿ ಅವರು ಮಾತನಾಡಿದರು. ಜನಸಂಖ್ಯೆಯಲ್ಲಿ ಶೇ.50 ಇರುವ ಮಹಿಳೆಯರಿಗೆ ದೇಶ-ರಾಜ್ಯದಲ್ಲಿ ಯಾವ ರೀತಿ ರಕ್ಷಣೆ ಸಿಗುತ್ತಿದೆ ಎನ್ನುವುದನ್ನು ನೋಡುತ್ತಿದ್ದೇವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿರುವ ಬಿಜೆಪಿಗೆ ಮತ ಹಾಕಬೇಕಾ? ಎನ್ನುವುದನ್ನು ನೀವೇ ಯೋಚಿಸಿ ಎಂದರು.
ಶ್ರೀನಿವಾಸ ಮಾನೆಯಂತಹ ಯುವ ನಾಯಕನನ್ನು ಕಾಂಗ್ರೆಸ್ ಹಾನಗಲ್ಲ ಕ್ಷೇತ್ರದ ಜನರ ಮಡಿಲಿಗೆ ಹಾಕಿದೆ. ಕಳೆದ ಮೂರುವರೇ ವರ್ಷಗಳಲ್ಲಿ ತಮ್ಮ ನಾಯಕತ್ವ ಸಾಬೀತು ಪಡಿಸುವಲ್ಲಿ ಶ್ರೀನಿವಾಸ ಮಾನೆ ಯಶಸ್ವಿಯಾಗಿದ್ದಾರೆ. ಸಮಸ್ಯೆ, ಸವಾಲುಗಳ ಮಧ್ಯೆ ಹೋರಾಡಿ ಕ್ಷೇತ್ರದ ಜನರನ್ನು ರಕ್ಷಿಸಿದ್ದಾರೆ. ಕ್ಷೇತ್ರದ ತುಂಬೆಲ್ಲ ಅವರ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು.
ಮಾಜಿ ಶಾಸಕ ಮಧು ಬಂಗಾರಪ್ಪ ಮಾತನಾಡಿ, ಜನಪರ ಯೋಜನೆ, ಕಾರ್ಯಕ್ರಮ ಕೊಡುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ. ಜನರ ಭಾವನೆಗೆ ಮೊದಲಿನಿಂದಲೂ ಕಾಂಗ್ರೆಸ್ ಸ್ಪಂದಿಸಿದೆ. ಆದರೀಗ ಅಧಿಕಾರದಲ್ಲಿರುವ ಬಿಜೆಪಿ ಜನರ ಭಾವನೆಗಳ ವಿರುದ್ಧ ಆಡಳಿತ ನಡೆಸುವ ಮೂಲಕ ಜನಾಕ್ರೋಶಕ್ಕೆ ಕಾರಣವಾಗಿದೆ ಎಂದು ಹರಿಹಾಯ್ದ ಅವರು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಬಗ್ಗೆ ಎಲ್ಲೆಡೆ ಒಳ್ಳೆಯ ವಾತಾವರಣವಿದೆ, ಜನರ ಒಲವಿದೆ ಎಂದರು.
ಬೆಲೆ ಏರಿಕೆಯಿಂದ ಜನ ಬಸವಳಿಯುತ್ತಿದ್ದಾರೆ. ಜೀವನ ದುಸ್ಥಿತಿಗೆ ತಳ್ಳಿದ ಬಿಜೆಪಿ ಬಗೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಸೇಡು ತೀರಿಸಿಕೊಳ್ಳಲು ಜನ ಕಾದು ಕುಳಿತಿದ್ದಾರೆ. ಜನರ ಭಾವನೆ ಏನಿದೆ? ಎನ್ನುವುದು ಸ್ವತಃ ಬಿಜೆಪಿಗೂ ಗೊತ್ತಿದೆ. ಹೀಗಾಗಿಯೇ ಅವರು ಕುತಂತ್ರಕ್ಕೆ ಮೊರೆ ಹೋಗಿದ್ದಾರೆ. ನನ್ನದು ಪಕ್ಕದ ಕ್ಷೇತ್ರ ಸೊರಬ. ಹೀಗಾಗಿ ಹಾನಗಲ್ಲ ಕ್ಷೇತ್ರದೊಂದಿಗೆ ಒಳ್ಳೆಯ ಒಡನಾಟವಿದೆ ಎಂದ ಅವರು, ಕಾಂಗ್ರೆಸ್ ಕ್ಷೇತ್ರದಲ್ಲಿ ಗೆಲ್ಲಲಿದೆ ಎಂದರು. ಈ ವೇಳೆ ಅಭ್ಯರ್ಥಿ ಶ್ರೀನಿವಾಸ ಮಾನೆ ಸೇರಿದಂತೆ ಇತರ ಪ್ರಮುಖ ನಾಯಕರು, ಕಾರ್ಯಕರ್ತರು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ