ದೇಶದ ಸುರಕ್ಷತೆ ಪರಿಗಣಿಸಿ ಮತ ನೀಡಿ


Team Udayavani, Apr 21, 2019, 3:44 PM IST

hav-2

ಹುಬ್ಬಳ್ಳಿ: ದೇಶದಲ್ಲಿ ಕಳೆದ 5 ವರ್ಷಗಳಲ್ಲಿ ರಾಷ್ಟ್ರೀಯ ಸುರಕ್ಷತೆ, ದೇಶದ ವಿಕಾಸ ಹಾಗೂ ಜನರ ಕಲ್ಯಾಣವನ್ನು ಪರಿಗಣಿಸಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದರು.

ಗೋಕುಲ ಗಾರ್ಡನ್‌ನಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಮಹಾನಗರ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 2008ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ 166 ಜನರು ಜೀವ ಕಳೆದುಕೊಂಡರು. ಆದರೆ ಆಗ ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಲಿಲ್ಲ. ಆದರೆ ಪುಲ್ವಾಮಾದಲ್ಲಿ ಉಗ್ರರು ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದಾಗ ಸರ್ಜಿಕಲ್ ಸ್ಟ್ರೆ ೖಕ್‌ ಮೂಲಕ ಪ್ರತ್ಯುತ್ತರ ನೀಡಿದ್ದು ಪ್ರಧಾನಿ ಮೋದಿ. ಅಂತಾರಾಷ್ಟ್ರೀಯ ಸಮುದಾಯ ಪಾಕಿಸ್ತಾನದ ಮೇಲೆ ಒತ್ತಡ ಹೇರುವಂತೆ ಮಾಡಲಾಯಿತು ಎಂದರು.

ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ನಮ್ಮ ಸೈನಿಕರು ದಾಳಿ ನಡೆಸಿದ್ದನ್ನು ಜಗತ್ತಿನ ಬಹುತೇಕ ರಾಷ್ಟ್ರಗಳು ಶ್ಲಾಘಿಸಿವೆ. ಮೋದಿಯವರ ಜನಪರ ಯೋಜನೆಗಳನ್ನು ತಿಳಿದುಕೊಂಡ ಹಲವು ಇಸ್ಲಾಂ ದೇಶಗಳು ಪ್ರಧಾನಿ ಮೋದಿ ಅವರಿಗೆ ಉನ್ನತ ನಾಗರಿಕ ಸನ್ಮಾನ ಮಾಡಿವೆ ಎಂದು ಹೇಳಿದರು.

ಪಾಕಿಸ್ತಾನದ ವಿರೋಧದ ಹೊರತಾಗಿಯೂ ಇಸ್ಲಾಮಿಕ್‌ ರಾಷ್ಟ್ರಗಳ ಸಂಘಟನೆ (ಐಒಸಿ) ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳಲು ಅವಕಾಶ ನೀಡಿತು. ಪಾಕಿಸ್ತಾನವೇ ಸಭೆಯಲ್ಲಿ ಪಾಲ್ಗೊಳ್ಳದೆ ಗೈರು ಉಳಿಯುವ ಸ್ಥಿತಿ ಬಂದೊದಗಿತು. ಭಾರತದ ಬಗ್ಗೆ ಇಸ್ಲಾಂ ದೇಶಗಳ ಮನೋಭಾವ ಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಹಿಂದುಳಿದ ಜಾತಿ, ಹಿಂದುಳಿದ ಜನಾಂಗದ ಮೀಸಲಾತಿಗೆ ಧಕ್ಕೆಯಾಗದಂತೆ ಸವರ್ಣೀಯರಲ್ಲಿನ ಬಡವರಿಗೆ ಶೇ.10 ಮೀಸಲಾತಿ ನೀಡಲಾಗಿದೆ. ಹಜ್‌ ಯಾತ್ರೆಗೆ ತೆರಳುವವರಿಗೆ ಸಹಾಯ ಧನವನ್ನು 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಮುದ್ರಾ ಯೋಜನೆಯಲ್ಲಿ 17 ಕೋಟಿ 16 ಲಕ್ಷ ಜನರಿಗೆ ಸಾಲ ಸೌಲಭ್ಯ ನೀಡಿ ಸ್ವ ಉದ್ಯೋಗ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ ಮತ್ತೂಮ್ಮೆ ಸಂಸದರಾಗಬೇಕು ಹಾಗೂ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ಪ್ರಹ್ಲಾದ ಜೋಶಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕಾರ್ಯ ಕೈಗೊಂಡಿದ್ದಾರೆ. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷೀr್ರಯ ವಿಮಾನ ನಿಲ್ದಾಣವನ್ನಾಗಿಸಲು ಪ್ರಯತ್ನಿಸಿದ್ದಾರೆ. ಹಲವು ಹೊಸ ರೈಲುಗಳ ಸೇವೆ ಆರಂಭಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.

ಅಭ್ಯರ್ಥಿ ಪ್ರಹ್ಲಾದ ಜೋಶಿ ಪ್ರಾಸ್ತಾವಿಕ ಮಾತನಾಡಿ, ರಾಜ್ಯದ ಸಂಸದರಲ್ಲಿ ಕ್ರಿಯಾಶೀಲವಾಗಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಂಸದರಲ್ಲಿ ನಾನು ಅಗ್ರ ಸ್ಥಾನದಲ್ಲಿರುವುದಕ್ಕೆ ಸುಷ್ಮಾ ಸ್ವರಾಜ್‌ ಅವರ ಪ್ರೋತ್ಸಾಹವೇ ಕಾರಣ. ಅವರನ್ನು ನೋಡಿ ನಾನು ಸಂಸತ್‌ನಲ್ಲಿ ವಿಷಯ ಚರ್ಚೆ ಮಾಡುವುದನ್ನು ಕಲಿತುಕೊಂಡಿದ್ದೇನೆ. ಅವರಿಗೆ ನಾನು ಋಣಿಯಾಗಿದ್ದೇನೆ ಎಂದರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ನಾಗೇಶ ಕಲಬುರ್ಗಿ ಇದ್ದರು.

ಸುಷ್ಮಾಗೆ ಅಭಿನಂದನೆ

ಪಾಕಿಸ್ತಾನದ ಯುವತಿಯನ್ನು ಮದುವೆಯಾಗಿ, ಪತ್ನಿಯನ್ನು ಭಾರತಕ್ಕೆ ಕರೆಸಿಕೊಳ್ಳಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರ ನೆರವು ಪಡೆದ ಹುಬ್ಬಳ್ಳಿಯವರಾದ ಡೇನಿಯಲ್ ಕಾರ್ಯಕ್ರಮದ ನಂತರ ಸಚಿವೆಗೆ ಹೂಗುಚ್ಛ ನೀಡಿ ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.