ಜೀವ-ಜೀವನ ಬೇಕಾದರೆ ಕೋವಿಡ್ ಜಾಗೃತಿ ವಹಿಸಿ
Team Udayavani, Apr 12, 2021, 3:50 PM IST
ರಟ್ಟೀಹಳ್ಳಿ: ಇಂದಿನ ಆಧುನಿಕ ಜೀವನ ಶೈಲಿಯಲ್ಲಿಅಜಾಗರೂಕತೆಯಿಂದ ಎಷ್ಟೋ ಜನರು ನಮ್ಮಎದುರು ಮಣ್ಣು ಪಾಲಾಗಿದ್ದು, ಇಂತಹಪರಿಸ್ಥಿತಿಯಲ್ಲಿ ನಮಗೆ ಜೀವ ಮತ್ತು ಜೀವನಬೇಕಾದರೆ ಜಾಗ್ರತೆ ವಹಿಸಬೇಕೆಂದು ರಟ್ಟೀಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಕೃಷ್ಣಪ್ಪ ತೋಪಿನ ಹೇಳಿದರು.
ರಟ್ಟೀಹಳ್ಳಿ ಪೊಲೀಸ್ ಠಾಣೆ, ತಾಲೂಕುಆಡಳಿತ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ ಜಾಗೃತಿ ಜಾಥಾಗೆ ಚಾಲನೆ ನೀಡಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.
ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ನಮ್ಮ ಜೀವ ನಮ್ಮ ಕೈಯಲ್ಲಿದೆ. ಹಾಗಾಗಿ, ಸಾರ್ವಜನಿಕರುಎಷ್ಟು ಜಾಗ್ರತೆಯಿಂದ ಇರುತ್ತಾರೆ ಅಷ್ಟು ಒಳ್ಳೆಯದು.ನಾವು ಚೆನ್ನಾಗಿದ್ದು, ನಮ್ಮ ಸುತ್ತಮುತ್ತಲಿನ ಜನರುಚೆನ್ನಾಗಿರಬೇಕಾದರೆ ಕಡ್ಡಾಯವಾಗಿ ಮಾಸ್ಕ್ಧರಿಸಬೇಕು. ಸಾಮಾಜಿಕ ಅಂತರದೊಂದಿಗೆಕಾರ್ಯನಿರ್ವಹಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸಬೇಕು ಎಂದರು.
ಪಪಂ ಮುಖ್ಯಾಧಿಕಾರಿ ಉಮೇಶ ಗುಡ್ಡದ ಮಾತನಾಡಿ, ಪ್ರತಿ ಶುಕ್ರವಾರ ರಟ್ಟೀಹಳ್ಳಿಯಲ್ಲಿಸಂತೆ ನಡೆಸಲಾಗುತ್ತಿದ್ದು, ಅಂಗಡಿ ಹಾಕಿದಸ್ಥಳದ ಎದುರು ಸಾಮಾಜಿಕ ಅಂತರದ ಬಾಕ್ಸ್ಹಾಕಲಾಗಿದೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಹೊರಗಡೆ ಬರಬೇಕು. ಈ ಬಗ್ಗೆ ಅರಿತು ವರ್ತಿಸಿದರೆ ಎಲ್ಲರಿಗೂ ಒಳ್ಳೆಯದು.ಇಲ್ಲದಿದ್ದರೆ ದಂಡ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕೋವಿಡ್ ವೈರಸ್ ತೊಂದರೆಮತ್ತು ಅದರ ಜಾಗೃತಿ ಕ್ರಮಗಳ ಬಗ್ಗೆ ತಹಶೀಲ್ದಾರ್ ಕೆ.ಗುರುಬಸವರಾಜ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ