ಹಳ್ಳಿಗರನ್ನೂ ಕಂಗೆಡಿಸಿದ ಕೋವಿಡ್

ಪತ್ತೆಯಾಗುತ್ತಿರುವ ಪ್ರಕರಣಗಳಲ್ಲಿ ಅರ್ಧ ಹಳ್ಳಿಗಳದ್ದು­! ಗ್ರಾಮಗಳಲ್ಲೂ ಪಾಲನೆಯಾಗಲಿ ಕಠಿಣ ಸುರಕ್ಷತಾ ಕ್ರಮ

Team Udayavani, May 18, 2021, 3:13 PM IST

17dvg002

ವಿಶೇಷ ವರದಿ

ಹಾವೇರಿ: ಕೊರೊನಾ ಕರ್ಫ್ಯೂ ಕಾರಣದಿಂದ ನಗರ, ಮಹಾನಗರಗಳಿಂದ ಯಥೇತ್ಛ ಪ್ರಮಾಣದಲ್ಲಿ ಜನರು ಹಳ್ಳಿಗಳಿಗೆ ಮರಳಿದ ಪರಿಣಾಮ ಈಗ ಹಳ್ಳಿಗಳಲ್ಲೂ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಗ್ರಾಮೀಣ ಜನರಲ್ಲಿ ಆತಂಕ ಸೃಷ್ಟಿಸಿದೆ.

ಕೋವಿಡ್‌ ತಪಾಸಣೆ ಮಾಡಿಸಿಕೊಳ್ಳದೇ ಹಳ್ಳಿಗಳಿಗೆ ಮರಳಿ ಬಂದವರಿಂದ, ಕೋವಿಡ್‌ ತಪಾಸಣೆಗೆ ಜನ ಮುಂದಾಗದೆ ಇರುವುದರಿಂದ ಹಾಗೂ ಹಳ್ಳಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಮರೆತು ಮುಂದುವರಿದಿರುವ ಮದುವೆ, ಧಾರ್ಮಿಕ ಕಾರ್ಯಕ್ರಮಗಳಿಂದ ಹಳ್ಳಿಗಳಲ್ಲಿ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಪ್ರಸ್ತುತ ಕಂಡು ಬರುವ ಪ್ರಕರಣಗಳಲ್ಲಿ ಅರ್ಧಕ್ಕರ್ಧ ಗ್ರಾಮೀಣ ಪ್ರದೇಶಗಳಲ್ಲಿಯೇ ಗೋಚರಿಸುತ್ತಿದೆ. ಈಗೀಗ ನಗರ ಪ್ರದೇಶಗಳಲ್ಲಿ ಕೊರೊನಾ ಸುರಕ್ಷತೆ ಬಗ್ಗೆ ಅರಿವು ಮೂಡಿದ್ದು, ಬಹುತೇಕರು ಸುರಕ್ಷತಾ ಕ್ರಮಗಳ ಪಾಲನೆಯಲ್ಲಿ ತೊಡಗಿದ್ದಾರೆ. ಆದರೆ ಗ್ರಾಮೀಣ ಜನರು ಮಾತ್ರ ಕೊರೊನಾ ಸುರಕ್ಷತಾ ಕ್ರಮಗಳ ಬಗ್ಗೆ ಈವರೆಗೂ ತಲೆಕೆಡಿಸಿಕೊಂಡಿಲ್ಲ.

ಮಾಸ್ಕ್ ಇಲ್ಲದೇ ತಮ್ಮ ನಿತ್ಯ ಕೆಲಸಗಳಲ್ಲಿ ತೊಡಗುತ್ತಿದ್ದಾರೆ. ಇದರ ಜತೆಗೆ ನೂರಾರು ಜನರನ್ನು ಸೇರಿಸಿ ಮನೆ ಮುಂದೆ ಮದುವೆ ಸಮಾರಂಭಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ನೂರಾರು ಜನರು ಯಾವುದೇ ದೈಹಿಕ ಅಂತರ, ಸುರಕ್ಷತಾ ಕ್ರಮಗಳ ಪಾಲನೆ ಇಲ್ಲದೇ ಒಂದೆಡೆ ಸೇರಿ ಸೋಂಕು ಹರಡುತ್ತಲೇ ಇದ್ದಾರೆ. ಇನ್ನು ಶವಸಂಸ್ಕಾರಕ್ಕೂ ನೂರಾರು ಜನರು ಸೇರುವ ಮೂಲಕ ಕೊರೊನಾದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದನ್ನೇ ಮರೆಯುತಿದ್ದಾರೆ. ಕೊರೊನಾ ಸೋಂಕಿನ ಬಗ್ಗೆ ಹಳ್ಳಿಗರು ತೋರುತ್ತಿರುವ ಉದಾಸೀನ ನಡೆಯಿಂದ ಈಗ ಹಳ್ಳಿಗಳಲ್ಲೂ ಕೊರಾನಾ ಅಟ್ಟಹಾಸ ಮೆರೆಯುವಂತಾಗಿದೆ.

ನಗರಗಳಂತೆ ಹಳ್ಳಿಗಳಲ್ಲೂ ಸ್ಥಳೀಯ ಅಧಿಕಾರಿಗಳು ಸುರಕ್ಷತಾ ಕ್ರಮಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸುವುದು, ಅನಗತ್ಯ ಓಡಾಡದಂತೆ, ಒಂದೆಡೆ ನೂರಾರು ಜನರು ಸೇರದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರಿಗೆ ಹಳ್ಳಿಗರ ಸಹಕಾರ ಸಿಗುತ್ತಿಲ್ಲ.

ಜನರ ಈ ನಿರ್ಲಕ್ಷéದಿಂದ ಈಗ ಹಳ್ಳಿ ಹಳ್ಳಿಗಳಲ್ಲೂ ಕೊರೊನಾ ವಕ್ಕರಿಸಿ ಗ್ರಾಮೀಣ ಜನರ ನಿದ್ದೆಗೆಡಿಸಿದೆ. ತಪಾಸಣೆಗೆ ಹಿಂದೇಟು: ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಈಗಾಗಲೇ ಸೋಂಕು ಹಬ್ಬಿದೆ. ಹಾಗೆಯೇ, ಪ್ರತಿ ಹಳ್ಳಿಯಲ್ಲೂ ಹತ್ತಾರು ಜನ ಅನಾರೋಗ್ಯದಿಂದ ಬಳಲಿ ಹಾಸಿಗೆ ಹಿಡಿಯುತ್ತಿದ್ದಾರೆ. ಆದರೂ ಜನರು ಕೊರೊನಾ ತಪಾಸಣೆಗೆ ಮುಂದಾಗುತ್ತಿಲ್ಲ. ಕೆಲವರು ಔಷಧ ಅಂಗಡಿಯಿಂದ ಜ್ವರ, ಶೀತಕ್ಕೆ ತಾವೇ ಕೇಳಿ ತಂದ ಔಷಧಿ ಸೇವಿಸುತ್ತಿದ್ದರೆ ಮತ್ತೆ ಕೆಲವರು ಸ್ಥಳೀಯವಾಗಿ ಸಿಗುವ ವೈದ್ಯರಿಂದ ಚಿಕಿತ್ಸೆ ಪಡೆದು ಮನೆಯಲ್ಲಿಯೇ ಇದ್ದಾರೆ. ಇದರಿಂದ ಕೆಲ ಸೋಂಕಿತರ ಆರೋಗ್ಯ ಸ್ಥಿತಿ ಗಂಭೀರತೆಯತ್ತ ಸಾಗುತ್ತಿದ್ದು, ಕೊನೆಯ ಘಳಿಗೆಯಲ್ಲಿ ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ ಸಿಗದೆ ಪ್ರಾಣ ಬಿಡುವ ಪ್ರಸಂಗಗಳೂ ಹೆಚ್ಚಾಗುತ್ತಿವೆ.

ಒಟ್ಟಾರೆ ಕೊರೊನಾ ಸೋಂಕು ಹಳ್ಳಿಗಳಲ್ಲಿ ಹಬ್ಬುತ್ತಲೇ ಇದ್ದು, ಸೋಂಕಿನ ಸರಪಳಿ ತುಂಡರಿಸಲು ಸ್ಥಳೀಯ ಆಡಳಿತಗಳು ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ. ಜತೆಗೆ ಎಲ್ಲರ ಕಡ್ಡಾಯ ತಪಾಸಣೆ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ, ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ ಕಾರ್ಯಕ್ಕೂ ಅಣಿಯಾಗಬೇಕಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.