ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಇಡೀ ಪ್ರಪಂಚದಲ್ಲಿ ಇವರಷ್ಟು ಕುಖ್ಯಾತಿ ಪಡೆದವರಿಲ್ಲ

Team Udayavani, Apr 23, 2024, 3:49 PM IST

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

■ ಉದಯವಾಣಿ ಸಮಾಚಾರ
ಹಾವೇರಿ: ಬಿಜೆಪಿಯವರು ಜಾಹೀರಾತಿನಲ್ಲಿ ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಬಿಹಾರದಲ್ಲಿ ಮೀಸಲಾತಿ ಬಗ್ಗೆ ಮಾತಾಡಿದ್ದಕ್ಕೆ ಸೋತರು. ಅನಂತ ಕುಮಾರ ಹೆಗಡೆ ಸಂವಿಧಾನ ಬದಲಾವಣೆ ಮಾಡಬೇಕು ಅಂದಿದ್ದರು. ಸಂವಿಧಾನದಲ್ಲಿರುವ ಸಮಾನ ಅವಕಾಶ ಹಕ್ಕಿಗೆ ವಿರುದ್ಧ ಇರೋರು ಬಿಜೆಪಿಯವರು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ ವಾಗ್ಧಾಳಿ ನಡೆಸಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತೆ ಅಂತ ಪ್ರಧಾನಿ ಮೋದಿಯವರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದಾರೆ.

ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ ಮೋದಿಯವರ ಮೇಲೆ ಕ್ರಮ ಜರುಗಿಸಲಿ. ಪ್ರಚೋದನಕಾರಿಯಾಗಿ ಮಾತಾಡಿದರೆ ಪೊಲೀಸರು ಸ್ವಯಂಪ್ರೇರಿತರಾಗಿ ಎಫ್‌ಐಆರ್‌ ದಾಖಲಿಸಬೇಕು ಎಂದರು.

ನರೇಂದ್ರ ಮೋದಿ ಹಾಗೆ ಮಾತಾಡೋಕೆ ಯಾವುದೋ ಪಂಚಾಯಿತಿ ಸದಸ್ಯ ಅಲ್ಲ, ಅವರು ಪ್ರಧಾನಮಂತ್ರಿ. ಎಲ್ಲ ನಾಗರಿಕರ ಜೀವ ಕಾಪಾಡೋ ಮೂಲಭೂತ ಜವಾಬ್ದಾರಿ ಅವರ ಮೇಲಿದೆ. ತೆರಿಗೆ ಕಟ್ಟಬೇಕಾದರೆ ಒಂದೇ ಧರ್ಮ, ಭಾಷೆಯವರು ತೆರಿಗೆ ಕಟ್ಟಿರಲ್ಲ. ತೆರಿಗೆಯನ್ನು ಸರ್ವರಿಗೂ ಸಮಪಾಲು, ಸಮಬಾಳು ಆಶಯದ ಮೇಲೆ ಹಂಚಬೇಕು ಎಂದರು.

ಬರೀ ಪಾಕಿಸ್ತಾನ, ಹಿಂದೂ-ಮುಸ್ಲಿಂ, ಪಾಳು ಬಿದ್ದಿರುವ ದೇವಸ್ಥಾನ, ಮಸೀದಿ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಬದುಕೋದಕ್ಕೆ ಏನು ಮಾಡಬೇಕು ಅದನ್ನ ಮಾಡಿಲ್ಲ. ಕೇಂದ್ರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಿಲ್ಲ. ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣದಲ್ಲಿ ಹೆಣದ ಮೇಲೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದು, ಇದರಲ್ಲಿ ಕುಖ್ಯಾತಿ ಪಡೆದಿದ್ದಾರೆ. ಯಾರೋ ಒಬ್ಬ ಹತ್ಯೆ ಮಾಡಿದ್ದಕ್ಕೆ ಇಡೀ ಸಮುದಾಯ ದೂಷಿಸೋದು ಸರಿಯಲ್ಲ. ಆಪರೇಷನ್‌ ಕಮಲ ಮಾಡೋದ್ರಲ್ಲಿ ಇಡೀ ಪ್ರಪಂಚದಲ್ಲಿ ಇವರಷ್ಟು ಕುಖ್ಯಾತಿ ಪಡೆದವರಿಲ್ಲ. ಮುಂದೇನೂ ಆಪರೇಶನ್‌ ಕಮಲ ಮಾಡ್ತಾರೆ, ಆದರೆ ಅದು ಯಶಸ್ವಿ ಆಗಲ್ಲ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡರಾದ ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎಂ. ಮೈದೂರ ಸೇರಿದಂತೆ ಇತರರಿದ್ದರು.

ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದ್ದಾರೆ
ನಕ್ಸಲ್‌ ದಾಳಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಾರೆ. ಹಿಂದೆ ನಡೆದ ನಕ್ಸಲ್‌ ದಾಳಿಯಲ್ಲಿ 27 ಕಾಂಗ್ರೆಸ್‌ ನಾಯಕರನ್ನು ಕಳೆದುಕೊಂಡಿದ್ದೀವಿ. ನಕ್ಸಲ್‌ ಹಾಗೂ ಬಿಜೆಪಿ ಸೂತ್ರಧಾರರ ನಡುವೆ ಒಳ್ಳೆ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದ್ದಾರೆ. ಮೋದಿಯವರು ಅಮೃತ ಕಾಲ ಎಂದು ದೊಡ್ಡದಾಗಿ ಭಾಷಣ ಮಾಡುತ್ತಾರೆ. 10 ವರ್ಷ ಏನು ಮಾಡಿದ್ದಾರೆ ಎಂಬುದನ್ನು ಜಾಹೀರಾತಿನಲ್ಲಿ ಹೇಳಿಲ್ಲ. ಸಾಲ ಯಾರಿಗಾಗಿ ಮಾಡಿದ್ದಾರೆ ಎಂದು ಪ್ರಣಾಳಿಕೆಯಲ್ಲಿ ಹೇಳಿಲ್ಲ ಎಂದು ಕುಟುಕಿದರು.

Ad

ಟಾಪ್ ನ್ಯೂಸ್

Gunjan Arya assumed office as the new Superintendent of Police of Dharwad District

Dharwad ಜಿಲ್ಲಾ ನೂತನ ಪೊಲೀಸ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

Subhanshu’s contribution to India’s space future: A new chapter in space exploration

ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ ಶುಭಾಂಶು ಕೊಡುಗೆ: ಬಾಹ್ಯಾಕಾಶ ಅನ್ವೇಷಣೆಯಲ್ಲಿ ಹೊಸ ಅಧ್ಯಾಯ

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Hangal: ನಿರಂತರ ಮಳೆಗೆ ಬಿತ್ತನೆಯಾಗದೆ ರೈತ ಕಂಗಾಲು

14

Haveri: ರೇಷ್ಮೆ ಕೃಷಿ ಮಾಡಿ ಮಾದರಿಯಾದ ರೈತ

12

Rattihalli : ಅಂಧ ವೃದ್ಧನ ಬದುಕಿಗೆ ನರೇಗಾ ಬೆಳಕು!

14(1

Ranebennur: ಹತ್ತಿ ಬಿಟ್ಟು ಮೆಕ್ಕೆಜೋಳದತ್ತ ರೈತರ ಒಲವು

17

Haveri: ಅಳಿದುಳಿದ ಬೆಳೆಗೆ ವನ್ಯಜೀವಿ ಕಾಟ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Gunjan Arya assumed office as the new Superintendent of Police of Dharwad District

Dharwad ಜಿಲ್ಲಾ ನೂತನ ಪೊಲೀಸ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Pune Porsche case: Accused is considered a juvenile

Pune Porsche case: ಆರೋಪಿ ಬಾಲಕ ಎಂದೇ ಪರಿಗಣನೆ

12-holehonnur

Holehonnuru: ಹಾವು ಕಚ್ಚಿ ಯುವಕ ಸಾ*ವು

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.