ಸಾವಿರಾರು ಯುವಕರಿಗೆ ಸಂಸ್ಕೃತಿ ಅರಿವು- ರುದ್ರಾಕ್ಷಿ ದೀಕ್ಷೆ

ಮೇ 1ರಿಂದ ಶ್ರೀ ಶಂಕರ ಸ್ವಾಮೀಜಿ ಅಮೃತ ಮಹೋತ್ಸವ-ನಿರಂಜನ ಚರಪಟ್ಟಾಧಿಕಾರ ಸಮಾರಂಭ

Team Udayavani, Apr 25, 2022, 1:22 PM IST

15

 ಅಥಣಿ: ಶ್ರೀ ಶಂಕರ ಸ್ವಾಮೀಜಿ ಅಮೃತ ಮಹೋತ್ಸವ ಹಾಗೂ ನಿರಂಜನ ಚರಪಟ್ಟಾಧಿಕಾರ ಸಮಾರಂಭದಲ್ಲಿ ಸಾವಿರಾರು ಯುವಕರಿಗೆ ರುದ್ರಾಕ್ಷಿ ದೀಕ್ಷೆ ನೀಡುವ ಸಂಕಲ್ಪ ಆಮಂತ್ರಣ ಪತ್ರಿಕೆಯನ್ನು ಶೇಗುಣಸಿ ವಿರಕ್ತಮಠದ ಡಾ. ಮಹಾಂತ ದೇವರು ಬಿಡುಗಡೆ ಮಾಡಿದರು.

ಸಮೀಪದ ಸತ್ತಿ ಗ್ರಾಮದ ಶ್ರೀ ಬಾಳಕೃಷ್ಣ ಮಹಾರಾಜ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬರುವ ಮೇ 1 ರಿಂದ 4 ರವರೆಗೆ ವಿಶೇಷ ಕಾರ್ಯಕ್ರಮಗಳು ಮಠದಲ್ಲಿ ಜರುಗಲಿದ್ದು, ನಾಡಿನ 300 ಕ್ಕೂ ಹೆಚ್ಚು ಪೂಜ್ಯರು ಹಾಗೂ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಯುವ ಜನೋತ್ಸವದ ಅಂಗವಾಗಿ 5 ಸಾವಿರಕ್ಕೂ ಹೆಚ್ಚು ಯುವಕರಿಗೆ ರುದ್ರಾಕ್ಷಿ ದೀಕ್ಷೆ ನೀಡಿ ಭಾರತೀಯ ಸಂಸ್ಕೃತಿಯ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮೇ 1 ರಂದು ಬೆಳಿಗ್ಗೆ 10 ಗಂಟೆಗೆ ಸಾವಯವ ಕೃಷಿ ಸಮ್ಮೇಳನ ಜರುಗಲಿದೆ. ಸಂಜೆ 6 ಗಂಟೆಗೆ ಶ್ರೀ ಶಂಕರ ಸ್ವಾಮಿಗಳವರ ಅಮೃತ ಮಹೋತ್ವವ ಕಾರ್ಯಕ್ರಮ ಜರುಗಲಿದೆ.

2 ರಂದು ಬೆಳಗ್ಗೆ 10 ಗಂಟೆಗೆ ಮಹಿಳಾ ಸಮಾವೇಶ ಜರುಗಲಿದೆ. ಸಂಜೆ 6 ಗಂಟೆಗೆ ಯುವ ಜನೋತ್ಸವ ಹಾಗೂ ರುದ್ರಾಕ್ಷಿ ದೀಕ್ಷಾ ಕಾರ್ಯಕ್ರಮ ಜರುಗಲಿದೆ.

3 ರಂದು ಬೆಳಗ್ಗೆ 10 ಗಂಟೆಗೆ ಶ್ರೀ ಮುರುಘೇಂದ್ರ ಸ್ವಾಮೀಜಿ ವಿದ್ಯಾವರ್ಧಕ ಸಂಸ್ಥೆಯ ರಜತ ಮಹೋತ್ಸವ ಹಾಗೂ ಸಮುದಾಯ ಭವನ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ. ಅಂದು ಸಂಜೆ 6 ಗಂಟೆಗೆ ಬಸವ ಜಯಂತಿ ಕಾರ್ಯಕ್ರಮ ಜರುಗಲಿದೆ.

ದಿ. 4 ರಂದು ಬೆಳಗ್ಗೆ 10 ಗಂಟೆಗೆ ಶೂನ್ಯಸಿಂಹಾಸನಾರೋಹಣ ಹಾಗೂ ಸಂಜೆ 6 ಗಂಟೆಗೆ ಚಿನ್ಮಾನುಗ್ರಹ ದೀಕ್ಷೆ ಹಾಗೂ ಷಟಸ್ಥಲ ಬ್ರಹ್ಮೋಪದೇಶ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಶ್ರೀ ಗುರು ದೇವರು, ಜಿ.ಪಂ. ಮಾಜಿ ಸದಸ್ಯ ಶ್ರೀಶೈಲ ನಾರಗೊಂಡ, ಶಿವರಾಯ ಯಲಡಗಿ, ತಮ್ಮಣ್ಣೆಪ್ಪ ತೇಲಿ, ಪರಪ್ಪ ರಾಚಪ್ಪನವರ, ಮಲ್ಲಪ್ಪ ಕಂಕಣವಾಡಿ, ಅಶೋಕ ಜಗದೇವ, ಮಲ್ಲಪ್ಪ ಬ್ಯಾಳಗೌಡರ, ಪ್ರಕಾಶ ಭೂಷಣ್ಣವರ, ಮಲ್ಲಪ್ಪ ಹಂಚಿನಾಳ, ಅನಂತಕುಮಾರ ಪಾಟೀಲ, ರಾವಸಾಬ ಮಟ್ಟೆಪ್ಪನವರ, ಬಸವರಾಜ ಜಕ್ಕಪ್ಪನವರ, ಶ್ರೀಶೈಲ ಜಗದೇವ ಇದ್ದರು. ಇದೇ ವೇಳೆ ಪಿಎಚ್‌ಡಿ ಪಡೆದು ಪ್ರಥಮ ಬಾರಿಗೆ ಸತ್ತಿ ಗ್ರಾಮಕ್ಕೆ ಆಗಮಿಸಿದ ಡಾ| ಮಹಾಂತ ದೇವರನ್ನು ಗ್ರಾಮಸ್ಥರು ಸತ್ಕರಿಸಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.