ರೈತರಿಗೆ ಹೈನುಗಾರಿಕೆ ಆಧಾರಿತ ಕೃಷಿ ಸಹಕಾರಿ

ಕಳುಗಳಿಂದ ಪ್ರತಿ ಸೂಲಿಗೆ 3000 ದಿಂದ 5000 ಕೆಜಿ ವರೆಗೆ ಹಾಲು ಪಡೆಯಬಹುದು

Team Udayavani, Jan 29, 2022, 6:18 PM IST

ರೈತರಿಗೆ ಹೈನುಗಾರಿಕೆ ಆಧಾರಿತ ಕೃಷಿ ಸಹಕಾರಿ

ರಾಣಿಬೆನ್ನೂರ: ರೈತರ ಆದಾಯ ಹೆಚ್ಚಿಸಲು ಹೈನುಗಾರಿಕೆ ಆಧಾರಿತ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಬೆಳೆಗಳಿಗೆ ಉತ್ತಮ ಸಾವಯವ ಗೊಬ್ಬರ ಪಡೆಯಲು ಸಾಧ್ಯವಾಗುತ್ತದೆ ಎಂದು ಹಿರಿಯ ವಿಜ್ಞಾನಿ ಹಾಗೂ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಅಶೋಕ ಪಿ. ಹೇಳಿದರು.

ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಹೈನುಗಾರಿಕೆಯಲ್ಲಿ ರೈತರು ವೈಜ್ಞಾನಿಕ ಪದ್ಧತಿ ಮತ್ತು ಹೊಸದಾಗಿ ಬಂದ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ತಮ್ಮ ಹೈನು ರಾಸುಗಳಿಂದ ಹೆಚ್ಚಿನ ಹಾಲಿನ ಇಳುವರಿಯೊಂದಿಗೆ, ಅವುಗಳ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಹೆಚ್ಚಿನ ಆದಾಯ ಪಡೆಯಬಹುದು ಎಂದು ತಿಳಿಸಿದರು.

ಪಶು ವಿಜ್ಞಾನಿ ಡಾ|ಮಹೇಶ ಕಡಗಿ ಮಾತನಾಡಿ, ನಮ್ಮ ದೇಶಿಯ ಹಾಲಿನ ತಳಿಗಳಾದ ಗಿರ್‌, ಸಾಯಿವಾಲ್‌ ಮತ್ತು ಕೆಂಪು ಸಿಂ  ಆಕಳುಗಳಿಂದ ಉತ್ತಮ ಹಾಲನ್ನು ಪ್ರತಿ ಸೂಲಿಗೆ 1500 ರಿಂದ 2000 ಕೆಜಿ ವರೆಗೆ ಪಡೆಯಬಹುದು. ಮಿಶ್ರ ತಳಿ ಹಸುಗಳಾದ ಎಚ್‌ಎಫ್‌ ಮಿಶ್ರ ತಳಿ ಮತ್ತು ಜರ್ಸಿ ಮಿಶ್ರ ತಳಿ ಆಕಳುಗಳಿಂದ ಪ್ರತಿ ಸೂಲಿಗೆ 3000 ದಿಂದ 5000 ಕೆಜಿ ವರೆಗೆ ಹಾಲು ಪಡೆಯಬಹುದು ಎಂದರು.

ಎಮ್ಮೆಯ ಉತ್ತಮ ಹಾಲಿನ ತಳಿಗಳಾದ ಮುರ್ರಾ, ಸ್ಫೂರ್ತಿ, ಜಫರ್‌ ಬಾದಿ ಎಮ್ಮೆಗಳಿಂದ ಸುಮಾರು ಪ್ರತಿ ಸೂಲಿಗೆ 2000 ಕೆಜಿ ವರೆಗೆ ಹಾಲು ಪಡೆಯಬಹುದು. ಉತ್ತಮ ಹೈನು ತಳಗಳನ್ನು ಆಯ್ಕೆ ಮಾಡುವಾಗ ಅವುಗಳ ಉತ್ತಮ ಹಾಲು ನೀಡುವ ಗುಣಲಕ್ಷಣಗಳಾದ ಮೃದು ಚರ್ಮ, ಹೊಳೆಯುವ ಕಣ್ಣುಗಳು, ಅಗಲ ಹಣೆ, ಸದೃಢ ಮುಂಗಾಲು ಮತ್ತು ಹಿಂಗಾಲುಗಳು, ಕೆಚ್ಚಲು ಮೇಲಿನ ಹಾಲಿನ ನರಗಳು, ಸಮಾನಾಂತರ ಮೊಲೆ ತೊಟ್ಟುಗಳು ಮತ್ತು ಸರಾಸರಿ 3 ಹೊತ್ತಿನ ಹಾಲಿನ ಇಳುವರಿ ನೋಡಬೇಕಾಗುತ್ತದೆ ಎಂದು ತಿಳಿಸಿದರು.

ನಿವೃತ್ತ ಪ್ರಾಧ್ಯಾಪಕ ಡಾ| ಕಲ್ಲೂಳಗಿ ಮಾತನಾಡಿ, ಹೈನುಗಾರಿಕೆಯಲ್ಲಿ ಏಕ ವಾರ್ಷಿಕ ಮತ್ತು ಬಹು ವಾರ್ಷಿಕ, ಏಕದಳ ಮತ್ತು ದ್ವಿದಳ ಮೇವಿನ ಬೆಳೆಗಳು, ಮೇವಿನ ಸಂರಕ್ಷಣೆ, ಮೇವಿನ ಪೌಷ್ಟಿಕರಣ ಮತ್ತು ರಸ ಮೇವು ತಯಾರಿಸುವ ವಿಧಾನ ತಿಳಿಸಿದರು. ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ| ಪರಮೇಶ ಹುಬ್ಬಳ್ಳಿ, ಡಾ| ನರೇಂದ್ರ ಚೌಡಾಳ, ಡಾ| ಎಂ. ಬಿ. ಅಂಗಡಿ ಮತ್ತು ರೈತರು ಇದ್ದರು. ನಂತರ ರೈತರಿಗೆ ಕೇಂದ್ರದ ಹೈನುಗಾರಿಕಾ ಘಟಕ, ಅಝೋಲಾ ಘಟಕ, ಮೇವಿನ ತಾಕು ಮತ್ತು ಎರೆಹುಳು ಗೊಬ್ಬರ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.