ನಗರಸಭೆ ಅಧಿಕಾರಿಗಳಿಗೆ ಡಿಸಿ ತಾಕೀತು
Team Udayavani, Nov 23, 2019, 2:49 PM IST
ಹಾವೇರಿ: ಕುಡಿಯುವ ನೀರು ಪೂರೈಕೆ, ನಗರದ ನಿಯಮಿತ ಸ್ವಚ್ಛತೆ, ಹಾಳಾದ ಬೀದಿ ದೀಪಗಳನ್ನು ಸಕಾಲದಲ್ಲಿ ಅಳವಡಿಸಲು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಾಕೀತು ಮಾಡಿದ್ದಾರೆ.
ಕುಡಿಯುವ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಿಯಮಿತವಾಗಿ ಸ್ವತ್ಛತೆ ಹಾಗೂ ಕ್ಲೋರಿನ್ ಹಾಕಲು ಸೂಚಿಸಿ ನಿಯಮಿತವಾಗಿ ನೀರು ಸರಬರಾಜಿಗೆ ಸೂಚನೆ ನೀಡಿದರು.
ನಗರದ ಬೀದಿ ದೀಪಗಳು ಹಾಳಾದರೂ ಸಕಾಲದಲ್ಲಿ ಅಳವಡಿಸಿಲ್ಲ. ನಗರದ ಬಹು ಕಡೆಗಳಲ್ಲಿ ವಿದ್ಯುತ್ ದೀಪಗಳಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಮೂರು ದಿನಗದೊಳಗಾಗಿ ವಿದ್ಯುತ್ ದೀಪ ಅಳವಡಿಸಬೇಕೆಂದು ಸೂಚನೆ ನೀಡಿದರು.
ಬೀದಿ ಸ್ವಚ್ಛತೆ ಕಾರ್ಯ ಸಮರ್ಪಕವಾಗಿ ಕೈಗೊಳ್ಳಬೇಕು. ಕಾಲುವೆಗಳ ಸ್ವತ್ಛತೆ ನಿಯಮಿತವಾಗಿ ಕೈಗೊಳ್ಳುವುದು ಸೇರಿದಂತೆ ಸಮರ್ಪಕವಾಗಿ ಕಸ ವಿಲೇವಾರಿಗೊಳಿಸುವಂತೆ ಸೂಚಿಸಿದರು. ನಗರಸಭೆ ಕಚೇರಿಯಲ್ಲಿ ಅಧಿ ಕಾರಿ-ಸಿಬ್ಬಂದಿಗಳ ಸಭೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಡತ ವಿಲೇವಾರಿ ಮಾಡಿ, ತೆರಿಗೆ ಸಂಗ್ರಹ ಕಾರ್ಯ ಚುರುಕುಗೊಳಿಸಬೇಕೆಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರಸಭೆಯಿಂದ ಕೈಗೊಳ್ಳಲಾದ ಕಾಮಗಾರಿಗಳ ವಿವಿಧ ಹಂತಗಳ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಪಡೆದು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ಪೌರಾಯುಕ್ತ ಬಸವರಾಜ ಜಿದ್ದಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ