ಸಾಮಾನ್ಯರಂತೆ ಇಂದಿರಾ ಕ್ಯಾಂಟಿನ್ಗೆ ಡಿಸಿ ಭೇಟಿ
Team Udayavani, Jul 9, 2019, 9:17 AM IST
ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಇಂದಿರಾ ಕ್ಯಾಂಟಿನ್ಗೆ ಅನಿರೀಕ್ಷಿತ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲಿಸಿದರು.
ಹಾವೇರಿ: ಇಲ್ಲಿನ ಇಂದಿರಾ ಕ್ಯಾಂಟಿನ್ಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೋಮವಾರ ಅನಿರೀಕ್ಷಿತ ಭೇಟಿ ನೀಡಿ, ಅಹಾರ ಗುಣಮಟ್ಟ ಮತ್ತು ಸ್ವಚ್ಛತೆ ಪರಿಶೀಲಿಸಿದರು.
ಯಾವ ಅಧಿಕಾರಿಗಳಿಗೂ ಮಾಹಿತಿ ನೀಡದೇ ಸಾಮಾನ್ಯರಂತೆ ಇಂದಿರಾ ಕ್ಯಾಂಟಿನ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಪೊಂಗಲ್ ಮತ್ತು ಇಡ್ಲಿ-ವಡಾ ಪಡೆದು ಸೇವಿಸಿ, ಆಹಾರದ ರುಚಿ ಹಾಗೂ ಗುಣಮಟ್ಟ ಪರೀಕ್ಷಿಸಿದರು. ಇದೇ ಸಂದರ್ಭದಲ್ಲಿ ಕ್ಯಾಂಟಿನ್ನ ಆಹಾರ ಸಿದ್ಧಪಡಿಸುವ ಕೋಣೆ, ಆಹಾರ ದಾಸ್ತಾನು ಕೊಠಡಿ ಕ್ಯಾಂಟಿನ್ ಒಳ ಹಾಗೂ ಹೊರ ಭಾಗದಲ್ಲಿ ಸ್ವಚ್ಛತೆ ಕುರಿತಂತೆ ಪರಿಶೀಲಿಸಿದರು. ಗುಣಮಟ್ಟ ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸಲಹೆ ನೀಡಿದರು.
ಜಿಲ್ಲಾಧಿಕಾರಿಗಳು ಇಂದಿರಾ ಕ್ಯಾಂಟಿನ್ಗೆ ಭೇಟಿ ನೀಡಿದ ಸುದ್ದಿ ತಿಳಿದು ನಗರಸಭೆಯ ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು ಕ್ಯಾಂಟಿನ್ಗೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕ್ಯಾಂಟೀನ್ ಗುತ್ತಿಗೆದಾರ ಶೊಯಬ್, ಕ್ಯಾಂಟೀನ್ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕ್ಯಾಂಟೀನ್ ಎದುರು ಸಣ್ಣ ಪಾರ್ಕ್ ಮಾಡಲು ಕೋರಿದರು. ಇದಕ್ಕೆ ಜಿಲ್ಲಾಧಿಕಾರಿ ಕ್ರಮವಹಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?