ಎಪಿಎಂಸಿ ಹಿಂಭಾಗದ ರಸ್ತೆ ನಿರ್ಮಾಣಕ್ಕೆ ಆಗ್ರಹ


Team Udayavani, Dec 14, 2019, 2:08 PM IST

hv-tdy-2

ಬ್ಯಾಡಗಿ: ಪಟ್ಟಣದ ಮೆಣಸಿನಕಾಯಿ ಮಾರುಕಟ್ಟೆಯ (ಎಪಿಎಂಸಿ ಯಾರ್ಡ್‌) ಹಿಂದಿನ ಭಾಗದಲ್ಲಿರುವ ಮುಕ್ತಿಧಾಮದಿಂದ ಗುಮ್ಮನಹಳ್ಳಿ ಹಳ್ಳದವರೆಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಸ್ಥಳೀಯ ವರ್ತಕ ಸಂಘದ ಸದಸ್ಯರು ಶುಕ್ರವಾರ ಎಪಿಎಂಸಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ನಿರ್ದೇಶಕ ಸುರೇಶ ಮೇಲಗಿರಿ ಮಾತನಾಡಿ, ಗುಮ್ಮನಹಳ್ಳಿ ರಸ್ತೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು ಖಾರದಪುಡಿ ಫ್ಯಾಕ್ಟರಿಗಳು ನಿರ್ಮಾಣವಾಗಿವೆ. ಮಲ್ಲೂರ ಹಾಗೂ ಮುಕ್ತಿಧಾಮ ರಸ್ತೆಗಳಲ್ಲಿ ಕೋಲ್ಡ್‌ ಸ್ಟೋರೆಜ್‌ಗಳು ನಿರ್ಮಾಣವಾಗಿವೆ. ನಿತ್ಯವೂ ಸಾವಿರಾರು ಸಂಖ್ಯೆಯ ಚೀಲಗಳನ್ನು ಮಲ್ಲೂರ ಹಾಗೂ ಮುಕ್ತಿಧಾಮ ರಸ್ತೆಗಳಿಂದ ಗುಮ್ಮನಹಳ್ಳಿ ರಸ್ತೆಯ ಖಾರದಪುಡಿ ಫ್ಯಾಕ್ಟರಿಗಳಿಗೆ ಸಾಗಾಟ ನಡೆಯುತ್ತಿದ್ದು, ಇದರಿಂದ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು. ಗೌರವ ಕಾರ್ಯದರ್ಶಿ ಮಹಾಂತೇಶ ಆಲದಗೇರಿ ಮಾತನಾಡಿ, ಇವರೆಡಕ್ಕೂ ಸಂಪರ್ಕ ರಸ್ತೆ ಇಲ್ಲದ ಕಾರಣ ಚೀಲಗಳನ್ನು ತುಂಬಿಕೊಂಡ ನೂರಾರು ವಾಹನಗಳು ಸುಮಾರು 3 ಕಿ.ಮೀ ಹೆಚ್ಚುವರಿ ರಸ್ತೆಯನ್ನು ಸುತ್ತಿ ಬಳಸಿಕೊಂಡು ತೆರಳಬೇಕಾಗಿದೆ. ಇದರಿಂದ ಪಟ್ಟಣದೊಳಗೆಆಗುತ್ತಿರುವ ವಾಹನ ದಟ್ಟಣೆ ಕೂಡ ನಿಯಂತ್ರಣಕ್ಕೆ ಬರಲಿದೆ. ಕೂಡಲೇ ಒಂದು ಕಿ.ಮೀನಷ್ಟು ಸಂಪರ್ಕ ರಸ್ತೆ ನಿರ್ಮಿಸಿಕೊಟ್ಟಲ್ಲಿ ಮೇಲಿನ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸಲಹೆ ನೀಡಿದರು.

ಹನುಮಂತಪ್ಪ ಛತ್ರದ ಮಾತನಾಡಿ, ಮುಕ್ತಿಧಾಮದವರೆಗಿನ ರಸ್ತೆಯು ಪುರಸಭೆಗೆ ವ್ಯಾಪ್ತಿಗೆ ಬರುತ್ತದೆ. ಇನ್ನುಳಿದ ರಸ್ತೆ ಗ್ರಾಮೀಣ ರಸ್ತೆಯಾಗಿದ್ದು ತರೇದಹಳ್ಳಿಯಲ್ಲಿರುವ ಕೃಷಿ ಜಮೀನು ಸಂರ್ಕಿಸುತ್ತಿದ್ದು, ಅದೂ ಸಹ ಕಿಷ್ಕಿಂದೆಯಂತಾಗಿದೆ. ರೈತರಿಗೂ ಸಹ ತಮ್ಮ ಹೊಲಗಳಿಗೆ ಹೋಗಲು ಹಾಗೂ ಬೆಳೆ ಮನೆಗೆ ತರಲು ಹರಸಾಹಸ ಪಡಬೇಕಾಗಿದೆ. ಈ ಎಲ್ಲ ಕಾರಣಗಳಿಂದ ಪುರಸಭೆ ಮತ್ತು ಎಪಿಎಂಸಿಗಳು ಜಂಟಿಯಾಗಿ ಸಂಪರ್ಕ ರಸ್ತೆಯನ್ನು ಅಗಲೀಕರಣ ಮಾಡುವ ಮೂಲಕ ಅಭಿವೃದ್ಧಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಪಿಎಂಸಿ ಅಧ್ಯಕ್ಷ ಕೆ.ಎಸ್‌. ನಾಯ್ಕರ್‌, ಸಂಪರ್ಕ ರಸ್ತೆ ನಿರ್ಮಿಸಲು ಸಮಿತಿಯಲ್ಲಿ ಅವಕಾಶವಿದ್ದರೆ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ವಹಿಸುವುವದಾಗಿ ತಿಳಿಸಿದರು. ಎಪಿಎಂಸಿ ಉಪಾಧ್ಯಕ್ಷ ಉಳಿವೆಪ್ಪ ಕುರವತ್ತಿ, ಸಹಾಯಕ ಕಾರ್ಯದರ್ಶಿ ಫಕ್ಕಿರೇಶ ದೊಡ್ಡಮನಿ, ಪ್ರಭು ದೊಡ್ಡಮನಿ, ರಾಜಶೇಖರ ಲಮಾಣಿ, ವರ್ತಕ ಸಿ.ಆರ್‌. ಆಲದಗೇರಿ, ಎಂ.ಟಿ. ಹಾವೇರಿ, ನಾಗರಾಜ ದೇಸೂರ, ಮಾಲತೇಶ ಅರಳಿಮಟ್ಟಿ, ಅಶೋಕ ಮೂಲಿಮನಿ, ಕೈಲಾಸಯ್ಯ ಆರಾಧ್ಯಮಠ, ರೈತ ಮುಖಂಡ ಬಸವರಾಜ ಸಂಕಣ್ಣನವರ, ಮಲ್ಲೇಶ ಬಣಕಾರ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.