ಅರಣ್ಯ ನಾಶದಿಂದ ಮನುಕುಲ ವಿನಾಶ
•ಪರಿಸರದ ಶಾಪಕ್ಕೆ ಗುರಿಯಾಗುವ ಮೊದಲೇ ಎಚ್ಚೆತ್ತುಕೊಳ್ಳೋಣ•ಅಭಿವೃದ್ಧಿ ಹೆಸರಿನಲ್ಲಿ ಕಾಡು ಕಡಿಯದಿರಿ
Team Udayavani, Jun 6, 2019, 10:09 AM IST
ಹಾನಗಲ್ಲ: ಪರಿಸರ ದಿನಾಚರಣೆ ನಿಮಿತ್ತ ರೋಶನಿ ಶಾಲೆ ಆವರಣದಲ್ಲಿ ಗಿಡ ನೆಡುವ ಮೂಲಕ ಹಿರಿಯ ಸಿವಿಲ್ ನ್ಯಾಯಾಧೀಶೆ ಸುಜಾತಾ ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಾನಗಲ್ಲ: ಪರಿಸರ ನಾಶದಿಂದ ಜಾಗತಿಕ ತಾಪಮಾನ ಸಮತೋಲನ ಕಳೆದುಕೊಳ್ಳುತ್ತಿದೆ. ಕಾಡಿಲ್ಲದೆ ಮಳೆ ಇಲ್ಲ, ಮಳೆ ಇಲ್ಲದೆ ಬರ ಕಾಡುತ್ತಿದೆ, ಅರಣ್ಯ ನಾಶದಿಂದ ವಿನಾಶದತ್ತ ಮಾನವ ಕುಲ ಸಾಗುತ್ತಿರುವುದನ್ನು ಕಂಡೂ ಪರಿಸರ ಜಾಗೃತಿಗೆ ಮುಂದಾಗದೇ ಮಾನವ ಪರಿಸರದ ಶಾಪಕ್ಕೆ ಗುರಿಯಾಗುತ್ತಿದ್ದಾನೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸುಜಾತಾ ಪಾಟೀಲ ಎಚ್ಚರಿಸಿದರು.
ಹಾನಗಲ್ಲಿನ ರೋಶನಿ ಸಮಾಜಸೇವಾ ಸಂಸ್ಥೆ ಆವರಣದಲ್ಲಿ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ರೋಶನಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಂಯುಕ್ತವಾಗಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಭಿವೃದ್ಧಿ ಹೆಸರಿನಲ್ಲಿ ಕಾಡು ಕಡಿದು ಹಸಿರು ನಾಶ ಮಾಡಬೇಡಿ. ಮನೆಗೊಂದು ಮರ ಊರಿಗೊಂದು ವನ ಘೋಷಣೆ ಕಾಗದದಲ್ಲಷ್ಟೇ ಉಳಿಯದೆ ಎಲ್ಲರೂ ಕಡ್ಡಾಯವಾಗಿ ಪಾಲಿಸುವಂತಾಗಬೇಕು. ನಮಗಾಗಿ ಕಾಡು ಉಳಿಸಲು ನಾವೇ ಮುಂದಾಗಬೇಕು ಎಂದರು.
ಸಿವಿಲ್ ನ್ಯಾಯಾಧೀಶರಾದ ಎಫ್.ವಿ. ಕೆಳಗೇರ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಇಂದಿನ ಬರಗಾಲಕ್ಕೆ ಅರಣ್ಯ ನಾಶವೇ ಕಾರಣ. ಕುಡಿಯುವ ನೀರಿಗಾಗಿ ಜನ ಪರದಾಡುವಂತಾಗಿದೆ. ಕೈಗೆಟುಕುವಂತಿದ್ದ ನೀರು ಈಗ ಸಾವಿರ ಅಡಿ ಕೊರೆದರೂ ಸಿಗುತ್ತಿಲ್ಲ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸೋಮಶೇಖರ ಕೋತಂಬರಿ ಮಾತನಾಡಿ, ಪರಿಸರ ನಾಶವಾದರೆ ಮನುಕುಲದ ನಾಶ ಸಮೀಪಿಸುತ್ತಿದೆ ಎಂದರ್ಥ. ಮಾನವ ಪ್ರಕೃತಿ ಆರಾಧಕನಾಗಬೇಕು ವಿನಃ ವಿರೋಧಿಯಾಗಬಾರದು. ಪರಿಸರ ಸಂರಕ್ಷಣೆ ಕಾಯ್ದೆ ಕಡ್ಡಾಯವಾಗಿ ಜಾರಿಗೊಳಿಸಬೇಕು. ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿಗಳು ಸಂಪೂರ್ಣ ನಿಷ್ಕ್ರೀಯರಾಗಿದ್ದಾರೆ. ಈ ಮಂಡಳಿಗಳು ಕ್ರಿಯಾಶೀಲವಾಗಿಲ್ಲ. ಕಾಡು ಉಳಿದರೆ ನಾಡು ಉಳಿಯುತ್ತದೆ. 12 ಲಕ್ಷ ಹೆಕ್ಟೇರ್ ಬಂಜರು ಭೂಮಿ ಕರ್ನಾಟಕದಲ್ಲಿದೆ. ಇಲ್ಲಿ ಗಿಡ ನೆಡುವ ಮೂಲಕ ಪರಿಸರ ಉಳಿಸಲು ಸಹಕಾರಿಯಾಗಬೇಕು ಎಂದರು.
ತಾಪಂ ಇಒ ಚನ್ನಬಸಪ್ಪ ಹಾವಣಗಿ ಅಧ್ಯಕ್ಷತೆವಹಿಸಿದ್ದರು. ನ್ಯಾಯವಾದಿಗಳಾದ ರವಿಬಾಬು ಪೂಜಾರ, ಎಸ್.ಎಂ. ಹಾದಿಮನಿ ಪರಿಸರ ಜಾಗೃತಿ ಕುರಿತು ಉಪನ್ಯಾಸ ನೀಡಿದರು. ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಪರಮೇಶ್ವರ ಪೇಳನವರ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಬಸವರಾಜ ಅರಿಶಿನದ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಂ. ಬೇವಿನಮರದ ಹಾಗೂ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ