ಆಸ್ಪತ್ರೆಗೆ ಕೋಟಿ ರೂ. ಸಾಧನ ವಿತರಣೆ
ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಗುರಿ ; ಅವಶ್ಯವಿದ್ದಲ್ಲಿ ಮಾತ್ರ ರೋಗಿ ಸ್ಥಳಾಂತರ
Team Udayavani, Sep 6, 2022, 4:25 PM IST
ರಾಣಿಬೆನ್ನೂರ: ಜೀವನ್ಮರಣದ ಮಧ್ಯ ಬಳಲುತ್ತಿರುವ ರೋಗಿಗಳ ಜೀವ ರಕ್ಷಣೆ ಹಿತದೃಷ್ಟಿಯಿಂದ ಪಿಕೆಕೆ ಇನ್ಸಿಟ್ಯೂಟಿವ್ ಮತ್ತು ಐಕಾಂಟ್ ಸಂಸ್ಥೆ ಆಶ್ರಯದಲ್ಲಿ ಅಂದಾಜು 1 ಕೋಟಿ ರೂ. ಮೌಲ್ಯದ ಸಾಧನಗಳನ್ನು ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದರು.
ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ನೂತನ ಐಸಿಯು ವಾರ್ಡ್ ಹಾಗೂ ಇತರೆ ಜೀವ ರಕ್ಷಕ ಸಾಧನ ಉದ್ಘಾಟಿಸಿ ಮಾತನಾಡಿದ ಅವರು, ವೆಂಟಿಲೇಟರ್, ಆಕ್ಸಿಜನ್ ಕಿಟ್, ಬೆಡ್ ಸೇರಿದಂತೆ ಇತರ ತುರ್ತು ಪರಿಸ್ಥಿತಿಯಲ್ಲಿ ಹೈಟೆಕ್ ಮಾದರಿಯ ಅಗತ್ಯ ಸಾಧನ ವಿತರಿಸಲಾಗಿದೆ ಎಂದ ಅವರು, ಬಡ ರೋಗಿಗಳು ಹಾಗೂ ಸಾಮಾನ್ಯರ ತುರ್ತು ಆರೋಗ್ಯದ ಹಿತದೃಷ್ಟಿಯಿಂದ ಈ ಸಾಧನ ನೀಡಲಾಗುವುದು. ಅವಶ್ಯವಿದ್ದಲ್ಲಿ ಮಾತ್ರ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದರು.
ಐಕಾಂಟ್ ಸಂಸ್ಥೆಯ ಡಾ| ಶಾಲಿನಿ ನಾಲವಾಡ ಮಾತನಾಡಿ, ರಾಜ್ಯಮಟ್ಟದ ಆಸ್ಪತ್ರೆಯಲ್ಲಿ ಇರಬೇಕಾದ ಜೀವ ರಕ್ಷಕ ಸಾಧನ ಜನರ ಹಿತದೃಷ್ಟಿಯಿಂದ ರಾಣಿಬೆನ್ನೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದೊರಕಿಸಿಕೊಡುವ ಸಂಕಲ್ಪ ಹೊಂದಿರುವ ಪಿಕೆಕೆ ಇನ್ಸಿಟ್ಯೂಟಿವ್ ಸಂಸ್ಥೆ ಅಧ್ಯಕ್ಷ ಪ್ರಕಾಶ ಕೋಳಿವಾಡ ಐಕಾಂಟ್ ಕಂಪನಿ ಸಹಕಾರ ಪಡೆದು ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.
ಪಿಕೆಕೆ ಇನ್ಸಿಟ್ಯೂಟಿವ್ ಅಧ್ಯಕ್ಷ ಪ್ರಕಾಶ ಕೋಳಿವಾಡ ಮಾತನಾಡಿ, ಸಂಸ್ಥೆ ಆರಂಭದಿಂದ ಇಲ್ಲಿವರೆಗೆ ಬಡವರು, ಹಿಂದುಳಿದವರು, ಸಾಮಾನ್ಯರ ಆರೋಗ್ಯದ ಹಿನ್ನೆಲೆಯಲ್ಲಿ ಅನೇಕ ಜನೋಪಯೋಗಿ ಕಾರ್ಯ ಮಾಡಲಾಗಿದೆ. ಆರೋಗ್ಯ ಸಾಧನಗಳು ಹಾಗೂ ರೋಗಿಗಳಿಗೆ ಉಚಿತ ಕಿಟ್ ಮತ್ತು ಆರೋಗ್ಯದ ಸೇವೆ ಮನೆ ಬಾಗಿಲಿಗೆ ಕೊಂಡೊಯ್ಯಲಾಗಿದೆ ಎಂದರು.
ಈ ವೇಳೆ ಡಿಎಚ್ಒ ಎಚ್.ಎಸ್. ರಾಘವೇಂದ್ರಸ್ವಾಮಿ, ಸಾರ್ವಜನಿಕ ಆಸ್ಪತ್ರೆ ಆಡಳಿತಾ ಧಿಕಾರಿ ಡಾ| ಆರ್.ಸಿ. ಪರಮೇಶ್ವರಪ್ಪ, ಡಾ| ರಾಜು ಶಿರೂರು, ಡಾ| ಅನಂತರಡ್ಡಿ, ಡಾ| ಲೀಲಾ, ಡಾ| ಪರಶುರಾಮ, ಡಾ| ಸುಮಾ ಸಾವುಕಾರ, ಎಸ್. ಪಿಲ್ಲರಶೆಟ್ಟಿ, ಡಾ| ನಾಗು ನಿಸ್ಕಾಳ, ಶೇಖಪ್ಪ ಹೊಸಗೌಡ್ರ, ಹೊನ್ನಪ್ಪ ಮುಡದ್ಯಾವಣ್ಣನವರ, ಗಂಗಾಧರ ಬಣಕಾರ, ಪುಟ್ಟಪ್ಪ ಮರಿಯಪ್ಪನರ, ರಾಜಣ್ಣ ಮೋಟಗಿ, ಸಣ್ಣತಮ್ಮಪ್ಪ ಬಾರ್ಕಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!