ಪೆನ್ಶನ್ ಟೆನ್ಶನ್: ಪಿಂಚಣಿ ಹಣ ಸಿಗದೆ ಮನನೊಂದು ನಿವೃತ್ತ ಬಸ್ ಚಾಲಕನೋರ್ವ ಆತ್ಮಹತ್ಯೆ
Team Udayavani, Sep 2, 2020, 11:29 AM IST
ಹಾವೇರಿ: ಪಿಂಚಣಿ ಹಣ ಸಿಗದಿದ್ದಕ್ಕಾಗಿ ನಿವೃತ್ತ ಬಸ್ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬುಧವಾರ ನಗರದ ಬಸ್ ಡಿಪೋ ಬಳಿ ನಡೆದಿದೆ.
ಶಿವಾನಂದಪ್ಪ ಹೂಗಾರ (62) ಎಂಬುವವರು ನಗರದ ಬಸ್ ಡಿಪೋ ಬಳಿಯ ಹೋಟೆಲೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಶಿವಾನಂದಪ್ಪ ಅವರು ಶಿಗ್ಗಾವಿ ಪಟ್ಟಣದ ನಿವಾಸಿಯಾಗಿದ್ದು ಕಳೆದ 1 ವರ್ಷ 8 ತಿಂಗಳಿನಿಂದ ಪಿಂಚಣಿ ಹಣಕ್ಕಾಗಿ ಅಲೆದಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಹಾವೇರಿಯ ಕೇಂದ್ರ ಬಸ್ ನಿಲ್ದಾಣದ ಬಳಿ ಓಡಾಡುತ್ತಿದ್ದ ಶಿವಾನಂದಪ್ಪ ಅವರು ಮನನೊಂದು ಆತ್ಮಹತ್ಯೆ ಎನ್ನಲಾಗುತ್ತಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ