ಜಾನುವಾರುಗಳಿಗೀಗ ರೋಗ ಭೀತಿ


Team Udayavani, Aug 19, 2019, 12:37 PM IST

hv-tdy-1

ಹಾವೇರಿ: ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ಲಸಿಕೆ ಚಿಕಿತ್ಸೆ ನೀಡಲಾಯಿತು.

ಹಾವೇರಿ: ಉಕ್ಕಿ ಹರಿದ ಪ್ರವಾಹದಿಂದ ಜನರು ಮನೆ ಕಳೆದುಕೊಂಡು ಸಂಕಷ್ಟಪಡುತ್ತಿದ್ದರೆ, ಜಾನುವಾರುಗಳು ಸಹ ತಮ್ಮ ನೆಲೆ ಕಳೆದುಕೊಂಡು ವಾರಕ್ಕೂ ಹೆಚ್ಚು ಕಾಲ ಗಾಳಿ-ಮಳೆಗೆ ಮೈಯೊಡ್ಡಿ ಈಗ ಸಾಂಕ್ರಾಮಿಕ ರೋಗ ಭೀತಿಯಲ್ಲಿವೆ.

ನೆರೆಯಿಂದಾಗಿ ಕೊಟ್ಟಿಗೆಗಳಿಗೆ ನೀರು ನುಗ್ಗಿ ಸಾವಿರಾರು ಜಾನುವಾರುಗಳು ಕೆಲ ದಿನ ನೀರಲ್ಲಿಯೇ ನಿಲ್ಲಬೇಕಾಯಿತು. ಕತ್ತಲ ಕೋಣೆ, ಹವಾಮಾನ ವೈಪರಿತ್ಯ, ಆಹಾರ ಕೊರತೆ, ಶುದ್ಧ ನೀರಿನ ಕೊರತೆ ಎದುರಿಸಬೇಕಾಯಿತು. ಕೆಲ ಜಾನುವಾರುಗಳು ಕೊಟ್ಟಿಗೆ ಕುಸಿತದಿಂದ ಸಾವನ್ನಪ್ಪಿದವು. ಇನ್ನು ಕೆಲ ಜಾನುವಾರುಗಳನ್ನು ಎತ್ತರದ ಪ್ರದೇಶ, ಪರಿಹಾರ ಕೇಂದ್ರದ ಬಳಿ ಕಟ್ಟಲಾಯಿತಾದರೂ ಅವುಗಳಿಗೆ ಯಾವುದೇ ನೆಲೆ ಇಲ್ಲದೇ ಗಾಳಿ-ಮಳೆಗೆ ಮೈಯೊಡ್ಡಿ ನಿಲ್ಲಬೇಕಾದ ಪರಿಸ್ಥಿತಿ ಎದುರಿಸಿದವು.

ಜಾನುವಾರುಗಳಿಗೆ ಬೇಕಾದ ಹಸಿರು ಮೇವು, ಮೇವಿನ ಬಣಿವೆ ಸಹ ಜಲಾವೃತವಾಗಿದ್ದರಿಂದ ಜಾನುವಾರುಗಳು ಮೇವಿನ ಸಮಸ್ಯೆ ಎದುರಿಸಿದವು. ಪರಿಹಾರ ಕೇಂದ್ರಗಳಲ್ಲಿ ಜನರಿಗೆ ಕಾಳಜಿ ವಹಿಸಲಾಯಿತೇ ಹೊರತು ಜಾನುವಾರುಗಳ ಮೇವು, ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದಾಗಿ ಜಾನುವಾರುಗಳ ಸ್ಥಿತಿ ದಯನೀಯವಾಗಿತ್ತು.

ರೋಗ ಭೀತಿ: ನೆರೆ ಕಾರಣದಿಂದ ಇಷ್ಟು ದಿನ ಕರುಣಾಜನ ಪರಿಸ್ಥಿತಿಯಲ್ಲಿದ್ದ ಜಾನುವಾರುಗಳಿಗೆ ಈಗ ಸಾಂಕ್ರಾಮಿಕ ಭೀತಿ ಎದುರಾಗಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಬರಬಹುದಾದ ಗಂಟಲುಬೇನೆ, ಚಪ್ಪೆರೋಗ, ನೆರಡಿರೋಗ, ಕಾಲುಬಾಯಿ ಜ್ವರ, ಕೆಚ್ಚಲಬಾವು, ಆಡು, ಕುರಿಗಳಿಗೆ ನೀಲಿನಾಲಿಗೆ ರೋಗ ಸೇರಿದಂತೆ ಇನ್ನಿತರ ರೋಗ ಬಾಧಿಸುವ ಸಾಧ್ಯತೆಯಿದ್ದು, ಜಾನುವಾರು ಪಾಲಕರಲ್ಲಿಯೂ ಜಾನುವಾರುಗಳನ್ನು ಉಳಿಸಿಕೊಳ್ಳುವ ಆತಂಕ ಎದುರಾಗಿದೆ.

635 ಜಾನುವಾರು ಸಾವು: ಪ್ರವಾಹದಿಂದ ಜಿಲ್ಲೆಯಲ್ಲಿ ಒಟ್ಟು 635 ಜಾನುವಾರುಗಳು ಮೃತಪಟ್ಟಿವೆ. ಇದರಲ್ಲಿ 13 ದನ, 6 ಎಮ್ಮೆ, 91 ಕುರಿ, 25 ಆಡು, 500 ಕೋಳಿ ಅಸುನೀಗಿವೆ. ಹಾವೇರಿ ತಾಲೂಕಿನಲ್ಲಿ 3 ದನ, 1 ಎಮ್ಮೆ, 50 ಕುರಿ ಸೇರಿ ಒಟ್ಟು 68 ಪ್ರಾಣಿಗಳು ಮೃತಪಟ್ಟಿವೆ. ಹಿರೇಕೆರೂರು ತಾಲೂಕಿನಲ್ಲಿ ಎರಡು ಕುರಿ ಸತ್ತಿವೆ. ಹಾನಗಲ್ಲ ತಾಲೂಕಿನಲ್ಲಿ ಮೂರು ದನ, 1 ಎಮ್ಮೆ, 14 ಕುರಿ, ಏಳು ಆಡು ಸೇರಿ ಒಟ್ಟು 25 ಪ್ರಾಣಿಗಳು ಮೃತಪಟ್ಟಿವೆ. ರಾಣಿಬೆನ್ನೂರು ತಾಲೂಕಿನಲ್ಲಿ 2 ದನ, 2 ಎಮ್ಮೆ, 5 ಕುರಿ, 1 ಆಡು, 500 ಕೋಳಿ ಸೇರಿ 510 ಪ್ರಾಣಿಗಳು ಸತ್ತಿವೆ. ಶಿಗ್ಗಾವಿ ತಾಲೂಕಿನಲ್ಲಿ 4 ದನ, 20 ಕುರಿ, 3 ಆಡು ಸೇರಿ 27 ಪ್ರಾಣಿಗಳು ಅಸುನೀಗಿವೆ. ಬ್ಯಾಡಗಿ ತಾಲೂಕಿನಲ್ಲಿ ಒಂದು ಎಮ್ಮೆ ಸತ್ತಿದೆ. ಸವಣೂರು ತಾಲೂಕಿನಲ್ಲಿ 1 ದನ, 1 ಎಮ್ಮೆ ಮೃತಪಟ್ಟಿವೆ.

ಹೈನುತ್ಪಾದನೆಯೂ ಕುಸಿತ: ಸರ್ಕಾರವೆನೋ ಜಿಲ್ಲೆಯ ಏಳು ತಾಲೂಕುಗಳಲ್ಲಿ ಗೋಶಾಲೆ, ಮೇವು ಬ್ಯಾಂಕ್‌ ಸ್ಥಾಪಿಸಿದೆಯಾದರೂ ಅದು ಸಮರ್ಪಕ ಪ್ರಮಾಣದಲ್ಲಿ ಸಾಕಾಗದು. ಜಾನುವಾರುಗಳು ರೋಗ ಬಾಧೆ ಸೇರಿದಂತೆ, ಮೇವು ಕೊರತೆ, ಅನಾರೋಗ್ಯ ಕಾರಣದಿಂದ ಹೈನುತ್ಪಾದನೆಯ ಮೇಲೆಯೂ ಗಣನೀಯ ಪ್ರಮಾಣದಲ್ಲಿ ದುಷ್ಪರಿಣಾಮ ಬೀರಿದೆ.

ಒಟ್ಟಾರೆ ನೆರೆಯಿಂದಾಗಿ ಜನರ ಜತೆಗೆ ಜಾನುವಾರುಗಳು ಸಹ ಸಂಕಷ್ಟಕ್ಕೊಳಗಾಗಿ ಈಗ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದು ಅವುಗಳ ರಕ್ಷಣೆಗೆ ಪಶು ಇಲಾಖೆ ಸಮರ್ಪಕ ಕ್ರಮ ಕೈಗೊಳ್ಳಬೇಕಿದೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.