ರಕ್ತದಾನ ಮಾಡಿ ಬೇರೊಂದು ಜೀವ ಕಾಪಾಡಿ

ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ ಸಲಹೆ; ಪ್ರಧಾನಿ ಜನ್ಮದಿನ ಪ್ರಯುಕ್ತ ಯುವ ಮೋರ್ಚಾದಿಂದ ಉಚಿತ ರಕ್ತದಾನ

Team Udayavani, Sep 25, 2022, 4:52 PM IST

19

ಶಿಗ್ಗಾವಿ: ಪ್ರತಿ ಜೀವಿಗೆ ಅಮೂಲ್ಯವಾದ ರಕ್ತದ ಅವಶ್ಯಕತೆಯಿದೆ. ಅವಘಡ, ಅಪಘಾತದ ಸಂದರ್ಭದಲ್ಲಿ ಜೀವ ಬದುಕಿಸಲು ಇನ್ನೊಬ್ಬರಿಂದ ದಾನರೂಪದಲ್ಲಿ ಸಂಗ್ರಹವಾದ ರಕ್ತ ಮತ್ತೆ ಮರು ಜೀವ ತುಂಬುತ್ತದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು.

ಪ್ರಧಾನಿ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ ಪಟ್ಟಣದ ಸವಣೂರು ರಸ್ತೆಯಲ್ಲಿನ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಸಭಾಭವನದಲ್ಲಿ ಶಿಗ್ಗಾವಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ರಕ್ತ ಎಂದರೆ ಜೀವಿಯ ದೇಹದ ಶಕ್ತಿ. ಅದೊಂದು ಜೀವ. ಆದ್ದರಿಂದ ಮತ್ತೂಂದು ಜೀವಕ್ಕೆ ಜೀವ ಕೊಡುವ ಶಕ್ತಿ ಅದಾಗಿದೆ. ನಾವು ಮಾಡುವ ರಕ್ತದಾನ ಮಹಾಪುಣ್ಯದ ಕೆಲಸ ಎಂದರು.

ಶಿಗ್ಗಾವಿ ಮಹಿಳಾ ಮೋರ್ಚಾ ವಿಶೇಷವಾಗಿ ಸತತ ಏಳು ದಿನಗಳ ಕಾಲ ಮೋದಿ ಅವರ ಜನ್ಮದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ. ಜೊತೆಗೆ ಎಲ್ಲ ಮೋರ್ಚಾಗಳಿಂದ ವಿವಿಧ ಸಮಾಜಮುಖೀ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಆರೋಗ್ಯ ಸೇವೆಗೆ ಮುಂದಾಗಿದ್ದೇವೆ. ಸಿಎಂ ಬೊಮ್ಮಾಯಿ ಅವರ ಸ್ಫೂರ್ತಿಯಿಂದ ಅವರ ಅನುಪಸ್ಥಿತಿಯಲ್ಲಿ ಇಂತಹ ಕಾರ್ಯಗಳನ್ನು ಕ್ಷೇತ್ರದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಹಾವೇರಿ ವೈದ್ಯಕೀಯ ರಕ್ತ ನಿಧಿ ಕೇಂದ್ರದ ಡಾ|ಬಸವರಾಜ ತಳವಾರ ಮಾತನಾಡಿ, ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ರಕ್ತದಾನ ಮಾಡಲು ಆದೇಶ ನೀಡಲಾಗಿದೆ. ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರ ಹಮ್ಮಿಕೊಂಡು ಅರ್ಥ ಪೂರ್ಣವಾಗಿ ಆಚರಿಸಬೇಕು. ಹೆಚ್ಚು ರಕ್ತ ಸಂಗ್ರಹ ಶಿಗ್ಗಾವಿ ಕ್ಷೇತ್ರದಿಂದ ಆಗಿದೆ. ಆರೋಗ್ಯವಂತರು ರಕ್ತದಾನ ಮಾಡಿ ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸೋಣ. ಪ್ರತಿ ವರ್ಷ ಆರೋಗ್ಯ ಇಲಾಖೆಗೆ 8000 ಯೂನಿಟ್‌ ರಕ್ತದ ಬೇಡಿಕೆ ಬರುತ್ತಿದೆ. ಹಾಗಾಗಿ, ಎಲ್ಲರೂ ರಕ್ತದಾನ ಮಾಡಲು ಸಹಕರಿಸಬೇಕೆಂದರು.

ಪುರಸಭೆ ಅಧ್ಯಕ್ಷೆ ರೂಪಾ ಬನ್ನಿಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಶಿವರಾಜ ರಾಯಣ್ಣವರ, ರಾಜ್ಯ ಯುವಮೋರ್ಚಾ ಸದಸ್ಯ ನರಹರಿ ಕಟ್ಟಿ, ಕೆಎಂಎಫ್‌ ನಿರ್ದೇಶಕ ಬಸವನಗೌಡ ಮೇಲಿನಮನಿ, ಶರೀಫಸಾಬ ನದಾಫ್‌, ದೇವಣ್ಣ ಚಾಕಲಬ್ಬಿ, ಶಿವಾನಂದ ಸೊಬರದ, ಉಮೇಶಣ್ಣ ಅಂಗಡಿ, ಪ್ರತೀಕ ಕೊಳೇಕರ, ಕಾಶೀನಾಥ ಕಳ್ಳೀಮನಿ, ವಿನಯ ಮುಂಡಗೋಡ, ಮಂಜುನಾಥ ಮಿರ್ಜಿ, ಪ್ರಥಮ ದರ್ಜೆ ಗುತ್ತಿಗೇದಾರ ಗದಿಗೇಶ ಓಲೇಕಾರ, ಸಂಜೀವ ಬಾರೀಗಿಡದ, ರಾಜೇಶ ಬಡ್ಡಿ, ರಾಜೇಶ ಟೋಪಣ್ಣವರ, ಸಿದ್ದು ಅಕ್ಕಿ, ರತ್ನಾ ಬನ್ನಿಕೊಪ್ಪ, ನಿರ್ಮಲಾ ಯಡೆಪ್ಪನವರ, ಭಾರತಿ ರಾಮಪೂರಮಠ, ಈರಮ್ಮ ಮಲ್ಲಾಡದ ಸೇರಿದಂತೆ ಹಾವೇರಿ ವೈದ್ಯಕೀಯ ರಕ್ತನಿಧಿ ಕೇಂದ್ರದ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಿಲ್ಲಾದ್ಯಂತ ರಕ್ತ ಸಂಗ್ರಹಣೆ ಮಾಡಲು ಸಿಬ್ಬಂದಿಗೆ ರಕ್ತನಿಧಿ ವಾಹನದ ಅಗತ್ಯವಿದೆ. ಈ ಕುರಿತು ಈಗಾಗಲೇ ಲಿಖೀತವಾಗಿ ಮತ್ತು ಮೌಖೀಕವಾಗಿ ಸಿಎಂ ಅವರಲ್ಲಿ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಕ್ತನಿಧಿ ವಾಹನ ನೀಡಿ ಅನುಕೂಲ ಮಾಡಿಕೊಡಬೇಕು. –ಬಸವರಾಜ ಕಮತರ, ವೈದ್ಯಕೀಯ ರಕ್ತನಿಧಿ ಕೇಂದ್ರ, ಹಾವೇರಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.