ನೆರೆಯಿಂದ ಕಲಿಕೆಗೆ ತೊಂದರೆಯಾಗದಿರಲಿ

•ತಾತ್ಕಾಲಿಕ ತಗಡಿನ ಶೆಡ್‌ ನಿರ್ಮಾಣಕ್ಕೆ ಸಿದ್ಧತೆ •ಸರ್ಕಾರಿ ಜಮೀನು ಸಿಗದಿದ್ದರೆ ಖಾಸಗಿ ಜಮೀನಿನಲ್ಲೇ ನಿರ್ಮಾಣ

Team Udayavani, Aug 14, 2019, 1:25 PM IST

hv-tdy-2

•ತಾತ್ಕಾಲಿಕ ತಗಡಿನ ಶೆಡ್‌ ನಿರ್ಮಾಣಕ್ಕೆ ಸಿದ್ಧತೆ •ಸರ್ಕಾರಿ ಜಮೀನು ಸಿಗದಿದ್ದರೆ ಖಾಸಗಿ ಜಮೀನಿನಲ್ಲೇ ನಿರ್ಮಾಣ

ಹಾವೇರಿ: ಪ್ರವಾಹದಿಂದ ಮನೆಗಳು ಹಾನಿಯಾಗಿ ವಾಸಿಸಲು ಇನ್ನೂ ಸಿದ್ಧವಾಗದ ಕಾರಣ ಹಾಗೂ ಪರಿಹಾರ ಕೇಂದ್ರಗಳ ಸ್ಥಾಪನೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ ಪರ್ಯಾಯ ಕ್ರಮವಾಗಿ ಜಿಲ್ಲಾಡಳಿತ ಸಂತ್ರಸ್ತರಿಗೆ ತಾತ್ಕಾಲಿಕ ತಗಡಿನ ಶೆಡ್‌ ನಿರ್ಮಾಣ ಮಾಡಿಕೊಡಲು ಸಿದ್ಧತೆ ನಡೆಸಿದೆ.

ಪ್ರವಾಹ ಕಡಿಮೆಯಾದರೂ ಬಹಳಷ್ಟು ಗ್ರಾಮಗಳ ಮನೆಗಳಲ್ಲಿ ತತಕ್ಷಣದಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ನೆರೆಹಾವಳಿ ಗ್ರಾಮಗಳಲ್ಲಿ ಪರ್ಯಾಯವಾಗಿ ಶೆಡ್‌ ನಿರ್ಮಾಣಕ್ಕೆ ಸ್ಥಳ ಗುರುತಿಸುವ ಕಾರ್ಯ ನಡೆದಿದೆ. ಗ್ರಾಮಗಳ ಎತ್ತರ ಪ್ರದೇಶದ ಸರ್ಕಾರಿ ಜಮೀನು ಅಥವಾ ಸರ್ಕಾರಿ ಜಮೀನು ಸಿಗದಿದ್ದರೆ ಖಾಸಗಿ ಜಮೀನನ್ನು ಗುರುತಿಸಿ ಶೆಡ್‌ಗಳ ನಿರ್ಮಾಣ ಮಾಡಿ ಕೊಡಲು ಸಿದ್ಧತೆ ನಡೆಸಲಾಗಿದೆ.

ಮೊದಲ ಹಂತವಾಗಿ ಹಾವೇರಿ ತಾಲೂಕಿನ 11 ಗ್ರಾಮಗಳಲ್ಲಿ ಶೆಡ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಕಾರ್ಯ ಜರುಗಿದೆ. 835 ಶೆಡ್‌ಗಳ ನಿರ್ಮಾಣಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ. ಎರಡು ದಿನದಲ್ಲಿ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ. ಗುಯಿಲಗುಂದಿ, ಹಳೆ ಮೇಲ್ಮುರಿ, ಕೋಣನತಂಬಗಿ, ಕೆಸರಹಳ್ಳಿ, ಸಂಗೂರು, ವರದಾಹಳ್ಳಿ, ನಾಗನೂರು, ಕರ್ಜಗಿ, ಹೊಸರಿತ್ತಿ, ಕಂಚಾರಗಟ್ಟಿ ಹಾಗೂ ಹಳೆ ಕಿತ್ತೂರು ಗ್ರಾಮದಲ್ಲಿ ಶೆಡ್‌ಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ.

97.89 ಕೋಟಿ ನಷ್ಟ: ರಸ್ತೆ, ಸೇತುವೆ, ವಿದ್ಯುತ್‌ ಸಂಪರ್ಕ, ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಹಾನಿಯಾಗಿರುವ ಮೂಲ ಸೌಕರ್ಯಗಳ ಮರು ಸ್ಥಾಪನೆ ಕಾರ್ಯ ನಡೆಯುತ್ತಿದೆ. ಒಟ್ಟಾರೆ 5051 ಮೂಲ ಸೌಕರ್ಯಗಳಿಗೆ ಹಾನಿಯಾಗಿದ್ದು, 97.89 ಕೋಟಿ ರೂ.ನಷ್ಟು ಅಂದಾಜು ನಷ್ಟವಾಗಿದೆ. 7759 ಮನೆಗಳಿಗೆ ಹಾನಿಯಾಗಿದ್ದು, 45.90 ಕೋಟಿ ರೂ.ನಷ್ಟುವಾಗಿದೆ. 102.42 ಕೋಟಿ ರೂ. ನಷ್ಟು ತೋಟಗಾರಿಕೆ ಮತ್ತು ಕೃಷಿ ಭೂಮಿ ಹಾನಿಯಾಗಿದೆ. 2.21 ಕೋಟಿ ರೂ. ಕುಡಿಯುವ ನೀರು, 7.71 ಕೋಟಿ ರೂ. ವಿದ್ಯುತ್‌ ಸಂಪರ್ಕ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ.

ತಂಡ ರಚನೆ: ಮನೆಹಾನಿ ಕುರಿತಂತೆ ಗ್ರಾಮವಾರು ಸಮೀಕ್ಷೆ ನಡೆಸಿ ವಿವರವನ್ನು ಸಂಗ್ರಹಿಸುವಂತೆ ಕಂದಾಯ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ತಂಡ ರಚಿಸಿ ಜಂಟಿ ಸಹಿಯೊಂದಿಗೆ ಹಾನಿಯ ವಿವರವನ್ನು ಸಲ್ಲಿಸಲು ಸೂಚಿಸಲಾಗಿದೆ. ಬೆಳೆಹಾನಿ ಕುರಿತಂತೆ ಕೃಷಿ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆಯ ಸಹಾಯಕ ಹಾಗೂ ಹಿರಿಯ ಸಹಾಯಕ ನಿರ್ದೇಶಕರು, ಕಂದಾಯ ಇಲಾಖಾ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಿ ಗ್ರಾಮವಾರು ಹಾಗೂ ಸರ್ವೇವಾರು ಜಮೀನಿನ ಬೆಳೆ ಹಾನಿ ಕುರಿತಂತೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಆರೋಗ್ಯಕ್ಕೆ ಗಮನ: ಶುದ್ಧ ನೀರಿನ ಪೂರೈಕೆ, ಜನ ಜಾನುವಾರುಗಳ ಸಾಂಕ್ರಾಮಿಕ ರೋಗಗಳ ತಡೆಗೆ ಎಲ್ಲ ಪ್ರಹಾವೋತ್ತರ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಮತ್ತು ಪಶು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸವಣೂರು ತಾಲೂಕಿನ ಕಳಸೂರು, ನದಿನೀರಲಗಿ, ಮಂತಗಿ, ಕೊರಡೂರ, ಕಾರವಾರ ಸಂಪರ್ಕ ರಸ್ತೆ, ನಾಗನೂರ ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಹಲವು ರಸ್ತೆ ಹಾಗೂ ಕುಡಿಯುವ ನೀರಿನ ಘಟಕಗಳ ದುರಸ್ತಿ ಕೈಗೊಳ್ಳಲಾಗಿದೆ

ಆಹಾರ ಸಾಮಗ್ರಿ ಸ್ವೀಕಾರ: ಜಿಲ್ಲಾಡಳಿತ ಮನವಿಗೆ ಸ್ಪಂದಿಸಿದ ಜನರು ಅಕ್ಕಿ, ಬೆಳೆ, ಜೋಳ, ಬಟ್ಟೆ, ಹೊದಿಕೆ , ಅಡುಗೆ ಸಾಮಗ್ರಿಗಳು ಸೇರಿದಂತೆ ವಿವಿಧ ಪದಾರ್ಥಗಳನು ಸಂತ್ರಸ್ತರಿಗೆ ನೆರವಾಗಿ ನೀಡುತ್ತಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಾನಿಗಳು ನೀಡಿದ ಸಾಮಗ್ರಿಗಳನ್ನು ಶಾಸಕ ನೆಹರು ಓಲೇಕಾರ ಹಾಗೂ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸ್ವೀಕರಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.