ಸಾರಿಗೆ ನೌಕರರ ಮುಷ್ಕರ ರಾಜಕೀಯ ಪ್ರೇರಿತ : ಡಾ| ಬಸವರಾಜ ಕೇಲಗಾರ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೂತನ ಉಪಾಧ್ಯಕ್ಷ ಡಾ| ಬಸವರಾಜ ಕೇಲಗಾರ ಆರೋಪ
Team Udayavani, Apr 18, 2021, 6:20 PM IST
ರಾಣಿಬೆನ್ನೂರ: ಸಾರಿಗೆ ನೌಕರರ ಮುಷ್ಕರ ರಾಜಕೀಯ ಪ್ರೇರಿತವಾಗಿದೆ. ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೂತನ ಉಪಾಧ್ಯಕ್ಷ ಡಾ| ಬಸವರಾಜ ಕೇಲಗಾರ ಆರೋಪಿಸಿದರು.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪನವರು ಈಗಾಗಲೇ ಸಾರಿಗೆ ನೌಕರರ 9 ಬೇಡಿಗೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದಾರೆ. ಉಳಿದ ಒಂದು ಬೇಡಿಕೆಯಾದ 6ನೇ ವೇತನ ಯೋಜನೆಯನ್ನು ಸೂಕ್ತ ಸಮಯದಲ್ಲಿ ಈಡೇರಿಸುವುದಾಗಿ ಭರವಸೆ ನೀಡಿದ್ದರೂ ಮುಷ್ಕರ ನಡೆಸುತ್ತಿರುವುದು ಸೂಕ್ತವೇ ಎಂದು ಪ್ರಶ್ನಿಸಿದರು.
ಈಗಾಗಲೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 1600 ಕೋಟಿ ರೂ. ನಷ್ಟದಲ್ಲಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಕಾರ್ಯ ನಿರ್ವಹಿಸಲಾಗುತ್ತಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಬೇಡಿಕೆ ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿರುವುದು ಎಷ್ಟು ಸರಿ? ಸಾರಿಗೆ ನೌಕರರು ನಮ್ಮವರೇ ಇದ್ದು, ಅವರ ಹಿತ ಕಾಯುವುದು ಸಂಸ್ಥೆಯ ಜವಾಬ್ದಾರಿಯಾಗಿದೆ. ಬಡವರು, ಅಂಗವಿಕಲರು, ವಿದ್ಯಾರ್ಥಿಗಳು, ರೋಗಿಗಳು ಸರ್ಕಾರಿ ಬಸ್Õಗಳಲ್ಲಿ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಇವರು ವಿ ಧಿ ಇಲ್ಲದೆ ಖಾಸಗಿ ವಾಹನದಲ್ಲಿ ಪ್ರಯಾಣಿಸುವುದು ಕಷ್ಟಕರ ಸಂಗತಿ ಎಂದರು.
ಪ್ರಸ್ತುತ ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆಯ 4900 ಬಸ್ಗಳು ಹಳ್ಳಿಯ ಜನರ ಪ್ರಯಾಣದ ಆಧಾರಸ್ತಂಭವಾಗಿವೆ. ಈ ಮುಷ್ಕರದಿಂದ ಅವರ ಬದುಕು ದುಬಾರಿಯಾಗಿ ಜೀವನ ಕಷ್ಟಕರವಾಗಿದೆ. ಈ ಎಲ್ಲವನ್ನು ಸಾರಿಗೆ ನೌಕರರು ಗಮನದಲ್ಲಿಟ್ಟುಕೊಂಡು ಕರ್ತವ್ಯಕ್ಕೆ ಹಾಜರಾಗಿ ಬಡ ಪ್ರಯಾಣಿಕರಿಗೆ ನೆರವಾಗಬೇಕೆಂದು ಕೇಲಗಾರ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಚಿವ ಆರ್. ಶಂಕರ, ನಗರಸಭಾ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ದೀಪಕ ಹರಪನಹಳ್ಳಿ, ಕಾರ್ಯದರ್ಶಿ ಅನೀಲ ಸಿದ್ದಾಳಿ, ಜಿ.ಜಿ. ಹೊಟ್ಟಿಗೌಡರ, ಎ.ಬಿ.ಪಾಟೀಲ, ಬಸವರಾಜ ಹುಲ್ಲತ್ತಿ, ರಾಘವೇಂದ್ರ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ