ಮಕ್ಕಳ ಆರೋಗ್ಯ ತಪಾಸಣೆಗೆ ಚಾಲನೆ

ರಾಜ್ಯದಲ್ಲೇ ಪ್ರಥಮವಾಗಿ ಮಕ್ಕಳ ಆರೋಗ್ಯ ರಕ್ಷಣೆಗೆ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ

Team Udayavani, Jun 25, 2021, 10:14 PM IST

24hvr1a

ಹಾವೇರಿ: ಕೋವಿಡ್‌ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆಗಾಗಿ ರಾಜ್ಯದಲ್ಲೇ ಪ್ರಥಮವಾಗಿ ಹಾವೇರಿ ಜಿಲ್ಲೆಯಲ್ಲಿ 16 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಥಳೀಯ ನಾಗೇಂದ್ರನಮಟ್ಟಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಪಾಸಣೆಗೆ ಒಳಗಾದ ಎಲ್ಲ ಮಕ್ಕಳ ಆರೋಗ್ಯ ಮಾಹಿತಿ ಸಂಗ್ರಹಿಸಲಾಗುವುದು. ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಅವರಿಗೆ ಅಗತ್ಯ ವೈದ್ಯಕೀಯ ಉಪಚಾರದ ನಿರ್ವಹಣೆ ಮೂಲಕ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ತಜ್ಞರು ಪಾಲ್ಗೊಂಡು ತಪಾಸಣೆ ನಡೆಸಲಿದ್ದಾರೆ. ಜೂ.25 ರಿಂದ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ಆರಂಭಗೊಳ್ಳಲಿದ್ದು, ಜುಲೈ 30ರೊಳಗಾಗಿ ಜಿಲ್ಲೆಯ 16 ವರ್ಷದೊಳಗಿನ 2.75 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಲಾಗುವುದು. ಮಕ್ಕಳೊಂದಿಗೆ ಶಿಕ್ಷಕರು ಹಾಗೂ ಮಕ್ಕಳ ಪಾಲಕರಿಗೂ ಆರೋಗ್ಯ ತಪಾಸಣೆ ಹಾಗೂ ಕೋವಿಡ್‌ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ. ಮಕ್ಕಳ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ರಕ್ಷಾ ಕವಚದಂತೆ ಈ ಶಿಬಿರ ಆರಂಭಿಸಲಾಗಿದೆ. ತಪಾಸಣೆ ಸಂದರ್ಭದಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್‌, ಪ್ರೋಟಿನ್‌ ಸೇರಿದಂತೆ ರೋಗನಿರೋಧ ಶಕ್ತಿ ಹೆಚ್ಚಿಸುವ ಪೂರಕ ಸಾಮಗ್ರಿಗಳನ್ನು ನೀಡಲಾಗುವುದು ಎಂದರು.

ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ 30 ರಿಂದ 50 ಸಾವಿರ ಮಕ್ಕಳಿವೆ. ಅವರನ್ನು ತಪಾಸಣೆ ಮಾಡಿ, ಅವರ ಬಯೋಡಾಟಾ, ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ನಾಲ್ಕೈದು ತಿಂಗಳು ಮಾನಿಟರ್‌ ಮಾಡಲಾಗುವುದು. ಶಿಕ್ಷಕರು, ಪಾಲಕರು, ವೈದ್ಯಕೀಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ದಣಿವರಿಯದೆ ಕೆಲಸ ಮಾಡಿ ಯಶಸ್ವಿ ಮಾಡಬೇಕೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ನೆಹರು ಓಲೇಕಾರ ಮಾತನಾಡಿ, ರಾಜ್ಯದಲ್ಲೇ ಪ್ರಥಮವಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರ ಕಾಳಜಿಯಿಂದ ಕೋವಿಡ್‌ ಮೂರನೇ ಅಲೆಯ ಪ್ರಭಾವದಿಂದ ಮಕ್ಕಳನ್ನು ರಕ್ಷಿಸಲು ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಮಕ್ಕಳಿಗೆ ಸಣ್ಣ ಜ್ವರ, ನೆಗಡಿ ಬಂದರೂ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸೇರಿಸಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳಿಗೆ ತಮ್ಮ ಮಕ್ಕಳನ್ನು ತಪಾಸಣೆಗೆ ಕರೆದುಕೊಂಡು ಹೋಗಬೇಡಿ. ಮುಂದಿನ ಮೂರು ತಿಂಗಳವರೆಗೆ ಕಡ್ಡಾಯವಾಗಿ ನಿಮ್ಮ ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇದ್ದರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ. ಬೇರೆಯವರ ಮನೆಗೆ ಮಕ್ಕಳನ್ನು ಕಳುಹಿಸಬೇಡಿ. ಶಿಕ್ಷಕರಿಗೆ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿ, ಚಿಕಿತ್ಸೆಗೆ ನೆರವು ಪಡೆಯಿರಿ ಎಂದು ಮನವಿ ಮಾಡಿಕೊಂಡರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಪಂ ಸಿಇಒ ಮಹಮ್ಮದ ರೋಷನ್‌, ಅಪರ ಜಿಲ್ಲಾ ಧಿಕಾರಿ ಎಸ್‌.ಯೋಗೇಶ್ವರ, ಉಪವಿಭಾಗಾಧಿ  ಕಾರಿ ಶಿವಾನಂದ ಉಳ್ಳಾಗಡ್ಡಿ, ಡಿಎಚ್‌ಒ ಡಾ.ಎಚ್‌.ಎಸ್‌. ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್‌.ಹಾವನೂರ, ತಾಲೂಕು ಆರೋಗ್ಯಾಧಿ ಕಾರಿ ಡಾ.ಪ್ರಭಾಕರ ಕುಂದೂರ, ಕ್ಷೇತ್ರ ಶಿಕ್ಷಣಾಧಿ ಕಾರಿ ಎಂ.ಎಚ್‌ .ಪಾಟೀಲ, ನಗರಸಭೆ ಸದಸ್ಯರು, ವಿವಿಧ ಇಲಾಖಾ ಅ ಧಿಕಾರಿಗಳು ಇದ್ದರು.ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಮಕ್ಕಳ ಆರೋಗ್ಯ ತಪಾಸಣೆ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ,

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.