ಶಿಕ್ಷಣಕ್ಕಿದೆ ಮೃಗವನ್ನು ಮನುಷ್ಯನನ್ನಾಗಿಸೋ ಶಕ್ತಿ

ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಜಿ ಅಭಿಮತ

Team Udayavani, May 8, 2022, 3:05 PM IST

16

ಹಾನಗಲ್ಲ: ಬದುಕಿನ ಶಿಕ್ಷಣವನ್ನು ಅನುಭವದಿಂದ ಮಾತ್ರ ಪಡೆಯಲು ಸಾಧ್ಯವಾಗಿದ್ದು, ಶಾಲಾ ಶಿಕ್ಷಣ ಇದಕ್ಕೆ ಸಹಕಾರಿ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ತಿಳಿಸಿದರು.

ಪಟ್ಟಣದ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಕ ವಿದ್ಯಾರ್ಥಿ ಸಂಘ, ವಿವಿಧ ವಿಷಯವಾರು ಸಂಘಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಿಕ್ಷಣಕ್ಕೆ ಮೃಗವನ್ನು ಮನುಷ್ಯನನ್ನಾಗಿಸುವ ಶಕ್ತಿಯಿದೆ. ಆದ್ದರಿಂದ, ಸಮರ್ಥ ಶಿಕ್ಷಣ ಪಡೆದ ವ್ಯಕ್ತಿಗಳಿಂದ ಸಮರ್ಥ ಸಮಾಜ ನಿರ್ಮಾಣವಾಗಲು ಸಾಧ್ಯ. ಸರಿಯಾದ ರೀತಿಯಲ್ಲಿ ಶಿಕ್ಷಣ ಪಡೆದು ಸಮಾಜ ತಿದ್ದುವ ಕಾಯಕ ಮಾಡಬೇಕು. ಇಂದು ವ್ಯಕ್ತಿಗಳು ವಿಷಯವನ್ನು ಕೇಳುವ ವ್ಯವದಾನವನ್ನೇ ಕಳೆದುಕೊಂಡು ಬಿಟ್ಟಿದ್ದಾರೆ. ಆದರೆ, ಹಾಗಾಗಬಾರದು. ಗುರುಗಳು ಹೇಳುವ ವಿಷಯವನ್ನು ಕೇಳುವ ವ್ಯವದಾನವನ್ನು ಪ್ರತಿಯೊಬ್ಬರೂ ಹೊಂದಿರಬೇಕು. ಇಲ್ಲದಿದ್ದರೆ ವಿಷಯ ಆಲಿಸುವ ಅಭಾವದಿಂದ ಸಮಾಜದಲ್ಲಿ ಅಲ್ಲೋಲ್ಲ ಕಲ್ಲೋಲವೇ ಆಗಬಹುದು. ಹಾಗಾಗಿ, ವಿಷಯವನ್ನು ಸರಿಯಾಗಿ ಕೇಳಿ ಮಾತನಾಡುವ ರೀತಿಯನ್ನು ಕಲಿಯಬೇಕಾಗಿದೆ ಎಂದು ತಿಳಿಸಿದರು.

ಹಾನಗಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌. ಎನ್‌.ಹುರುಳಿ ಮುಖ್ಯ ಅತಿಥಿಯಾಗಿ ಮಾತನಾಡಿ, ಸರಿಯಾದ ಮಾರ್ಗದರ್ಶನದಿಂದ ಸರಿಯಾದ ವ್ಯಕ್ತಿಗಳನ್ನು ನಿರ್ಮಾಣ ಮಾಡಲು ಸಾಧ್ಯ. ಸರಿ ದಾರಿ ತೋರುವ ಗುರು ಹಾಗೂ ಶಿಕ್ಷಣ ಸಂಸ್ಥೆಯನ್ನು ಹುಡುಕಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಶಿಕ್ಷಕ ಶ್ರೀಕಾಂತ ಹುಲ್ಮನಿ, ಶಿಕ್ಷಕ ರಾಷ್ಟ್ರ ಕಟ್ಟುವ ಸಾರಥಿ. ಅವನ ನುಡಿಯೇ ಸಮಾಜಕ್ಕೆ ಪ್ರೇರಣೆ. ಜಗತ್ತಿನಲ್ಲಿ ಪ್ರತಿಯೊಂದು ರಾಷ್ಟ್ರಗಳು ಪೈಪೋಟಿಗೆ ಇಳಿಯಲು ಕಾರಣ ಶಿಕ್ಷಣ. ಅದಕ್ಕೆ ಯಾವ ರಾಷ್ಟ್ರದಲ್ಲಿ ಸಮರ್ಥ ಶಿಕ್ಷಕರು ಇರುತ್ತಾರೋ ಆ ರಾಷ್ಟ್ರ ಜಗತ್ತಿನ ಶ್ರೇಷ್ಟ ರಾಷ್ಟ್ರವಾಗುವುದರಲ್ಲಿ ಎರಡು ಮಾತಿಲ್ಲ ಎಂದರು.

ಡಾ|ಪ್ರಕಾಶ ಹುಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಡಾ|ಸದಾಶಿವಪ್ಪ ಎನ್‌. ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಂ.ಬಿ.ನಾಯ್ಕ, ಸಲಹಾ ಮಂಡಳಿ ಸದಸ್ಯರಾದ ಗುರುಸಿದ್ದಪ್ಪ ಕೊಂಡೊಜ್ಜಿ, ಪ್ರಧಾನ ಕಾರ್ಯದರ್ಶಿ ಕು. ಸಹನಾ ಹೊಂಬಳಿ, ಪ್ರೊ. ರಾಘವೇಂದ್ರ ಮಾಡಳ್ಳಿ, ಡಾ| ವಿಶ್ವನಾಥ ಬೊಂದಾಡೆ, ಜೀತೇಂದ್ರ ಜಿ.ಟಿ., ಡಾ|ರುದ್ರೇಶ ಬಿ.ಎಸ್‌., ಡಾ|ಪ್ರಕಾಶ ಜಿ.ವಿ., ದಿನೇಶ ಆರ್‌., ಎಂ.ಎಂ.ನಿಂಗೋಜಿ, ಎಸ್‌.ಸಿ.ವಿರಕ್ತಮಠ, ಕಳೆದ ಸಾಲಿನಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಸಂದೀಪ ಹೊಂಕಣ ಹಾಗೂ ಪರ್ಜಿನ್‌ ಇತರರು ಭಾಗವಹಿಸಿದ್ದರು. ಜಯಶ್ರೀ ಎಸ್‌. ಪ್ರಾರ್ಥಿಸಿ, ಎಂ.ವಿ.ಪೂರ್ಣಿಮಾ ಸ್ವಾಗತಿಸಿ, ಪದ್ಮಾವತಿ ಬನವಾಸಿ ಅತಿಥಿಗಳನ್ನು ಪರಿಚಯಿಸಿದರು.

ಕಾಂಚನಾ ಮತ್ತು ಸಂಗಡಿಗರು ವಚನ ನೃತ್ಯ ಮಾಡಿದರು. ಸುಮಾ ವಿ.ಕೆ. ಮತ್ತು ಲಕ್ಷ್ಮೀ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.