ಶಿಕ್ಷಣ ಬೆಲೆ ಕಟ್ಟಲಾಗದ ಅಮೂಲ್ಯ ವಸ್ತು: ಕೃಷಿ ಸಚಿವ ಬಿ.ಸಿ.ಪಾಟೀಲ
ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಭವಿಷ್ಯ ಉಜ್ವಲಗೊಳಿಸಿ: ಕೃಷಿ ಸಚಿವ ಬಿ.ಸಿ.ಪಾಟೀಲ ಸಲಹೆ
Team Udayavani, Jun 24, 2022, 1:35 PM IST
ಹಿರೇಕೆರೂರ: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಅಮೂಲ್ಯ ವಸ್ತು. ಅದನ್ನು ಬಾಲ್ಯಾವಸ್ಥೆಯಲ್ಲೇ ಸಂಪಾದಿಸಬೇಕು. ಹೀಗಾಗಿ, ಎಲ್ಲರೂ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಅವರ ಭವಿಷ್ಯ ಉಜ್ವಲಗೊಳಿಸಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ತಾಲೂಕಿನ ದೂಪದಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ನಿರ್ಮಾಣವಾದ ಶಾಲಾ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗಳು ಸುಗಮವಾಗಿ ಸಾಗಲು ಶೈಕ್ಷಣಿಕ ಸೌಲಭ್ಯಗಳು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಶಿಕ್ಷಣ ಪಡೆದು ದೇಶಕ್ಕೆ ಕೀರ್ತಿ ತರಬೇಕೆಂದರು.
ರೈತರು ಸಾವಯವ ಕೃಷಿ ಪದ್ಧತಿಯಲ್ಲಿ ಸಮಗ್ರ ಬೆಳೆ ಬೆಳೆದಾಗ ಮಾತ್ರ ಆರ್ಥಿಕ ಸಫಲತೆ ಕಾಣಲು ಸಾಧ್ಯ. ಕೃಷಿಯ ಜೊತೆಗೆ ಉಪಕಸುಬುಗಳನ್ನು ಮಾಡಿದರೆ ಕೃಷಿಯಲ್ಲಾಗುವ ನಷ್ಟವನ್ನು ಸರಿದೂಗಿಸಬಹುದು ಎಂದರು.
ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲೂ ಜಾತೀಯತೆ, ಬಡವ-ಶ್ರೀಮಂತ ಎಂಬ ತಾರತಮ್ಯಗಳಿವೆ. ಆದರೆ ಎಲ್ಲರನ್ನೂ ಸರಿಸಮಾನವಾಗಿ ಕಾಣುವ ಏಕೈಕ ಮಂದಿರವೇ ಸರ್ಕಾರಿ ಶಾಲೆಗಳು. ನಾವು ಗಳಿಸಿದ ಆಸ್ತಿ ಕೆಲವೊಮ್ಮೆ ಯಾರಧ್ದೋ ಪಾಲಾಗಬಹುದು. ಆದರೆ, ನಾವು ಪಡೆದ ಶಿಕ್ಷಣ ನಮ್ಮನ್ನು ಕೊನೆಯವರೆಗೂ ರಕ್ಷಿಸುತ್ತದೆ ಎಂದರು.
ತಹಶೀಲ್ದಾರ್ ಅರುಣಕುಮಾರ ಕಾರಗಿ, ಬಿಇಒ ಶ್ರೀಧರ್ ಎನ್., ಗ್ರಾಪಂ ಅಧ್ಯಕ್ಷೆ ಶಾಂತವ್ವ ಸೊಟ್ಟಪ್ಪನವರ, ಸದಸ್ಯರಾದ ಜಯಪ್ಪ ಅಂಗಡಿ, ಅನಸೂಯಮ್ಮ ಮಡಿವಾಳರ, ಮುಖ್ಯ ಶಿಕ್ಷಕ ಸುರೇಶ ವಡ್ಡರ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು, ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency