ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸುವ ಪ್ರಯತ್ನ


Team Udayavani, Jan 23, 2022, 12:41 PM IST

ದೆತಯುತಕಜಹಗ್ದಸಅ

ಹಾವೇರಿ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಅತ್ಯಂತ ಮಹತ್ವದ ಘಟ್ಟವಾಗಿದ್ದು, ಕೊರೊನಾ ಕಾಲದ ಈ ವಿಷಮ ಪರಿಸ್ಥಿತಿಯಲ್ಲಿ ರಸಪ್ರಶ್ನೆಗಳಂತಹ ಕಾರ್ಯಕ್ರಮಗಳು ಪರೀಕ್ಷೆಯ ಯಶಸ್ಸಿಗೆ ಸಹಕಾರಿಯಾಗಲಿವೆ. ಅಲ್ಲದೇ ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ನೆರವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌. ಪಾಟೀಲ ಹೇಳಿದರು.

ನಗರದ ಜಿಲ್ಲಾ ಗುರುಭವನದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆ ವತಿಯಿಂದ ಸಂವಿಧಾನ ಜಾರಿಗೆ ಬಂದ ದಿನದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೊರೊನಾ ನಮ್ಮ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಪ್ರತಿಕೂಲ ಪ್ರಭಾವ ಬೀರಿದ್ದು, ಮಕ್ಕಳು ಕಲಿಕೆಯಿಂದ ದೂರವಾಗುತ್ತಿದ್ದು, ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಇಂಥ ಸ್ಥಿತಿಯು ಶಿಕ್ಷಣ ಇಲಾಖೆಗೆ ಸವಾಲಾಗಿದ್ದು, ಸ್ಪರ್ಧಾತ್ಮಕ ಕಲಿಕಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸಿ ಶೈಕ್ಷಣಿಕ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ಹೇಳಿದರು.

ವಿಷಯ ಪರಿವೀಕ್ಷಕ ಮಂಜಪ್ಪ ಆರ್‌. ಮಾತನಾಡಿ, ಕಳೆದ ವರ್ಷ ಜಿಲ್ಲಾ ಫಲಿತಾಂಶವು ಎ ಶ್ರೇಣಿಯನ್ನು ಹೊಂದಿದ್ದು, ರಸಪ್ರಶ್ನೆಯಂತಹ ಸ್ಪರ್ಧೆಗಳಿಂದ ಗುಣಮಟ್ಟದಲ್ಲಿ ಗಣನೀಯವಾಗಿ ಸುಧಾರಣೆ ಕಂಡುಬರುತ್ತದೆ. ಶಾಲಾ ಹಂತದಿಂದ ಜಿಲ್ಲಾ ಹಂತದವರೆಗೆ ಈ ಸ್ಪರ್ಧೆಗಳು ನಡೆದಿರುವುದರಿಂದ ಫಲಿತಾಂಶ ಸುಧಾರಣೆ ಜೊತೆಗೆ ಜಿಲ್ಲೆಯಿಂದ ಉತ್ತಮ ಪ್ರತಿಭೆಗಳು ಹೊರಹೊಮ್ಮುತ್ತಿದ್ದು, ನೂರಕ್ಕೆ ನೂರು ಅಂಕ ಗಳಿಸಲು ಸಹಾಯಕವಾಗುತ್ತವೆ ಎಂದರು.

ಶಿಕ್ಷಣ ಸಂಯೋಜಕ ಚಂದ್ರಗೌಡ ಪಾಟೀಲ, ರವಿ ಆಹೇರಿ ಹಾಗೂ ಬಸವರಾಜ ಸಾಂಗೋಲಿ ಕ್ವಿಜ್‌ ಕಾರ್ಯಕ್ರಮ ನಡೆಸಿಕೊಟ್ಟರು. ಶಿರಬಡಗಿ ಸರಕಾರಿ ಪ್ರೌಢಶಾಲೆಯ ನಾಗರಾಜ ಬಿದರಳ್ಳಿ ಪ್ರಥಮ, ಜೇಕಿನಕಟ್ಟಿಯ ಕಿತ್ತೂರು ರಾಣಿಚನ್ನಮ್ಮ ವಸತಿ ಶಾಲೆಯ ನಿಖೀತಾ ಕೊಟೆ ದ್ವಿತೀಯ ಹಾಗೂ ಮೋಟೆಬೆನ್ನೂರಿನ ಕಳಸೂರಮಠ ಪ್ರೌಢಶಾಲೆಯ ಪವಿತ್ರಾ ಚರಂತಿಮಠ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ನಗದು ಬಹುಮಾನ ಮತ್ತು ಪಾರಿತೋಷಕ ನೀಡಲಾಯಿತು. ತಾಲೂಕು ಮಟ್ಟದಲ್ಲಿ ಉತ್ತಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ವಿಷಯ ಪರಿವೀಕ್ಷಕ ಈರಪ್ಪ ಲಮಾಣಿ, ದೈಹಿಕ ಶಿಕ್ಷಣಾಧಿಕಾರಿ ನಾಗರಾಜ ಇಚ್ಚಂಗಿ, ಶಿಕ್ಷಣ ಸಂಯೋಜಕ ಸಿಕಂದರ ಮುಲ್ಲಾ, ಪಾಂಡುರಂಗ ಪೂಜಾರ, ಸಿ.ಜಿ. ಚಿಕ್ಕಮಠ, ಸಿ.ಎಸ್‌. ಮರಳಿಹಳ್ಳಿ, ಸಿ.ಟಿ. ಪೂಜಾರ, ಕೆ.ಬಿ. ಚನ್ನಪ್ಪ, ಬಸನಗೌಡ ಪಾಟೀಲ, ಮೇಘರಾಜ್‌ ಮಾಳಗಿಮನಿ, ಎಂ.ಎಂ. ಗೌಡ, ಷಣ್ಮುಖ ಜಿ.ಎಚ್‌. ದೇವೇಂದ್ರಪ್ಪ ಬಿಸಲಹಳ್ಳಿ, ಸವಿತಾ ಕಲಕೇರಿ, ಎಫ್‌.ಎಚ್‌. ಕೊರಗರ ಇತರರಿದ್ದರು. ಎಸ್‌.ವಿ. ಕಪ್ಪರದ ಪ್ರಾರ್ಥಿಸಿದರು. ಜಿಲ್ಲಾ ಸವಿ ವೇದಿಕೆ ಅಧ್ಯಕ್ಷ ಸಿ.ಜಿ. ಚಿಕ್ಕಮಠ ಸ್ವಾಗತಿಸಿದರು. ಶಿವರಾಜ ಅಡರಕಟ್ಟಿ ನಿರೂಪಿಸಿದರು. ಶಿವಬಸವ ಮರಳಿಹಳ್ಳಿ ವಂದಿಸಿದರು.

 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.